ಚೆನ್ನೈ ಟೆಕ್ಕಿ ಸ್ವಾತಿ ಹತ್ಯೆ ಕುರಿತ ಚಿತ್ರ ನಿಷೇಧಕ್ಕೆ ಆಗ್ರಹ
ಕಳೆದ ವರ್ಷ ಜೂನ್ 24ರಂದು ಚೆನ್ನೈನ ರೈಲ್ವೇ ನಿಲ್ದಾಣದಲ್ಲಿ ಇನ್ಫೋಸಿಸ್ ಮಹಿಳಾ ಟೆಕ್ಕಿ ಸ್ವಾತಿಯನ್ನು ರಾಮ್ ಕುಮಾರ್ ಎಂಬಾತ ಇರಿದು ಕೊಂದಿದ್ದಾಗಿ ಪೊಲೀಸರು ತಿಳಿಸಿದ್ದರು.
ಚೆನ್ನೈ, ಜೂನ್ 1: ಕಳೆದ ವರ್ಷ ಜನನಿಬಿಡ ರೈಲ್ವೇ ನಿಲ್ದಾಣವೊಂದರಲ್ಲಿ ಇನ್ಫೋಸಿಸ್ ಟೆಕಿ ಸ್ವಾತಿ ಎಸ್. ಎಂಬಾಕೆಯನ್ನು ರಾಮ್ ಕುಮಾರ್ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ.
ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಆನಂತರ, ಆರೋಪಿಯನ್ನು ಬಂಧಿಸಲಾಗಿತ್ತು ಹಾಗೂ ಆ ಆರೋಪಿ ಪೊಲೀಸ್ ಬಂಧನದಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದ.[ಚೆನ್ನೈ: ಇನ್ಫೋಸಿಸ್ ಮಹಿಳಾ ಉದ್ಯೋಗಿ ಬರ್ಬರ ಹತ್ಯೆ]

ಇದೆಲ್ಲಾ ಕಳೆದ ವರ್ಷ ಆಗಿದ್ದ ಘಟನೆ. ಆದರೆ, ಈಗ ಅದು ಮತ್ತೆ ಚರ್ಚೆಗೆ ಬಂದಿದೆ. ಕಾರಣ ಇಷ್ಟೇ. ಸ್ವಾತಿಯ ಆ ಕರುಣಾಜನಕ ಕಥೆಯನ್ನಾಧರಿಸಿ ತಮಿಳಿನಲ್ಲಿ ಚಿತ್ರವೊಂದು ತಯಾರಾಗಿದ್ದು, ಇದೇ ವಾರ ತೆರೆಗೆ ಬಂದಿದೆ. ಚಿತ್ರದ ಹೆಸರು 'ಸ್ವಾತಿ ಕೊಲೈ ವಳಕ್ಕು'.
ಈ ಚಿತ್ರದ ವಿರುದ್ಧ ಸಿಡಿದೆದ್ದಿರುವ ಸ್ವಾತಿಯ ತಂದೆ ಸಂತಾನ ಗೋಪಾಲ ಆ ಚಿತ್ರವನ್ನು ಬಹಿಷ್ಕರಿಸಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಕಾನೂನಿನ ಮೊರೆ ಹೋಗಲು ನಿರ್ಧರಿಸಿರು ಅವರು, ಅದರ ಆರಂಭಿಕ ಹೆಜ್ಜೆಯಾಗಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ದೂರಿನಲ್ಲೇನಿದೆ?
ತಮ್ಮ ಮಗಳ ಸಾವಿನ ಬಗ್ಗೆ ಚಿತ್ರ ಮಾಡಿರುವುದು ಸರಿಯಲ್ಲ ಹಾಗೂ ಅದು ಕಾನೂನು ಬಾಹಿರವಾದ ರೀತಿಯಲ್ಲಿ ಚಿತ್ರ ನಿರ್ಮಾಣ ಮಾಡಲಾಗಿದೆ ಎಂದು ಗೋಪಾಲನ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.[ಚೆನ್ನೈ: ಇನ್ಫೋಸಿಸ್ ಮಹಿಳಾ ಉದ್ಯೋಗಿ ಕೊಲೆಗಾರನ ರೇಖಾಚಿತ್ರ]
ಚಿತ್ರ ನಿರ್ಮಾಣ ಮಾಡುವ ಸಂಸ್ಥೆಯಾಗಲೀ, ಚಿತ್ರದ ನಿರ್ದೇಶಕರಾಗಲೀ ಚಿತ್ರ ಮಾಡುವ ಮುಂಚೆ ತಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ಕುಟುಂಬದ ಒಪ್ಪಿಗೆ ಪಡೆದಿಲ್ಲ ಎಂದಿದ್ದಾರೆ.
ಅಲ್ಲದೆ, ಚಿತ್ರದಲ್ಲಿ ಪ್ರೇಕ್ಷಕರನ್ನು ಆಕರ್ಷಿಸುವ ಸಲುವಾಗಿ ಸ್ವಾತಿಯ ವ್ಯಕ್ತಿತ್ವವನ್ನು ಕೊಂಚವಾದರೂ ತಿರುಚಿರುವ ಸಾಧ್ಯತೆಗಳಿರುತ್ತವೆ. ಹಾಗಾಗಿ, ಈ ಚಿತ್ರವನ್ನು ನಿಷೇಧಿಸಬೇಕು ಎಂದು ಅವರು ದೂರಿನಲ್ಲಿಕೋರಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications