Fake news:ಹಸಿರು ಕ್ರಾಂತಿಯ ಹರಿಕಾರ ಡಾ. ಸ್ವಾಮಿನಾಥನ್ ನಿಧನ ಸುದ್ದಿ ಸುಳ್ಳು
ಚೆನ್ನೈ, ಮೇ 24: ಭಾರತೀಯ ಹಳ್ಳಿಗರ ಆರ್ಥಿಕ ಸ್ವಾವಲಂಬನೆ, ಕೃಷಿ ಕ್ಷೇತ್ರದ ಬೆಳವಣಿಗೆ, ರೈತರ ಹಿತ ಕಾಪಾಡುವಲ್ಲಿ ನಿರಂತರವಾಗಿ ತೊಡಗಿರುವ ಹೆಮ್ಮೆಯ ವಿಜ್ಞಾನಿ, ಹಸಿರು ಕ್ರಾಂತಿಯ ಹರಿಕಾರ ಡಾ. ಎಂ.ಎಸ್.ಸ್ವಾಮಿನಾಥನ್ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಹಬ್ಬಿದೆ.
ಆದರೆ, ಇದು ಸುಳ್ಳು ಸುದ್ದಿ, ಸ್ವಾಮಿನಾಥನ್(94) ಅವರು ಆರೋಗ್ಯವಾಗಿದ್ದಾರೆ ಎಂದು ಎಂಎಸ್ ಸ್ವಾಮಿನಾಥನ್ ಟ್ರಸ್ಟ್ ಸ್ಪಷ್ಟಪಡಿಸಿದೆ.

''ಕೃಷಿ ವಿಜ್ಞಾನಿ ಡಾ|| ಎಂ. ಎಸ್. ಸ್ವಾಮಿನಾಥನ್ ನಿಧನರಾಗಿದ್ದಾರೆ'' ಎಂದು ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ ಶ್ರದ್ಧಾಂಜಲಿ ಅರ್ಪಿಸಿದ್ದು ಗೊಂದಲ ಹೆಚ್ಚಾಗುವಂತೆ ಮಾಡಿತ್ತು.

ಆದರೆ, ನಂತರ ತಪ್ಪಿನ ಅರಿವಾಗಿ, ಹಳೆ ಟ್ವೀಟ್ ಡಿಲೀಟ್ ಮಾಡಿ, ಕ್ಷಮೆಯಾಚಿಸಿ ಮತ್ತೊಂದು ಟ್ವೀಟ್ ಮಾಡಿ ವಿಷಾದ ವ್ಯಕ್ತಪಡಿಸಿದ್ದಾರೆ.

ಆದರೆ, ಟ್ವೀಟ್ ವೊಂದಕ್ಕೆ ಪ್ರತಿಕ್ರಿಯಿಸಿರುವ ಎಂಎಸ್ ಸ್ವಾಮಿನಾಥನ್ ಟ್ರಸ್ಟ್ (@mssrf) ಡಾ.ಎಂಎಸ್ ಎಸ್ ಆರೋಗ್ಯವಾಗಿದ್ದು, ಸಕ್ರಿಯವಾಗಿ ತಮ್ಮ ದೈನಂದಿನ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದೆ.
1990ರಲ್ಲಿ ಚೆನ್ನೈನಲ್ಲಿ ಸ್ಥಾಪನೆಯಾದ ಎಂ. ಎಸ್. ಸ್ವಾಮಿನಾಥನ್ ರಿಸರ್ಚ್ ಫೌಂಡೆಶನ್ ಸಂಸ್ಥೆಯು ಟ್ವಿಟ್ಟರಲ್ಲಿ ಬಂದಿರುವ ಸುಳ್ಳು ಸುದ್ದಿಯನ್ನು ಅಲ್ಲಗೆಳೆದಿದೆ.
Prof Swaminathan is fine please and attending to his routine work as usual.
— MSSRF (@mssrf) May 24, 2020
ಕೃಷಿ ವಿಜ್ಞಾನಿ ದೇಶದ ಕೃಷಿ ಕ್ಷೇತ್ರದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ ಹಸಿರು ಕ್ರಾಂತಿಯ ಡಾ|| ಎಂ. ಎಸ್. ಸ್ವಾಮಿನಾಥನ್ ಅವರು , ಭಾರತ ದೇಶವನ್ನು ಎಲ್ಲ ರೀತಿಯ ಆಹಾರ ಧಾನ್ಯಗಳ ಆಮದುಗಳಿಂದ ಮುಕ್ತವಾಗಿಸಬೇಕೆಂಬ ಆಶಯ ಹೊಂದಿದವರು. ಆಧುನಿಕ ಬೇಸಾಯ ಪದ್ಧತಿಗಳ ಅಳವಡಿಕೆಯಿಂದಾಗುವ ಪ್ರಯೋಜನಗಳನ್ನು ರೈತಾಪಿ ಜನರಿಗೆ ಮನನ ಮಾಡಿಕೊಡುವುದಕ್ಕಾಗಿ ಡಾ. ಸ್ವಾಮಿನಾಥನ್ ಸಿದ್ದಪಡಿಸಿದ ವರದಿ, ಗೋಧಿ ಉತ್ಪಾದನೆಯನ್ನು ಆದ ಕ್ರಾಂತಿ ಎಲ್ಲವೂ ಭಾರತವನ್ನು ಆಹಾರ ಸ್ವಾವಲಂಬನೆ ಸಾಧಿಸುವ ದಿಕ್ಕಿನಲ್ಲಿ ಸಾಗುವಂತೆ ಮಾಡಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications