ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಡಿಎಂಕೆ ಅಭ್ಯರ್ಥಿ ಕದಿರ್ ಗೆ ಜಯ
ವೆಲ್ಲೂರು (ತಮಿಳುನಾಡು), ಆಗಸ್ಟ್ 9: ದ್ರಾವಿಡ ಮುನ್ನೇಟ್ರ ಕಳಗಂನ (ಡಿಎಂಕೆ) ಡಿ. ಎಂ. ಕದಿರ್ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ 8 ಸಾವಿರ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಪಕ್ಷದ ಗೆಲುವಿನ ಲೆಕ್ಕಾಚಾರ 38ಕ್ಕೆ ತಲುಪಿದೆ. ಎಐಎಡಿಎಂಕೆ ಅಭ್ಯರ್ಥಿ ಶುಕ್ರವಾರ ಬೆಳಗ್ಗೆ ಮುನ್ನಡೆ ಕಾಯ್ದುಕೊಂಡಿದ್ದರು. ಆರಂಭದ ಕೆಲವು ಸುತ್ತುಗಳಲ್ಲಿ ಮುನ್ನಡೆಯಲ್ಲಿ ಕೂಡ ಇದ್ದರು.
ಅಂದ ಹಾಗೆ, ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಇಪ್ಪತ್ತೆಂಟು ಅಭ್ಯರ್ಥಿಗಳು ಕಣದಲ್ಲಿ ಇದ್ದರು. ತಮಿಳುನಾಡಿನ ಇತರ ಲೋಕಸಭಾ ಕ್ಷೇತ್ರದ ಜತೆಗೆ ವೆಲ್ಲೂರಿಗೆ ಚುನಾವಣೆ ನಿಗದಿ ಆಗಿತ್ತು. ಆದಾಯ ತೆರಿಗೆ ದಾಳಿ ವೇಳೆ ಮತದಾರರಿಗೆ ಹಂಚಲು ರಾಜಕಾರಣಿಯೊಬ್ಬರ ಬಳಿ ಇದ್ದ ದೊಡ್ಡ ಮೊತ್ತವನ್ನು ವಶಪಡಿಸಿಕೊಳ್ಳಲಾಗಿತ್ತು. ಡಿಎಂಕೆ ನಾಯಕರೊಬ್ಬರ ಬಳಿ ಹತ್ತು ಕೋಟಿ ವಶಪಡಿಸಿಕೊಳ್ಳಲಾಗಿತ್ತು.
ಡಿಎಂಕೆ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟವು ಲೋಕಸಭೆ ಚುನಾವಣೆಯಲ್ಲಿ ಅದ್ಭುತ ಗೆಲುವು ಸಾಧಿಸಿತ್ತು. ಮೂವತ್ತೆಂಟರಲ್ಲಿ 37 ಸ್ಥಾನಗಳಲ್ಲಿ ಜಯಿಸಿತ್ತು. ಏಪ್ರಿಲ್ 18ನೇ ತಾರೀಕು ಚುನಾವಣೆ ನಡೆದಿತ್ತು. ಇನ್ನು ಎರಡು ವರ್ಷಗಳ ನಂತರ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೆ ಮುನ್ನ ಲೋಕಸಭೆ ಚುನಾವಣೆ ಫಲಿತಾಂಶ ಡಿಎಂಕೆ ನೇತೃತ್ವದ ವಿಪಕ್ಷಗಳಿಗೆ ವಿಶ್ವಾಸ ಮೂಡಿಸಿದೆ.

ವೆಲ್ಲೂರು ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಎಐಎಡಿಎಂಕೆ ಪರವಾಗಿ ಹಾಗೂ ಎಂ.ಕೆ. ಸ್ಟಾಲಿನ್ ಡಿಎಂಕೆ ಪರವಾಗಿ ಪ್ರಚಾರ ನಡೆಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications