ಧನುಷ್ ಜೊತೆ ನಟಿಸಿದ್ದ ನಟ ಶ್ರೀವಾಸ್ತವ್ ಆತ್ಮಹತ್ಯೆಗೆ ಶರಣು
ಚೆನ್ನೈ, ಫೆಬ್ರವರಿ 07: ನಟ ಧನುಷ್ ಜೊತೆ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಯುವ ನಟ ಶ್ರೀವಾಸ್ತವ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀವಾಸ್ತವ್ ಅವರು ಗುರುವಾರದಂದು ತಮ್ಮ ತಂದೆಯ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದು, ಶುಕ್ರವಾರದಂದು ನೇಣು ಬಿದಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಲ್ಲಾಮೈ ಥರಯೋ ನಟ ಶ್ರೀವಾಸ್ತವ್ ಅವರು ಬುಧವಾರದಂದು ಮನೆಯವರಿಗೆ ಶೂಟಿಂಗ್ ಇದೆ ಎಂದು ಹೇಳಿ ಪೆರಂಬೂರು ಎಂಬಲ್ಲಿ ತಮ್ಮ ತಂದೆ ಕಚೇರಿ ಕಮ್ ಮನೆಗೆ ತೆರಳಿದ್ದಾರೆ. ಮನೆಯವರಿಗೆ ಅನುಮಾನ ಬಂದು ವಿಚಾರಿಸಿದಾಗ ಯಾವುದೇ ಶೂಟಿಂಗ್ ನಿಗದಿಯಾಗಿರಲಿಲ್ಲ ಎಂದು ತಿಳಿದು ಬಂದಿದೆ.

ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಶ್ರೀವಾಸ್ತವ್ ನಟಿಸಿದ್ದರು. ಕೆಲ ಸಮಯದಿಂದ ಮಾನಸಿಕ ಸಮಸ್ಯೆಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಆಪ್ತರಿಂದ ತಿಳಿದು ಬಂದಿದೆ. ಇತ್ತೀಚೆಗೆ ಡಿಜಿಟಲ್ ವೆಬ್ ಸರಣಿ ವಲ್ಲಾಮೈ ಥರಯೋದಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ್ದರು.
ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications