ಪುದುಚೇರಿಯಲ್ಲಿ ಹಿಂದಿ ಹೇರಿಕೆ ವಿರುದ್ಧ ಡಿಎಂಕೆ ಪ್ರತಿಭಟನೆ
ಚೆನ್ನೈ ಮೇ 09: ಪುದುಚೇರಿಯಲ್ಲಿ ಹಿಂದಿ ಹೇರಿಕೆ ವಿರುದ್ಧ ವಿರೋಧ ಡಿಎಂಕೆ ಪಕ್ಷ ಸೋಮವಾರ ಪ್ರತಿಭಟನೆ ನಡೆಸಿದೆ. ಇದಕ್ಕೂ ಮುನ್ನ ಪ್ರತಿಪಕ್ಷದ ನಾಯಕ ಆರ್.ಶಿವ ನೇತೃತ್ವದಲ್ಲಿ ಹಿಂದಿ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆ ನಾಯಕರನ್ನು ಬಂಧಿಸಲಾಗಿತ್ತು. ಪ್ರತಿಭಟನೆಯ ನಂತರ ಅಧಿಕೃತ ದಾಖಲೆಗಳಲ್ಲಿ ಮತ್ತು ಸಂವಹನಗಳಲ್ಲಿ ಹಿಂದಿಯನ್ನು ಬಳಸಲು ಸೂಚನೆಗಳನ್ನು ಕೂಡ ಪುದುಚೇರಿಯಲ್ಲಿ ನೀಡಲಾಗಿತ್ತು.
ಹಿಂದಿ ಹೇರಿಕೆ ಆರೋಪದ ವಿರುದ್ಧ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ವಿರೋಧ ಪಕ್ಷ ಡಿಎಂಕೆ ಸೋಮವಾರ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಯ ನಂತರ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ್ದರು. ಈ ಹಿಂದೆ ರೀತಿ ಹಿಂದಿ ಭಾಷೆಯು ಪುದುಚೇರಿಯಲ್ಲಿ ಹೇರಿಕೆಯಾಗಿಲ್ಲ, ಆದರೆ ಈ ಹಿಂದೆ ಭಾಷೆಯನ್ನು ಹೇರಲಾಗಿದೆ ಎಂದು ಡಿಎಂಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ನಂತರ ಪ್ರಾದೇಶಿಕ ಭಾಷೆಯಾದ ತಮಿಳು ಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಯಿತು.
ಏಕಕಾಲದಲ್ಲಿ ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಇತ್ತೀಚೆಗೆ ಹೊರಡಿಸಿದ ಸುತ್ತೋಲೆ ವಿರುದ್ಧ ಪಕ್ಷದ ಸಂಚಾಲಕ ಮತ್ತು ವಿರೋಧ ಪಕ್ಷದ ನಾಯಕ ಆರ್ ಶಿವ ನೇತೃತ್ವದಲ್ಲಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಪ್ರತಿಭಟನೆಗಳು ನಡೆಸಿದ್ದವು ಈ ವೇಳೆ ಡಿಎಂಕೆ ನಾಯಕರನ್ನು ಬಂಧಿಸಲಾಗಿತ್ತು. ಈ ಸುತ್ತೋಲೆಯಲ್ಲಿ ಅಧಿಕೃತ ದಾಖಲೆಗಳು ಮತ್ತು ಸಂವಹನದಲ್ಲಿ ಹಿಂದಿಯನ್ನು ಬಳಸಲು ಸೂಚನೆಗಳನ್ನು ನೀಡಲಾಗಿತ್ತು. ಆದರೆ ಈ ಪ್ರತಿಭಟನೆಯಲ್ಲಿ ಸ್ಥಳೀಯ ಯುವಕರು ಸೇರಿದಂತೆ ಅನೇಕ ಪ್ರತಿಭಟನಾಕಾರರು ಸಂಸ್ಥೆ ಹೊರಡಿಸಿದ ಸುತ್ತೋಲೆಯನ್ನು ವಿರೋಧಿಸಿ ಖಂಡನಾ ಘೋಷಣೆಗಳನ್ನು ಎತ್ತಿದ್ದರು.

ವಿರೋಧ ಪಕ್ಷದ ನಾಯಕ ಆರ್.ಶಿವ ಬೇಷರತ್ ವಾಪಸಾತಿ
ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ಈಗಾಗಲೇ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ನಿರಾಕರಿಸುತ್ತಿದೆ ಎಂದು ಪಕ್ಷದ ಸಂಚಾಲಕ ಮತ್ತು ವಿರೋಧ ಪಕ್ಷದ ನಾಯಕ ಆರ್.ಶಿವ ಆರೋಪಿಸಿದರು. ಅದೇ ಸಮಯದಲ್ಲಿ ಹಿಂದಿಯನ್ನು ಹೇರುವ ನಿರ್ದೇಶನದೊಂದಿಗೆ ಸ್ಥಳೀಯ ಜನರ ಮೇಲೆ ಮತ್ತೊಂದು ಹೊಡೆತ ಬಿದ್ದಿದೆ. ಇದನ್ನು ಬೇಷರತ್ತಾಗಿ ಹಿಂಪಡೆಯಬೇಕು ಆಗ್ರಹಿಸಿದ್ದರು.
ತಮಿಳುನಾಡು ವಿಧಾನಸಭೆಯ ಸದಸ್ಯ ಟಿ ವೇಲ್ಮುರುಗನ್ ಕೂಡ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದರು. ಇದರೊಂದಿಗೆ ಅವರು ಜವಾಹರಲಾಲ್ ಇನ್ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್ಗೆ ಭೇಟಿ ನೀಡಿ ನಿರ್ದೇಶಕ ರಾಕೇಶ್ ಅಗರ್ವಾಲ್ ಅವರೊಂದಿಗೆ ಮಾತನಾಡಿದ್ದರು. ಈ ಸಂಸ್ಥೆಯಲ್ಲಿ ಹಿಂದಿಯನ್ನು ಯಾವುದೇ ರೀತಿಯಲ್ಲಿ ಹಿಂದಿ ಹೇರಿಲ್ಲ, ತಮಿಳು ಸ್ಥಳೀಯ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ನಿರ್ದೇಶಕ ರಾಕೇಶ್ ಅಗರ್ವಾಲ್ ಮಾಹಿತಿ ನೀಡಿದ್ದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications