ಕುಡಿದು ಜನರ ಮೇಲೆ ವಾಹನ ಚಲಾಯಿಸಿದ ವ್ಯಕ್ತಿಗೆ ಮದ್ರಾಸ್ ಹೈಕೋರ್ಟ್ ವಿಭಿನ್ನ ಶಿಕ್ಷೆ

ಚೆನ್ನೈ, ಸೆ.13: ಕುಡಿದ ಅಮಲಿನಲ್ಲಿ ಕಾರು ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನು ಗಾಯಗೊಳಿಸಿರುವ ವ್ಯಕ್ತಿಯೊಬ್ಬರಿಗೆ ಮದ್ರಾಸ್ ಹೈಕೋರ್ಟ್ ಮಂಗಳವಾರ ವಿಭಿನ್ನ ಶಿಕ್ಷೆ ನೀಡಿದೆ.

ಕುಡಿದು ವಾಹನ ಚಲಾಯಿಸುವಂತಹ ಕೃತ್ಯಗಳಲ್ಲಿ ತೊಡಗಿರುವ ಅಪಾಯದ ಅರಿವಾಗುವವರೆಗೆ ಎರಡು ವಾರಗಳ ಕಾಲ ನಗರದ ಜನನಿಬಿಡ ಜಂಕ್ಷನ್‌ನಲ್ಲಿ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಕರಪತ್ರಗಳನ್ನು ಹಂಚಬೇಕು ಎಂದು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳಿಗೆ ಗಾಯಗೊಳಿಸಿದ ಆರೋಪದ ಮೇಲೆ ಬಂಧಿತರಾಗಿರುವ ಯುವಕನಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎ ಡಿ ಜಗದೀಶ್ ಚಂದ್ರ ಅವರು ಈ ನಿರ್ದೇಶನ ನೀಡಿದ್ದಾರೆ.

Drink and Driving: Madras High Courts Unique Punishment For Man

ಇಬ್ಬರು ಶ್ಯೂರಿಟಿಗಳೊಂದಿಗೆ 25,000 ರೂಪಾಯಿಯ ಬಾಂಡ್ ಅನ್ನು ಜಾರಿಗೊಳಿಸಿದ ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

ಜಾಮೀನು ನೀಡುವುದನ್ನು ವಿರೋಧಿಸಿದ ಪ್ರಾಸಿಕ್ಯೂಷನ್, ಆಗಸ್ಟ್ 23 ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಗಾದ ಅರ್ಜಿದಾರನು ತನ್ನ ವಾಹನವನ್ನು ದುಡುಕಿನ ಮತ್ತು ನಿರ್ಲಕ್ಷ್ಯದ ರೀತಿಯಲ್ಲಿ ಚಾಲನೆ ಮಾಡಿದ್ದಾನೆ. ಈ ವೇಳೆ ಮೂವರು ಪಾದಚಾರಿಗಳ ಮೇಲೆ ಹತ್ತಿಸಿ ಗಾಯಗೊಳಿಸಿದ್ದಾನೆ ಎಂದು ವಾದಿಸಿದರು. ಘಟನೆ ಬಳಿಕ ಆರೋಪಿ ಕೂಡ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿಸಿದರು.

Drink and Driving: Madras High Courts Unique Punishment For Man

ಆದಾಗ್ಯೂ, ಪ್ರಕರಣದ ಸತ್ಯ ಮತ್ತು ಸಂದರ್ಭಗಳನ್ನು ಪರಿಗಣಿಸಿ, ಆರೋಪಿಯನ್ನು ನಂಬಿರುವ ಕುಟುಂಬವಿದೆ ಮತ್ತು ಮೂವರು ಗಾಯಾಳುಗಳು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂಬುದನ್ನು ಪರಿಗಣಿಸಿ ನ್ಯಾಯಾಧೀಶರು ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದರು.

ಅರ್ಜಿದಾರರು ಪ್ರತಿದಿನ ಎರಡು ವಾರಗಳ ಕಾಲ ಅಡ್ಯಾರ್ ಪೊಲೀಸ್ ಠಾಣೆಗೆ ಹಾಜರಾಗಬೇಕು. ಬೆಳಗ್ಗೆ 9 ರಿಂದ 10 ಮತ್ತು ಸಂಜೆ 5 ರಿಂದ 7 ರವರೆಗೆ ಕರಪತ್ರಗಳನ್ನು ಹಂಚಬೇಕು. ನಂತರ, ಅಗತ್ಯವಿರುವಾಗ ಮತ್ತು ಪೊಲೀಸರ ಮುಂದೆ ವರದಿ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+