ತಮಿಳುನಾಡು: ಕತ್ತೆಗಳ ಮೇಲೆ ಇವಿಎಂ, ವಿವಿಪ್ಯಾಟ್ ಸಾಗಣೆ
ಚೆನ್ನೈ, ಏಪ್ರಿಲ್ 6: ಚುನಾವಣೆಗೆ ಬಳಸುವ ವಿದ್ಯುನ್ಮಾನ ಮತ ಯಂತ್ರಗಳನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗುವ ಸರ್ಕಾರಿ ಬಸ್ ಅಥವಾ ವಾಹನದಲ್ಲಿ ಅಧಿಕಾರಿಗಳ ಬೆಂಗಾವಲಿನಲ್ಲಿ ಸಾಮಾನ್ಯವಾಗಿ ಸಾಗಿಸಲಾಗುತ್ತದೆ. ಆದರೆ ತಮಿಳುನಾಡಿನ ಈರೋಡ್, ದಿಂಡಿಗಲ್ ಮತ್ತು ಧರ್ಮಾಪುರಿಗಳಲ್ಲಿ ಇವಿಎಂಗಳನ್ನು ಸಾಗಿಸಿದ ಬಗೆ ವಿಭಿನ್ನ.
ತಮಿಳುನಾಡಿನಲ್ಲಿ ಮಂಗಳವಾರ ಒಂದೇ ಹಂತದಲ್ಲಿ ಎಲ್ಲ 234 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ವಿದ್ಯುನ್ಮಾನ ಮತ ಯಂತ್ರಗಳನ್ನು ಸಾಗಿಸಿದ ರೀತಿಯ ವಿಡಿಯೋಗಳು ವೈರಲ್ ಆಗಿವೆ. ಈ ಎರಡು ಜಿಲ್ಲೆಗಳ ಗ್ರಾಮಗಳಲ್ಲಿ ಇವಿಎಂ ಸಾಗಿಸಲು ಕತ್ತೆಗಳನ್ನು ಬಳಸಿಕೊಳ್ಳಲಾಗಿದೆ.
ಈರೋಡ್ನ ಅಂತಿಯೂರ್ ವಿಧಾನಸಭೆ ವ್ಯಾಪ್ತಿಯಲ್ಲಿನ ಕದಿರಿಮಲೈ ಗ್ರಾಮ, ದಿಂಡಿಗಲ್ ಜಿಲ್ಲೆಯ ನಥಾಮ್ ಮತ್ತು ಧರ್ಮಾಪುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಇವಿಎಂ, ವಿವಿಪ್ಯಾಟ್ ಮತ್ತು ಮತದಾನದ ಇತರೆ ಸಾಮಗ್ರಿಗಳನ್ನು ಮತಗಟ್ಟೆಗೆ ಕತ್ತೆಗಳ ಮೇಲಿರಿಸಿ ಸಾಗಿಸಲಾಗಿದೆ. ಕತ್ತೆಗಳ ಜತೆಗೆ ಪೊಲೀಸರು, ಚುನಾವಣಾ ಅಧಿಕಾರಿಗಳು ನಡೆದು ಸಾಗಿದ್ದಾರೆ.
#WATCH | Donkeys carry EVMs to villages in the Natham area of Dindigul district of Tamil Nadu, ahead of assembly elections tomorrow.
— ANI (@ANI) April 5, 2021
(Earlier visuals) pic.twitter.com/k0pd3WPK4N
ಬೆಟ್ಟ ಪ್ರದೇಶಗಳಲ್ಲಿರುವ ಈ ಭಾಗಕ್ಕೆ ಸರಿಯಾದ ರಸ್ತೆ ಸೌಕರ್ಯಗಳಿಲ್ಲದಿರುವುದರಿಂದ, ವಾಹನಗಳ ಓಡಾಟ ಸಾಧ್ಯವಿಲ್ಲ. ಹೀಗಾಗಿ ಹಿಂದಿನಿಂದಲೂ ಇಲ್ಲಿ ಮತದಾನದ ಸಾಮಗ್ರಿಗಳನ್ನು ಸಾಗಿಸಲು ಕತ್ತೆಗಳನ್ನು ಬಳಸಲಾಗುತ್ತಿದೆ.

ಧರ್ಮಾಪುರಿಯಲ್ಲಿ ಇರುವ ಐದೂ ವಿಧಾನಸಭೆ ಕ್ಷೇತ್ರಗಳಲ್ಲಿ ವಾಹನ ಸಂಚಾರ ಕಷ್ಟಕರವಾದ ಬೆಟ್ಟ ಪ್ರದೇಶಗಳಿವೆ. ಹೀಗಾಗಿ ಇಲ್ಲಿ ಕೂಡ ಕತ್ತೆಗಳನ್ನು ಅನಿವಾರ್ಯವಾಗಿ ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications