ಎಐಎಡಿಎಂಕೆಯಲ್ಲಿ ದಿನಕರನ್ ಆರ್ಭಟ; ಹಲವರ ಸ್ಥಾನಗಳಿಗೆ ಕುತ್ತು
ಕಂದಾಯ ಸಚಿವ ಉದಯಕುಮಾರ್ ಅವರನ್ನು ಎಐಎಡಿಎಂಕೆ ಪಕ್ಷದ ಕಾರ್ಯದರ್ಶಿ ಸ್ಥಾನದಿಂದ ಬರಖಾಸ್ತು. ಪಕ್ಷದ ಉಪ ಮಹಾ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರಿಂದ ಕ್ರಮ.
ಚೆನ್ನೈ, ಆಗಸ್ಟ್ 23: ಆಡಳಿತಾರೂಢ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನೇತ್ರ ಕಳಗಂ (ಎಐಎಡಿಎಂಕೆ) ಉಪ ಮಹಾ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು, ತಮಿಳುನಾಡಿನ ಹಾಲಿ ಕಂದಾಯ ಸಚಿವ ಆರ್.ಬಿ. ಉದಯ ಕುಮಾರ್ ಅವರನ್ನು ಎಐಎಡಿಎಂಕೆಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಿದ್ದಾರೆ.
ಪಕ್ಷದ ಅಧಿನಾಯಕಿ ಜಯಲಲಿತಾ ಅವರ ನಿಧನದ ನಂತರ ಇಬ್ಭಾಗವಾಗಿದ್ದ ಮುಖ್ಯಮಂತ್ರಿ ಪಳನಿ ಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಗುಂಪುಗಳು ಇತ್ತೀಚೆಗೆ ಪರಸ್ಪರ ಒಗ್ಗೂಡಿದ್ದವು. ಇದರಿಂದ, ದಿನಕರನ್ ಹಾಗೂ ಜಯಲಲಿತಾ ನಿಧನದ ನಂತರ ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದ ಶಶಿಕಲಾ ಅವರು ಮೂಲೆಗುಂಪಾಗಿದ್ದಾರೆ.

ಇದರಿಂದ ರೊಚ್ಚಿಗೆದ್ದಿರುವ ದಿನಕರನ್, ತಮ್ಮ ಈ ಸ್ಥಿತಿಗೆ ಕಾರಣವಾದ (ಪಳನಿಸ್ವಾಮಿ- ಪನ್ನೀರ್ ಸೆಲ್ವಂ ಒಗ್ಗೂಡಿಕೆಗೆ ಕಾರಣವಾದ) ವ್ಯಕ್ತಿಗಳು ಪಕ್ಷದಲ್ಲಿ ಹೊಂದಿರುವ ಹುದ್ದೆಗಳಿಂದ ಅವರನ್ನು ತೆರವುಗೊಳಿಸುತ್ತಿದ್ದಾರೆ.
ಅದರಂತೆ, ಉದಯ ಕುಮಾರ್ ಅವರನ್ನು ಕಾರ್ಯದರ್ಶಿ ಹುದ್ದೆಯಿಂದ ಕಿತ್ತುಹಾಕಿರುವ ಅವರು, ಪಕ್ಷದ ಶಾಸಕ ಹಾಗೂ ಮದುರೈ ನಗರ ಶಾಖೆಯ ಕಾರ್ಯದರ್ಶಿಯಾಗಿರುವ ವಿವಿ ರಾಜನ್ ಚೆನ್ನಪ್ಪ, ಸಾರಿಗೆ ಸಚಿವ ಎಂ.ಆರ್. ವಿಜಯಭಾಸ್ಕರ್ ಅವರನ್ನು ಕಾಪೂರ್ ಶಾಖೆಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಸಿದ್ದಾರೆ.
ಇವರೆಲ್ಲರ ಸ್ಥಾನಕ್ಕೆ ಈಗ ತಮ್ಮ ಆಪ್ತರನ್ನು ತಂದುಕೂರಿಸುವ ಮೂಲಕ ಇಡೀ ಪಕ್ಷವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಅವರು ಯತ್ನಿಸಿದ್ದಾರೆಂದು ವಿಶ್ಲೇಷಿಸಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications