ತಮಿಳುನಾಡಿನ ಸಂಸದ ಎ ರಾಜಾರಿಗೆ ಪ್ರಚಾರದ ಕಣದಿಂದ 48 ಗಂಟೆ ನಿರ್ಬಂಧ!
ಚೆನ್ನೈ, ಏಪ್ರಿಲ್ 1: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಡಿಎಂಕೆ ಸಂಸದ ಎ ರಾಜಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮುಂದಿನ 48 ಗಂಟೆಗಳವರೆಗೂ ಡಿಎಂಕೆ ಸಂಸದ ಎ ರಾಜಾ ಪ್ರಚಾರದತ್ತಿ ತೊಡಗುವಂತಿಲ್ಲ ಎಂದು ಆಯೋಗ ಸೂಚನೆ ನೀಡಿದೆ. ಸಿಎಂ ವಿರುದ್ಧ ಅವಾಚ್ಯ ಶಬ್ದವನ್ನು ಬಳಸಿದ ಹಿನ್ನೆಲೆ ಡಿಎಂಕೆ ಸಂಸದನನ್ನು ಪ್ರಚಾರದ ಕಣದಿಂದ ದೂರವಿಡುವಂತೆ ಎಐಎಡಿಎಂಕೆ ಆಯೋಗಕ್ಕೆ ದೂರು ನೀಡಿತ್ತು.
ಎಐಎಡಿಎಂಕೆ ನೀಡಿದ ದೂರು ಪರಿಶೀಲಿಸಿದ ಚುನಾವಣಾ ಆಯೋಗವು "ಡಿಎಂಕೆ ಸಂಸದ ರಾಜಾ ಅವರ ಭಾಷಣವು ಅವಹೇಳನಕಾರಿಯಷ್ಟೇ ಅಲ್ಲದೇ ಅಶ್ಲೀಲ ಮತ್ತು ಮಹಿಳೆಯರು ಹಾಗೂ ಮಾತೃತ್ವದ ಘನತೆಯನ್ನು ಕಡಿಮೆ ಮಾಡುತ್ತದೆ. ಇದು ನೀತಿ ಸಂಹಿತೆಯ ಗಂಭೀರ ಉಲ್ಲಂಘನೆಯಾಗಿದೆ" ಎಂದು ಹೇಳಿದೆ.

ಡಿಎಂಕೆ ಸಂಸದ ಎ ರಾಜಾ ವಿವಾದಾತ್ಮಕ ಹೇಳಿಕೆ:
ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಮತ್ತು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ನಾಯಕತ್ವದ ನಡುವೆ ಹೋಲಿಕೆ ಸಂದರ್ಭದಲ್ಲಿ ಡಿಎಂಕೆ ಸಂಸದ ಎ.ರಾಜಾ ಅವರು ಸ್ಟಾಲಿನ್ ಅವರ ರಾಜಕೀಯ ಜೀವನವು "ಕಾನೂನುಬದ್ಧವಾಗಿ ಜನಿಸಿದ ಸಂಪೂರ್ಣ ಪ್ರಬುದ್ಧ ಮಗುವಿನಂತಿದೆ ಮತ್ತು "ಇಪಿಎಸ್ ಅವರು ಕಾನೂನು ಬಾಹಿರದಿಂದ ಹುಟ್ಟಿದ ಅಕಾಲಿಕ ಮಗುವಿನಂತೆ' ಎಂದು ಹೋಲಿಕೆ ಮಾಡಿದ್ದರು.
ತಮ್ಮ ಹೇಳಿಕೆ ನಂತರ ಎ ರಾಜಾ ಕ್ಷಮೆಯಾಚನೆ:
ಸಿಎಂ ಪಳನಿಸ್ವಾಮಿ ಮತ್ತು ಅವರ ತಾಯಿ ಬಗ್ಗೆ ಡಿಎಂಕೆ ಸಂಸದ ಎ. ರಾಜಾ ನೀಡಿದ್ದ ಹೇಳಿಕೆ ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, "ನನ್ನ ಟೀಕೆಗಳಿಂದಾಗಿ ಸಿಎಂಗೆ ತೀವ್ರ ನೋವುಂಟಾಗಿದೆ ಎಂದು ತಿಳಿದು ಬೇಸರವಾಯಿತು. ನನ್ನ ಟೀಕೆಗಳಿಗೆ ನಾನು ಕ್ಷಮೆಯಾಚಿಸುತ್ತೇನೆ, "ಎಂದು ಹೇಳಿದ್ದರು.
ಮುಖ್ಯಮಂತ್ರಿ ವಿರುದ್ಧ ವೈಯಕ್ತಿಕ ದಾಳಿ ನಡೆಸುವುದು ನನ್ನ ಭಾಷಣದ ಮುಖ್ಯ ಉದ್ದೇಶವಾಗಿರಲಿಲ್ಲ. ಬದಲಿಗೆ ಎರಡು ನಾಯಕರ ಜೀವನದ ಬಗ್ಗೆ ಹೋಲಿಕೆ ಮಾಡಿದ್ದೇನೆ ಎಂದು ಡಿಎಂಕೆ ಸಂಸದ ಎ. ರಾಜಾ ಸ್ಪಷ್ಟನೆ ನೀಡಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications