ತಮಿಳುನಾಡಿಗೆ ಭೇಟಿ ನೀಡಲು ಇ-ಪಾಸು ಕಡ್ಡಾಯ
ಚೆನ್ನೈ, ಅಕ್ಟೋಬರ್ 14 : ಕೋವಿಡ್ ಭೀತಿ ಹಿನ್ನಲೆಯಲ್ಲಿ ಬೇರೆ ರಾಜ್ಯಗಳಿಂದ ತಮಿಳುನಾಡಿಗೆ ಆಗಮಿಸುವ ಜನರಿಗೆ ಇ-ಪಾಸ್ ಕಡ್ಡಾಯಗೊಳಿಸಲಾಗುತ್ತದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ರಾಜ್ಯದಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 6,65,930.
ಮದ್ರಾಸ್ ಹೈಕೋರ್ಟ್ಗೆ ತಮಿಳುನಾಡು ಸರ್ಕಾರ ಈ ಕುರಿತು ಮಾಹಿತಿ ನೀಡಿದೆ. ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೋಕೇಟ್ ಜನರಲ್ ವಿಜಯ್ ನಾರಾಯಣ್ ಈ ಕುರಿತು ಮಾಹಿತಿಯನ್ನು ನೀಡಿದ್ದಾರೆ.
ಹೊಸ ನಿಯಮಗಳ ಪ್ರಕಾರ ರಾಜ್ಯಕ್ಕೆ ಆಗಮಿಸುವ ಜನರು ಇ-ಪಾಸ್ ಪಡೆಯಲು ಮೂಲ ಮಾಹಿತಿಗಳನ್ನು ಭರ್ತಿ ಮಾಡಬೇಕು. ಕೋವಿಡ್ ಸೋಂಕಿತರ ಜೊತೆ ಸಂಪರ್ಕ ಹೊಂದಿವರನ್ನು ಪತ್ತೆ ಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಘಟ್ಟ ಪ್ರದೇಶಗಳಿಗೆ ಪ್ರಯಾಣ ಮಾಡುವಾಗ ಇ-ಪಾಸ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ಘಟ್ಟ ಪ್ರದೇಶದಲ್ಲಿ ಖಾಯಂ ವಿಳಾಸ ಹೊಂದಿರುವವರಿಗೆ ಮಾತ್ರ ಇ-ಪಾಸ್ ನೀಡಲಾಗುತ್ತದೆ. ಪ್ರವಾಸಿಗರಿಗೆ ಪಾಸು ನೀಡುವುದಿಲ್ಲ ಎಂದು ಸರ್ಕಾರ ಹೇಳಿದೆ.
ಘಟ್ಟ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯಗಳು ಕಡಿಮೆ ಇರುವ ಕಾರಣ ಇಂತಹ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಮದ್ರಾಸ್ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಪ್ರಸ್ತುತ ಇದೇ ಮಾದರಿಯನ್ನು ಅನುಸರಿಸಲಾಗುತ್ತಿದೆ.
ಕೇಂದ್ರ ಗೃಹ ಇಲಾಖೆ ಅನ್ ಲಾಕ್ 3.0 ಮಾರ್ಗಸೂಚಿ ಪ್ರಕಟಿಸುವಾಗ ರಾಜ್ಯಗಳ ನಡುವೆ ಸಂಚಾರ ನಡೆಸಲು ಯಾವುದೇ ಪಾಸು ಕಡ್ಡಾಯಗೊಳಿಸಬಾರದು ಎಂದು ಹೇಳಿತ್ತು. ಆದ್ದರಿಂದ, ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮಾಹಿತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಸೂಚನೆ ನೀಡಿದರು.
ಅಕ್ಟೋಬರ್ 13ರಂದು ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ತಮಿಳುನಾಡಿನಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 43,239. ಇದುವರೆಗೂ ರಾಜ್ಯದಲ್ಲಿ 6 ಲಕ್ಷ ಜನರು ಗುಣಮುಖರಾಗಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications