Get Updates
Get notified of breaking news, exclusive insights, and must-see stories!

ಮೇಲ್ಜಾತಿಗೆ ಮೀಸಲಾತಿ ಪ್ರಶ್ನಿಸಿ ಮದ್ರಾಸ್ ಹೈ ಕೋರ್ಟ್ ಮೆಟ್ಟಿಲೇರಿದ ಡಿಎಂಕೆ

ಚೆನ್ನೈ, ಜನವರಿ 18: ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಶೇ 10ರಷ್ಟು ಮೀಸಲಾತಿ ಒದಗಿಸಲು ಕೇಂದ್ರ ಸರಕಾರ ರೂಪಿಸಿದ ಕಾನೂನು ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮದ್ರಾಸ್ ಹೈ ಕೋರ್ಟ್ ಮೆಟ್ಟಿಲೇರಿದೆ. ಸಾಂವಿಧಾನಿಕ ತಿದ್ದುಪಡಿ ಮಸೂದೆ ತಂದು, ಈಗಾಗಲೇ ಲೋಕಸಭೆ- ರಾಜ್ಯಸಭೆಯಲ್ಲಿ ಒಪ್ಪಿಗೆ ದೊರೆತು, ರಾಷ್ಟ್ರಪತಿಗಳ ಅಂಕಿತ ಬಿದ್ದು, ಕಾಯ್ದೆ ಜಾರಿಯಾಗಿದೆ.

ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿ ಅವರು ಮದ್ರಾಸ್ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಂದಹಾಗೆ ಸಂಸತ್ ನಲ್ಲಿ ಈ ಮಸೂದೆಯನ್ನು ಮಂಡಿಸಿದ್ದಾಗ ಡಿಎಂಕೆ ವಿರೋಧ ವ್ಯಕ್ತಪಡಿಸಿತ್ತು. ಕೇಂದ್ರ ಸರಕಾರದ ಈ ನಡೆಗೆ ತಮಿಳುನಾಡಿನ ಆಡಳಿತಾರೂಢ ಪಕ್ಷ ಎಐಎಡಿಎಂಕೆ ಕೂಡ ವಿರೋಧ ವ್ಯಕ್ತಪಡಿಸಿದೆ. ಆ ಪಕ್ಷ ಕೂಡ ಮಸೂದೆಗೆ ವಿರೋಧ ವ್ಯಕ್ತಪಡಿಸಿತ್ತು.

ಆದರೆ, ಉಳಿದ ವಿರೋಧ ಪಕ್ಷಗಳು ಮಸೂದೆಯನ್ನು ಬೆಂಬಲಿಸಿದ್ದರಿಂದ ಸುಲಭವಾಗಿ ಒಪ್ಪಿಗೆ ಸಿಕ್ಕಿತು.

DMK filed writ petition against 10 percent reservation for upper caste

ಸಾಮಾನ್ಯ ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಒದಗಿಸುವ ಈ ಕಾನೂನು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ.. ಇದರಿಂದ ವಿವಿಧ ಜಾತಿಗಳ ಜನರಿಗೆ ಅನ್ಯಾಯ ಆಗಲಿದೆ ಎಂದು ಡಿಎಂಕೆ ವಾದ ಮಂಡಿಸಿದೆ. ಸಂವಿಧಾನದ ಪ್ರಕಾರ ಕೂಡ, ಆರ್ಥಿಕವಾಗಿ ಹಿಂದುಳಿದವರು ಎಂಬುದು ಮೀಸಲಾತಿಗೆ ಮಾನದಂಡ ಅಲ್ಲ ಎಂದು ಹೇಳಿದೆ.

ಇದರ ಜತೆಗೆ ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಯಾವ ಆಧಾರದಲ್ಲಿ ಕೇಂದ್ರ ಸರಕಾರವು 10 ಪರ್ಸೆಂಟ್ ಮೀಸಲಾತಿ ಎಂಬ ನಿರ್ಧಾರಕ್ಕೆ ಬಂದಿತು ಎಂದು ಉತ್ತರ ನೀಡಲು ಡಿಎಂಕೆ ಒತ್ತಾಯ ಮಾಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+