ಜಯಲಲಿತಾಗೆ ಚಿಕಿತ್ಸೆ ನೀಡುತ್ತಿರುವ 'ಎಕ್ಮೋ ಯಂತ್ರ' ಏನಿದು?
ಚೆನ್ನೈ, ಡಿಸೆಂಬರ್ 5: ತಮಿಳುನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಹೃದಯ ಸ್ಥಂಭನವಾದ ತಕ್ಷಣ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ. ಆಕೆ ಪರಿಸ್ಥಿತಿ ತೀರಾ ಗಂಭೀರವಾಗಿದೆ ಎಂದು ಅಪೋಲೋ ಅಸ್ಪತ್ರೆ ವೈದ್ಯರು ತಿಳಿಸಿದ್ದು, ಹೃದಯಕ್ಕೆ ಕೃತಕ ಸಾಧನ ಅಳವಡಿಸಲಾಗಿದೆ. ಇದೊಂದು ಚಿಕಿತ್ಸಾ ವಿಧಾನ.
ಜಯಲಲಿತಾ ಅವರಿಗೆ ಇಸಿಎಂಒ ಅಥವಾ ಎಕ್ಸ್ ಟ್ರಾ ಕಾರ್ಪೋರಿಯಲ್ ಮೆಂಬ್ರೇನ್ ಆಕ್ಸಿಜನೇಶನ್ ಎಂಬ ಯಂತ್ರವನ್ನು ಅಳವಡಿಸಲಾಗಿದೆ. ರೋಗಿಯ ಶ್ವಾಸಕೋಶ ಅಥವಾ ಹೃದಯ ಕೆಲಸ ಮಾಡದ ಸಂದರ್ಭದಲ್ಲಿ ದೇಹಕ್ಕೆ ಆಮ್ಲಜನಕ ಪೂರೈಸಲು ಈ ಯಂತ್ರ ಸಹಾಯ ಮಾಡುತ್ತದೆ.[ಜಯಾಗೆ ಆಗಿದ್ದು ಹೃದಯಾಘಾತವಲ್ಲ, ಹೃದಯ ಸ್ಥಂಭನ]

ಈ ಯಂತ್ರದ ಆಧಾರದಲ್ಲಿ ರೋಗಿಯು ಕೆಲವು ದಿನಗಳ ಕಾಲ ಅಥವಾ ವಾರಗಳ ಕಾಲ ಇರಬಹುದು ಎನ್ನುತ್ತಾರೆ ವೈದ್ಯರು. 'ಎಕ್ಮೋ ತುಂಬ ಪರಿಣಾಮಕಾರಿ ಯಂತ್ರ. ಇದರಿಂದ ರೋಗಿಯು ಬೇಗ ಚೇತರಿಸಿಕೊಳ್ಳುವ ಸಾಧ್ಯತೆಗಳು ಇರುತ್ತವೆ' ಎಂದು ಹೃದಯ ತಜ್ಞರು ಹೇಳುತ್ತಾರೆ. ಸದ್ಯಕ್ಕೆ ತಜ್ಞರ ತಂಡ, ಹೃದಯ ತಜ್ಞರು ಇತರ ವಿಷಯ ತಜ್ಞರು ಜಯಲಲಿತಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ನಿಗಾ ವಹಿಸಿದೆ.[ಜಯಾ ಹೃದಯ ಲಬ್ ಡಬ್ ಎನ್ನಲು ಕೃತಕ ಸಾಧನ ಬಳಕೆ]
ಶನಿವಾರದವರೆಗೆ ಜಯಲಲಿತಾ ಅವರು ಇನ್ನೇನು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳುತ್ತಾರೆ ಎಂಬ ಸುದ್ದಿಯೇ ಇತ್ತು. ಅದರೆ ದಿಢೀರನೆ ಪರಿಸ್ಥಿತಿ ಬದಲಾಗಿ ಭಾನುವಾರ ಹೃದಯ ಸ್ಥಂಭನವಾದ ಮಾಹಿತಿ ಹೊರಬಂತು. ಅಮ್ಮನ ಅಪಾರ ಸಂಖ್ಯೆಯ ಬೆಂಬಲಿಗರು ಬೇಗ ಗುಣವಗಲಿ ಎಂದು ಹರಕೆ ಹೊರುತ್ತಿದ್ದಾರೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications