ಶಶಿಕಲಾ ಕಂಡರೆ ನನಗೇನು ಭಯವಿಲ್ಲ: ಜಯಾ ಸೊಸೆ ದೀಪಾ
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಹೋದರನ ಪುತ್ರಿ ದೀಪಾ ಜಯಕುಮಾರ್ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಸುದ್ದಿಗೋಷ್ಠಿ ನಡೆಸಿದ್ದಾರೆ.
ಚೆನ್ನೈ, ಫೆಬ್ರವರಿ 07: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಹೋದರನ ಪುತ್ರಿ ದೀಪಾ ಜಯಕುಮಾರ್ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಆದರೆ, ಸುದ್ದಿಗೋಷ್ಠಿ ತುಂಬಾ ತಮಿಳುನಾಡಿನ ನಿಯೋಜಿತ ಸಿಎಂ ಶಶಿಕಲಾ ನಟರಾಜನ್ ವಿರುದ್ಧ ವಾಗ್ದಾಳಿ ನಡೆಸಿದರು.
ಶಶಿಕಲಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದು, ಹಾಗೂ ತಮಿಳುನಾಡಿನ ನಿಯೋಜಿತ ಸಿಎಂ ಆಯ್ಕೆ ಮಾಡಿದ್ದು ಎಲ್ಲವೂ ತಮಿಳುನಾಡಿನ ಪಾಲಿಗೆ ದುರ್ದೈವದ ಸಂಗತಿಯಾಗಿದೆ. ನಾನು ಶಶಿಕಲಾಗೆ ಹೆದರಲ್ಲ ಎಂದು ದೀಪಾ ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

'ಶಶಿಕಲಾ ತಮಿಳುನಾಡಿನ ಮುಂದಿನ ಸಿಎಂ ಆಗಲಿರುವುದು ರಾಜ್ಯದ ಜನತೆಯನ್ನು ಚಿಂತೆಗೀಡು ಮಾಡಿದೆ' ಎಂದು ಪಕ್ಷದ ಹಿರಿಯ ನಾಯಕರು ನನಗೆ ಕರೆ ಮಾಡಿ ನೋವು ತೋಡಿಕೊಂಡಿದ್ದಾರೆ. ಆದರೆ, ನನ್ನ ರಾಜಕೀಯ ಜೀವನದ ಕುರಿತ ಯೋಜನೆಗಳನ್ನು ವ್ಯಕ್ತಪಡಿಸಲು ನನಗೆ ಹಲವು ಒತ್ತಡಗಳಿವೆ ಎಂದಿದ್ದಾರೆ.
ಫೆ.24 ರಂದು ಅಮ್ಮನ ಜನ್ಮದಿನದಂದು ಅದನ್ನು ಘೋಷಿಸುತ್ತೇನೆ. ನನ್ನ ಅತ್ತೆಗಾಗಿಯೇ ರಾಜಕೀಯ ಪ್ರವೇಶಿಸುತ್ತಿದ್ದೇನೆ. ಹೊರತು ಬೇರೆ ವೈಯಕ್ತಿಕ ಕಾರಣವಿಲ್ಲ, ಅವರ ಕನಸು ನನಸು ಮಾಡಬೇಕಿದೆ ಎಂದರು.
ಅಮ್ಮನ ಸಾವಿನ ಕುರಿತು ವೈದ್ಯರು ನೀಡಿರುವ ಮಾಹಿತಿ ನನಗೆ ತೃಪ್ತಿ ತಂದಿಲ್ಲ. ಅಮ್ಮ ಆಸ್ಪತ್ರೆಯಲ್ಲಿದ್ದಾಗ ಅವರನ್ನು ನೋಡುವ ಅವಕಾಶವನ್ನು ನನಗೆ ನೀಡದೆ ತಡೆ ಹಿಡಿದಾಗಲೆ ನಾನ್ಗೆ ಈ ಬಗ್ಗೆ ಸಂಶಯ ಮೂಡಿತ್ತು ಎಂದು ದೀಪಾ ಹೇಳಿದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications