ಶಶಿಕಲಾ ಕಂಡರೆ ನನಗೇನು ಭಯವಿಲ್ಲ: ಜಯಾ ಸೊಸೆ ದೀಪಾ
ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಹೋದರನ ಪುತ್ರಿ ದೀಪಾ ಜಯಕುಮಾರ್ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಸುದ್ದಿಗೋಷ್ಠಿ ನಡೆಸಿದ್ದಾರೆ.
ಚೆನ್ನೈ, ಫೆಬ್ರವರಿ 07: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಹೋದರನ ಪುತ್ರಿ ದೀಪಾ ಜಯಕುಮಾರ್ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮತ್ತೊಮ್ಮೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಆದರೆ, ಸುದ್ದಿಗೋಷ್ಠಿ ತುಂಬಾ ತಮಿಳುನಾಡಿನ ನಿಯೋಜಿತ ಸಿಎಂ ಶಶಿಕಲಾ ನಟರಾಜನ್ ವಿರುದ್ಧ ವಾಗ್ದಾಳಿ ನಡೆಸಿದರು.
ಶಶಿಕಲಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದು, ಹಾಗೂ ತಮಿಳುನಾಡಿನ ನಿಯೋಜಿತ ಸಿಎಂ ಆಯ್ಕೆ ಮಾಡಿದ್ದು ಎಲ್ಲವೂ ತಮಿಳುನಾಡಿನ ಪಾಲಿಗೆ ದುರ್ದೈವದ ಸಂಗತಿಯಾಗಿದೆ. ನಾನು ಶಶಿಕಲಾಗೆ ಹೆದರಲ್ಲ ಎಂದು ದೀಪಾ ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

'ಶಶಿಕಲಾ ತಮಿಳುನಾಡಿನ ಮುಂದಿನ ಸಿಎಂ ಆಗಲಿರುವುದು ರಾಜ್ಯದ ಜನತೆಯನ್ನು ಚಿಂತೆಗೀಡು ಮಾಡಿದೆ' ಎಂದು ಪಕ್ಷದ ಹಿರಿಯ ನಾಯಕರು ನನಗೆ ಕರೆ ಮಾಡಿ ನೋವು ತೋಡಿಕೊಂಡಿದ್ದಾರೆ. ಆದರೆ, ನನ್ನ ರಾಜಕೀಯ ಜೀವನದ ಕುರಿತ ಯೋಜನೆಗಳನ್ನು ವ್ಯಕ್ತಪಡಿಸಲು ನನಗೆ ಹಲವು ಒತ್ತಡಗಳಿವೆ ಎಂದಿದ್ದಾರೆ.
ಫೆ.24 ರಂದು ಅಮ್ಮನ ಜನ್ಮದಿನದಂದು ಅದನ್ನು ಘೋಷಿಸುತ್ತೇನೆ. ನನ್ನ ಅತ್ತೆಗಾಗಿಯೇ ರಾಜಕೀಯ ಪ್ರವೇಶಿಸುತ್ತಿದ್ದೇನೆ. ಹೊರತು ಬೇರೆ ವೈಯಕ್ತಿಕ ಕಾರಣವಿಲ್ಲ, ಅವರ ಕನಸು ನನಸು ಮಾಡಬೇಕಿದೆ ಎಂದರು.
ಅಮ್ಮನ ಸಾವಿನ ಕುರಿತು ವೈದ್ಯರು ನೀಡಿರುವ ಮಾಹಿತಿ ನನಗೆ ತೃಪ್ತಿ ತಂದಿಲ್ಲ. ಅಮ್ಮ ಆಸ್ಪತ್ರೆಯಲ್ಲಿದ್ದಾಗ ಅವರನ್ನು ನೋಡುವ ಅವಕಾಶವನ್ನು ನನಗೆ ನೀಡದೆ ತಡೆ ಹಿಡಿದಾಗಲೆ ನಾನ್ಗೆ ಈ ಬಗ್ಗೆ ಸಂಶಯ ಮೂಡಿತ್ತು ಎಂದು ದೀಪಾ ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications