ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 3ರಂದು ಕರುಣಾನಿಧಿ ಸಾಧನೆ ವಜ್ರ ಮಹೋತ್ಸವ

1957ರಲ್ಲಿ ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾಗಿದ್ದ ಎಂ. ಕರುಣಾನಿಧಿ ಈವರೆಗೆ ಸತತವಾಗಿ ಶಾಸಕರಾಗಿ ಆಯ್ಕೆಯಾಗಿ ವಿಶಿಷ್ಟವಾದ ಸಾಧನೆ ಮಾಡಿರುವ ಕರುಣಾನಿಧಿಗಾಗಿ ಏರ್ಪಡಿಸಲಾಗಿರುವ ಸನ್ಮಾನ ಸಮಾರಂಭವಿದು.

|
Google Oneindia Kannada News

ಚೆನ್ನೈ, ಮೇ 20: ತಮಿಳುನಾಡು ವಿಧಾನಸಭೆಯಲ್ಲಿ ಶಾಸಕರಾಗಿ ಸತತ 60 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಧುರೀಣ ಎಂ. ಕರುಣಾನಿಧಿಯವರ ವಜ್ರ ಮಹೋತ್ಸವ ಸಮಾರಂಭವನ್ನು ಜೂ. 3ರಂದು ಚೆನ್ನೈನಲ್ಲಿ ಆಯೋಜಿಸಲಾಗಿದೆ ಎಂದು ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.

1957ರಲ್ಲಿ ಮೊದಲ ಬಾರಿಗೆ ತಮಿಳುನಾಡು ವಿಧಾನಸಭೆಗೆ ಆಯ್ಕೆಯಾಗಿದ್ದ ಎಂ. ಕರುಣಾನಿಧಿ ಈವರೆಗೆ ಸತತವಾಗಿ ಶಾಸಕರಾಗಿ ಆಯ್ಕೆಯಾಗಿ ವಿಶಿಷ್ಟವಾದ ಸಾಧನೆ ಮಾಡಿದ್ದಾರೆ.

Diamond Jubilee of Karunanidhi on June 3 in Chennai

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ ಸ್ಟಾಲಿನ್, ''ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು. ಆ ಸಮಾರಂಭದಲ್ಲಿ ಕರುಣಾನಿಧಿಯವರ ಸಾಧನೆಗಳನ್ನು ಜನರ ಮುಂದಿಡಲಾಗುವುದು. ಅನೇಕ ಗಣ್ಯರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸಮಾರಂಭಕ್ಕೆ ಹಾಜರಾಗಲಿದ್ದಾರೆ'' ಎಂದು ತಿಳಿಸಿದರು.

ಕರುಣಾನಿಧಿಯವರು ಸಮಾರಂಭಕ್ಕೆ ಹಾಜರಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ''ಕರುಣಾನಿಧಿಯವರ ಆರೋಗ್ಯ ಸರಿಯಿಲ್ಲ. ವೈದ್ಯರು ಅನುಮತಿ ಕೊಟ್ಟಲ್ಲಿ ಮಾತ್ರ ಅವರು ಸಮಾರಂಭಕ್ಕೆ ಹಾಜರಾಗಲಿದ್ದಾರೆ'' ಎಂದು ತಿಳಿಸಿದರು.

{promotion-urls}

English summary
DMK leader Mr Stalin said on June 3, the birthday of party chief M Karunanidhi will be celebrated along with the Diamond Jubilee of the veteran leader's 60-year long career in Tamil Nadu Legislative Assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X