ಇಪಿಎಸ್- ಒಪಿಎಸ್ ಬಣಕ್ಕೆ ಒಲಿದ ಎರಡು ಹಸಿರೆಲೆ ಚಿನ್ಹೆ
ಚೆನ್ನೈ, ನವೆಂಬರ್ 23: ಎರಡು ಹಸಿರು ಎಲೆಗಳ ಚಿನ್ಹೆ ಯಾರಿಗೆ ಸೇರಲಿದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ.
ತಮಿಳುನಾಡಿನ ಮುಖ್ಯಮಂತ್ರಿ ಇ ಪಳನಿಸ್ವಾಮಿ ಹಾಗೂ ಡಿಸಿಎಂ ಓ ಪನ್ನೀರ್ ಸೆಲ್ವಂ ಬಣಕ್ಕೆ ಅಖಿಲ ಭಾರತ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ)ನ ಅಧಿಕೃತ ಚುನಾವಣಾ ಚಿನ್ಹೆ ಲಭಿಸಿದೆ. ಈ ಮೂಲಕ ವಿಕೆ ಶಶಿಕಲಾ ಹಾಗೂ ಸಂಗಡಿಗರಿಗೆ ಭಾರಿ ಮುಖಭಂಗವಾಗಿದೆ.

ಮುಂಬರುವ ಆರ್ ಕೆ ನಗರ ವಿಧಾನಸಭೆ ಚುನಾವಣೆಯಲ್ಲಿ ಇದು ಯಾವ ರೀತಿ ಪರಿಣಾಮ ಬೀರುವುದೋ ಕಾದು ನೋಡಬೇಕಿದೆ.ಎರಡು ಹಸಿರು ಎಲೆಗಳ ಚಿನ್ಹೆ ದೊರೆಕಿರುವುದರಿಂದ ಇಪಿಎಸ್ ಹಾಗೂ ಒಪಿಎಸ್ ಬಣ ಈಗ ಅಧಿಕೃತವಾದ ಎಐಎಡಿಎಂಕೆ ಎನಿಸಿಕೊಂಡಿದೆ.
'ಕೇಂದ್ರ ಚುನಾವಣಾ ಆಯೋಗದಿಂದ ಈ ಕುರಿತಂತೆ ಮೌಖಿಕ ಆದೇಶ ಸಿಕ್ಕಿದೆ. ಅಧಿಕೃತ ಪ್ರಕಟಣೆಗಾಗಿ ಕಾದಿದ್ದೇವೆ' ಎಂದು ಎಐಎಡಿಎಂಕೆ ಸಂಸದ ವಿ ಮೈತ್ರಿಯನ್ ಅವರು ಎಎನ್ಐಗೆ ತಿಳಿಸಿದ್ದಾರೆ.
EC has given judgement in our favour, we are very happy. Majority of party workers supported us: Tamil Nadu CM Edappadi K. Palaniswami on two leaves symbol pic.twitter.com/G8vzLxjE8Z
— ANI (@ANI) November 23, 2017
ಎರಡೆಲೆ ಚಿನ್ಹೆಗಾಗಿ ಶಶಿಕಲಾ ಹಾಗೂ ಪನ್ನೀರ್ ಸೆಲ್ವಂ ಬಣದಿಂದ ಕಿತ್ತಾಟ ಆರಂಭವಾದ ಬೆನ್ನಲ್ಲೇ ಚಿನ್ಹೆಯನ್ನು ಬಳಸದಂತೆ ಚುನಾವಣಾ ಆಯೋಗ ತಾಕೀತು ಮಾಡಿತ್ತು. ಕಳೆದ ಏಳೆಂಟು ತಿಂಗಳಿನಿಂದ ಹತ್ತು ಬಾರಿ ವಾದ-ವಿವಾದ ಅಭಿಪ್ರಾಯ, ಮಾಹಿತಿ ಸಂಗ್ರಹಣೆ ಎಲ್ಲವೂ ಮುಗಿದ ಬಳಿಕ ಚುನಾವಣಾ ಆಯೋಗ ತನ್ನ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಿದೆ.
ಒಪಿಎಸ್ ಹಾಗೂ ಇಪಿಎಸ್ ಬಣ ವಿಲೀನವಾದ ಬಳಿಕ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಕೆ ಶಶಿಕಲಾ ಹಾಗೂ ದಿನಕರನ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. (ಒನ್ಇಂಡಿಯಾ ಸುದ್ದಿ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications