ಡಾ. ರಾಜ್ ಕುಮಾರ್ ಕಿಡ್ನಾಪ್ ಕೇಸ್ : ಎಲ್ಲಾ ಆರೋಪಿಗಳಿಗೆ ಖುಲಾಸೆ
Recommended Video

ಈರೋಡ್(ತಮಿಳುನಾಡು), ಸೆಪ್ಟೆಂಬರ್ 25: ಸುಮಾರು 18 ವರ್ಷಗಳ ಬಳಿಕ ನಟ ಡಾ. ರಾಜ್ ಕುಮಾರ್ ಅವರ ಕಿಡ್ನಾಪ್ ಪ್ರಕರಣದ ತೀರ್ಪು ಇಂದು ಪ್ರಕಟಗೊಂಡಿದೆ.
ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಜಡ್ಜ್ ಕೆ ಮಣಿ ಅವರು ಆದೇಶ ಹೊರಡಿಸಿದ್ದು, 9 ಆರೋಪಿಗಳು ಪ್ರಕರಣದಿಂದ ಖುಲಾಸೆಗೊಂಡಿದ್ದಾರೆ.
ಕಾಡುಗಳ್ಳ ವೀರಪ್ಪನ್ ಸೇರಿದಂತೆ 14 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಆದರೆ, ವೀರಪ್ಪನ್, ಸೇತುಕುಳಿ ಗೋವಿಂದನ್ ಸೇರಿದಂತೆ ಅವನ ಸಹಚರರು 2004ರಲ್ಲಿ ಎಸ್ ಟಿಎಫ್ ನವರು ನಡೆಸಿದ ಎನ್ ಕೌಂಟರ್ ಗೆ ಬಲಿಯಾದರು.
ಪ್ರಕರಣದ ಆರೋಪಿಗಳ ಪೈಕಿ 5 ಮಂದಿ ಜೈಲಿನಲ್ಲಿದ್ದರು. ಐವರಿಗೂ ಶುಭ ಸುದ್ದಿ ಸಿಕ್ಕಿದೆ. ಇವರ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಸೂಕ್ತ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಜಡ್ಜ್ ಆದೇಶಿಸಿದ್ದಾರೆ.
2000ರ ಜುಲೈ 30ರಂದು ಗಾಜನೂರಿನ ಮನೆಯಿಂದ ಡಾ. ರಾಜ್ ಕುಮಾರ್ ಹಾಗೂ ಇತರೆ ಮೂವರನ್ನು ಅಪಹರಿಸಿದ್ದ ವೀರಪ್ಪನ್, 108 ದಿನಗಳ ಬಳಿಕ ಅಭಿಮಾನಿಗಳ ಪಾಲಿನ ಅಣ್ಣಾವ್ರನ್ನು ಬಿಡುಗಡೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. 2006ರ ಏಪ್ರಿಲ್ ನಲ್ಲಿ ಡಾ. ರಾಜ್ ಕುಮಾರ್ ಅವರು ಇಹಲೋಕ ತ್ಯಜಿಸಿದರು.

ಕಿಡ್ನಾಪ್ ಪ್ರಕರಣದಲ್ಲಿ 14 ಮಂದಿ ಆರೊಪಿಗಳು
14 ಪ್ರಕರಣದ ಆರೋಪಿಗಳು: ವೀರಪ್ಪನ್, ಸೇತುಕುಳಿ ಗೋವಿಂದನ್, ರಂಗಸ್ವಾಮಿ, ಚಂದ್ರಗೌಡ ಮಲ್ಲು, ರಮೇಶ್, ಆಂಡ್ರಿಲ್ ಎಳುಮಲೈ, ದೊಡ್ಡ ಗಾಜನೂರು ಬಸವಣ್ಣ, ಪುಟ್ಟಸ್ವಾಮಿ, ಅಮೃತ ಲಿಂಗಮ್, ನಾಗರಾಜು, ಕಲ್ಮಂಡಿ ರಾಮನ್, ಅನೈಕರೈ ಮಾರನ್, ಕಡಲೂರ್ ಗೋವಿಂದರಾಜನ್, ಜಯಂಕೊಂಡಮ್ ಸೆಲ್ವಂ
ಆರೋಪಿಗಳ ಪೈಕಿ ಮೃತರು: ವೀರಪ್ಪನ್, ಸೇತುಕುಳ ಗೋವಿಂದನ್, ಚಂದ್ರಗೌಡ, ಮಲ್ಲು
ನಾಪತ್ತೆ : ರಮೇಶ್
ಖುಲಾಸೆಗೊಂಡವರು: ಆಂಡ್ರಿಲ್ ಎಳುಮಲೈ, ದೊಡ್ಡ ಗಾಜನೂರು ಬಸವಣ್ಣ, ಪುಟ್ಟಸ್ವಾಮಿ, ಅಮೃತ ಲಿಂಗಮ್, ನಾಗರಾಜು, ಕಲ್ಮಂಡಿ ರಾಮನ್, ಅನೈಕರೈ ಮಾರನ್, ಕಡಲೂರ್ ಗೋವಿಂದರಾಜನ್, ಜಯಂಕೊಂಡಮ್ ಸೆಲ್ವಂ.

ಸಾಕ್ಷಿಗಳು: ರಾಜ್ ಕುಮಾರ್ ಸಂಬಂಧಿ
ಸಾಕ್ಷಿಗಳು: ರಾಜ್ ಕುಮಾರ್ ಸಂಬಂಧಿ ಎಸ್ಎ ಗೋವಿಂದರಾಜ್(ಪಾರ್ವತಮ್ಮ ಅವರ ತಮ್ಮ), ಪ್ರತ್ಯಕ್ಷ ಸಾಕ್ಷಿಯಾಗಿದ್ದ ಪಾರ್ವತಮ್ಮ ರಾಜ್ ಕುಮಾರ್. 2016 ರಲ್ಲಿ ಮದ್ರಾಸ್ ಹೈಕೋರ್ಟ್ ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿರುವ ಪಾರ್ವತಮ್ಮ ಅವರು ಖುದ್ದು ಕೋರ್ಟಿಗೆ ಹಾಜರಾಗುವಂತೆ ಸೂಚಿಸಿತ್ತು.ಆದರೆ, ಆನಾರೋಗ್ಯದ ಕಾರಣ ಕೋರ್ಟಿಗೆ ಹಾಜರಾಗಲೇ ಇಲ್ಲ. 2017ರಲ್ಲಿ ಪಾರ್ವತಮ್ಮ ನವರು ನಿಧನರಾದರು.

ಆರೋಪಿಗಳ ಮೇಲಿನ ಆರೋಪಗಳು
ಡಾ. ರಾಜ್ ಕುಮಾರ್ ಅವರು ಬಿಡುಗಡೆಯಾದ ಬಳಿಕ, ತಳವಾಡಿ ಪೊಲೀಸ್ ಠಾಣೆ ಅಧಿಕಾರಿಗಳು, ವೀರಪ್ಪನ್ ಹಾಗೂ 11 ಸಹಚರರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಎಫ್ ಐಆರ್ ಹಾಕಿದ್ದಲ್ಲದೆ, ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಐಪಿಸಿ ಸೆಕ್ಷನ್ 109, 120 ಬಿ(ಸಂಚು), 147, 14, 449, 364ಎ, 365 ಅಲ್ಲದೆ, ಕಿಡ್ನಾಪ್ ಸಂದರ್ಭದಲ್ಲಿ ಅಪಹರಣಕಾರರು ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಕಾರಣ ಕಾಯ್ದೆ ಸೆಕ್ಷನ್ 25 (1) (ಬಿ) ಹಾಗೂ 27 (1).

ವೀರಪ್ಪನ್ ಜತೆ ಮಾತುಕತೆ
ವೀರಪ್ಪನ್ ಜತೆ ಮಾತುಕತೆ : ಸತ್ಯಮಂಗಲಂ ಹಾಗೂ ಭಾವನಿ ಅರಣ್ಯ ಪ್ರದೇಶಗಳಲ್ಲಿದ್ದ ವೀರಪ್ಪನ್ ಭೇಟಿ ಮಾಡುವುದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ. ಡಾ. ರಾಜ್ ಕುಮಾರ್ ಕುಟುಂಬ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅವರ ಒತ್ತಾಯದ ಮೇರೆಗೆ ನಾನು ಐದಾರು ಬಾರಿ ವೀರಪ್ಪನ್ ಭೇಟಿ ಮಾಡಿ, ಡಾ. ರಾಜ್ ಅವರ ಆರೋಗ್ಯ ವಿಚಾರಿಸಿಕೊಂಡು ಬಂದೆ ಎಂದು ನಕ್ಕೀರನ್ ಪತ್ರಿಕೆ ಸಂಪಾದಕ ಗೋಪಾಲ್ ಅವರು ಪ್ರತಿಕ್ರಿಯಿಸಿದ್ದಾರೆ.
ಸತತ ನಾಲ್ಕು ಗಂಟೆಗಳ ಕಾಲ ವೀರಪ್ಪನ್ ಜತೆ ಮಾತುಕತೆ ನಡೆಸಿ, ಅವನನ್ನು ಒಪ್ಪಿಸುವಷ್ಟರಲ್ಲಿ ಸಾಕಾಯಿತು. ನನ್ನ ವೃತ್ತಿ ಬದುಕು, ಜೀವನ ಎಲ್ಲವೂ ರಾಜ್ ಅವರ ಬಿಡುಗಡೆ ಮೇಲೆ ನಿಂತಿತ್ತು. ದೇವರ ದಯೆ ರಾಜ್ ಕುಮಾರ್ ಅವರು ಜೀವಂತವಾಗಿ ಬಿಡುಗಡೆಯಾದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications