ನಾನು ಕಲೈನಾರ್ ಮಗ, ಇದಕ್ಕೆಲ್ಲ ಹೆದರುವುದಿಲ್ಲ: ಅಳಿಯ ಮೇಲೆ ಐಟಿ ದಾಳಿಗೆ ಸ್ಟಾಲಿನ್ ತಿರುಗೇಟು
ಚೆನ್ನೈ, ಏಪ್ರಿಲ್ 3: ತಮಿಳುನಾಡು ವಿಧಾನಸಭೆ ಚುನಾವಣೆ ಸಮೀಪದಲ್ಲಿಯೇ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅಳಿಯನಿಗೆ ಸೇರಿದ ಆಸ್ತಿಗಳ ಮೇಲೆ ಅದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ಅಧಿಕಾರದ ದುರ್ಬಳಕೆ ಎಂದು ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು ನೀಡಿದೆ.
ಚುನಾವಣೆ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಎಐಎಡಿಎಂಕೆ-ಬಿಜೆಪಿ ಸೂಚನೆಯಂತೆ ಅವರಿಗೆ ಪೂರಕವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಐಟಿ ಇಲಾಖೆಯ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಡಿಎಂಕೆ ಆಗ್ರಹಿಸಿದೆ.
ಚೆನ್ನೈ ಹೊಸವಲಯದ ನೀಲಾಂಗರೈದಲ್ಲಿನ ಸ್ಟಾಲಿನ್ ಮಗಳು ಸೆಂಥಮರೈ ಮತ್ತು ಆಕೆಯ ಪತಿ ಶಬರೀಶನ್ ಅವರ ನಿವಾಸ ಸೇರಿದಂತೆ ವಿವಿಧೆಡೆ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಚುನಾವಣಾ ಪ್ರಚಾರಕ್ಕಾಗಿ ಭಾರಿ ಪ್ರಮಾಣದ ನಗದು ಹಣ ಸರಬರಾಜಾಗುತ್ತಿದೆ ಎಂಬಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಶಬರೀಶನ್ ಅವರ ಸಹವರ್ತಿಗಳಾದ ಅಣ್ಣಾನಗರದ ಡಿಎಂಕೆ ಅಭ್ಯರ್ಥಿ ಮೋಹನ್ ಅವರ ಮಗ ಕಾರ್ತಿಕ್ ಮತ್ತು ಬಾಲ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿಯೂ ಹುಡುಕಾಟ ನಡೆದಿದೆ. ಶಬರೀಶನ್ ಅವರು ಸ್ಟಾಲಿನ್ ಅವರ ಸಲಹೆಗಾರರಾಗಿದ್ದಾರೆ.
'ನಾನು ಎಂಕೆ ಸ್ಟಾಲಿನ್. ಈ ಸ್ಟಾಲಿನ್ ತುರ್ತು ಪರಿಸ್ಥಿತಿ ಮತ್ತು ಮೀಸಾವನ್ನು ಎದುರಿಸಿದವನು. ಈ ಐಟಿ ದಾಳಿಗಳ ಕಾರಣದಿಂದ ನಾನು ಹೆದರಿಕೊಂಡಿಲ್ಲ. ತಮ್ಮ ಮುಂದೆ ಮಂಡಿಯೂರಲು ನಾವು ಎಐಎಡಿಎಂಕೆ ಮುಖಂಡರಲ್ಲ ಎಂದು ಮೋದಿ ತಿಳಿದಿರಲಿ. ಇದು ಡಿಎಂಕೆ. ನಾನು ಕಲೈನಾರ್ ಕರುಣಾನಿಧಿ ಮಗ. ನಾವು ಇದಕ್ಕೆಲ್ಲ ಹೆದರುವುದಿಲ್ಲ' ಎಂದು ಸ್ಟಾಲಿನ್ ಹೇಳಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications