ಡಿಎಂಕೆ ಸೇರಿದ ಟಿಟಿವಿ ದಿನಕರನ್ ಆಪ್ತ ತಮಿಳ್ ಸೆಲ್ವನ್
ಚೆನ್ನೈ, ಜೂನ್ 28: ಎಎಂಎಂಕೆ ನಾಯಕ ಟಿಟಿವಿ ದಿನಕರನ್ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಕೆಲ ದಿನಗಳಲ್ಲೇ ದಿನಕರನ್ ಅವರ ಆಪ್ತ ತಂಗ ತಮಿಳ್ ಸೆಲ್ವನ್ ಅವರು ಪಕ್ಷವನ್ನು ತೊರೆದಿದ್ದಾರೆ. ಶುಕ್ರವಾರದಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ಸಮ್ಮುಖದಲ್ಲಿ ಡಿಎಂಕೆ ಸೇರಿದ್ದಾರೆ.
ಎಐಎಡಿಎಂಕೆಯ ಬಂಡಾಯ ಬಣದಲ್ಲಿದ್ದ ದಿನಕರನ್ ಸ್ಥಾಪಿಸಿದ ಅಮ್ಮ ಮಕ್ಕಲ್ ಮುನ್ನೇತ್ರ ಕಳಗಮ್(ಎಎಂಎಂಕೆ) ಪಕ್ಷದಲ್ಲಿ ಟಾಪ್ 2ನೇ ಸ್ಥಾನದಲ್ಲಿದ್ದ ತಮಿಳ್ ಸೆಲ್ವನ್ ಅವರು ಡಿಎಂಕೆ ಸೇರಿದ ಎರಡನೇ ಪ್ರಮುಖ ನಾಯಕ ಎನಿಸಿದ್ದಾರೆ.
ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ಹಿರಿಯ ನಾಯಕ, ಮೀನುಗಾರಿಕೆ ಸಚಿವ ಡಿ ಜಯಕುಮಾರ್, 'ತಮಿಳ್ ಸೆಲ್ವನ್ ಅವರು ಆಡಳಿತಾರೂಢ ಪಕ್ಷ(ಎಐಎಡಿಎಂಕೆ) ಸೇರಿದ್ದರೆ ಎಲ್ಲಾ ಕಾಲಕ್ಕೂ ಹೀರೋ ಆಗಿರಬಹುದಾಗಿತ್ತು. ಆದರೆ, ಈಗ ಒಂದು ದಿನ ಹೀರೋ ಆಗಿದ್ದಾರೆ, ನಾಳೆ ಜೀರೋ ಆಗುತ್ತಾರೆ' ಎಂದಿದ್ದಾರೆ.

ತಮಿಳ್ ಸೆಲ್ವನ್ ಗೂ ಮೊದಲು ಡಿಎಂಕೆ ಸೇರಿದ್ದ ವಿ ಸೆಂಥಿಲ್ ಬಾಲಾಜಿ ಅವರು ಅವಕುರಚ್ಚಿ ಉಪ ಚುನಾವಣೆಯಲ್ಲಿ ಡಿಎಂಕೆ ಟಿಕೆಟ್ ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಲೋಕಸಭೆ ಚುನಾವಣೆ 2019ರಲ್ಲಿ 38 ಸ್ಥಾನಗಳ ಪೈಕಿ ಡಿಎಂಕೆ 37 ಸ್ಥಾನ ಗಳಿಸಿದರೆ, ಉಪ ಚುನಾವಣೆಯಲ್ಲಿ 13 ಸ್ಥಾನಗಳಿಸಿತ್ತು.

2016ರಲ್ಲಿ ಜೆ ಜಯಲಲಿತಾ ಅವರು ಮೃತರಾದ ಬಳಿಕ ಎಐಎಡಿಎಂಕೆ ಒಡೆದ ಮನೆಯಾಗಿದ್ದು, ಸಮರ್ಥ ನಾಯಕತ್ವದ ಕೊರತೆ ಅನುಭವಿಸಿತು. ಬಿಜೆಪಿ ಸಂಪೂರ್ಣ ಹಿಡಿತ ಸಾಧಿಸಿತು, ಹೀಗಾಗಿ ಎಐಎಡಿಎಂಕೆ ಸೇರಲಿಲ್ಲ. ಸ್ಟಾಲಿನ್ ಅವರ ನಾಯಕತ್ವಕ್ಕೆ ಬೆಂಬಲ ನೀಡಲು ಡಿಎಂಕೆ ಸೇರಿದೆ ಎಂದು ತಮಿಳ್ ಸೆಲ್ವನ್ ಹೇಳಿದ್ದಾರೆ. ತಮಿಳ್ ಸೆಲ್ವನ್ ಜೊತೆಗೆ ನೂರಾರು ಮಂದಿ ಎಎಂಎಂಕೆ ಕಾರ್ಯಕರ್ತರು ಕೂಡಾ ಡಿಎಂಕೆ ಸೇರಿದ್ದಾರೆ.(ಪಿಟಿಐ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications