ಸತತ ವಿಚಾರಣೆಯಿಂದ ಹೈರಾಣಾದರೇ ದಿನಕರನ್?
ಚೆನ್ನೈ, ಏಪ್ರಿಲ್ 28: ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಶಶಿಕಲಾ ಸೋದರ ಸಂಬಂಧಿಯಾದ ಟಿಟಿವಿ ದಿನಕರನ್ ಅವರು ಪೊಲೀಸರ ಸತತ ವಿಚಾರಣೆಯಿಂದಾಗಿ ತೀವ್ರ ಹತಾಶೆಗೊಂಡಿರುವುದಲ್ಲದೆ ಹೈರಾಣಾಗಿದ್ದಾರೆಂದು ಮೂಲಗಳು ತಿಳಿಸಿವೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದಿಂದಾಗಿ ತೆರವಾಗಿರುವ ಚೆನ್ನೈನ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವೇಳೆ, ಎಐಎಡಿಎಂಕೆ ಪಕ್ಷದ ಎರಡೆಲೆ ಚಿಹ್ನೆಯನ್ನು ತಮ್ಮ ಬಣಕ್ಕೇ (ಶಶಿಕಲಾ) ಸೀಮಿತಗೊಳಿಸಬೇಕೆಂಬ ಆಸೆಯಿಂದ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಅವರ ಮೇಲಿದೆ.[ದಿನಕರನ್ ಪ್ರಕರಣ ತನಿಖೆಗೆ ಅಡ್ಡಿಯಾಯ್ತು ವಾಟ್ಸಾಪ್ ತಂತ್ರಜ್ಞಾನ]

ಈ ಹಿನ್ನೆಲೆಯಲ್ಲಿ, ಏ.23ರಿಂದ ಸತತವಾಗಿ ಮೂರು ದಿನ ವಿಚಾರಣೆ ನಡೆಸಿದ್ದ ದೆಹಲಿ ಕ್ರೈ ಬ್ರಾಂಚ್ ಪೊಲೀಸರು, ಆನಂತರ ಅವರನ್ನು ಏಕಾಏಕಿ ಬಂಧಿಸಿದ್ದರು. ಬಂಧನದ ನಂತರವೂ ಅವರ ವಿಚಾರಣೆ ಮುಂದುವರಿದಿದ್ದು, ದಿನಕರನ್ ಮತ್ತು ಲಂಚ ಪ್ರಕರಣದಲ್ಲಿ ಅವರ ಏಜೆಂಟ್ ಆಗಿ ಕಾರ್ಯ ನಿರ್ವಹಿಸಿದ್ದಾನೆನ್ನಲಾಗಿರುವ ಸುಖೇಶ್ ಚಂದ್ರಶೇಖರ್ ಅವರ ನಡುವಿನ ಮಾತುಕತೆಗಳ ಸಾರವನ್ನು ಹೆಕ್ಕಲು ಪೊಲೀಸರು ನಿರತರಾಗಿದ್ದಾರೆ.[EC ಗೆ ಲಂಚ ನೀಡಿದ ಆರೋಪ: ದೆಹಲಿಯಲ್ಲಿ ದಿನಕರನ್ ವಿಚಾರಣೆ]
ಏತನ್ಮಧ್ಯೆ, ಗುರುವಾರ ದಿನಕರನ್ ಅವರನ್ನು ಚೆನ್ನೈಗೆ ಕರೆತಂದಿರುವ ಅವರು, ದಿನಕರನ್ ಅವರು, ಸುಖೇಶ್ ಗೆ ಹಣ ಸಂದಾಯ ಮಾಡಿರುವ ದಾರಿಗಳ ಹುಡುಕಾಟದಲ್ಲಿ ನಿರತರಾಗಿದ್ದಾರೆ. ಇದೆಲ್ಲದರ ಜತೆಗೇ ದಿನಕರನ್ ಅವರ ಸತತ ವಿಚಾರಣೆ ಸಾಗಿದೆ.
ಈ ವಿಚಾರಣೆಗಳಿಂದಲೇ ದಿನಕರನ್ ಹತಾಶರಾಗಿ ತಮ್ಮ ವಕೀಲಕ ಕಡೆಯಿಂದ ತಪ್ಪೊಪ್ಪಿಗೆ ಪತ್ರವನ್ನು ದೆಹಲಿ ಪೊಲೀಸರಿಗೆ ಸಲ್ಲಿಸಿದ್ದರೆಂದು ಹೇಳಲಾಗಿದೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications