ಮಾಸ್ಕ್ ಧರಿಸದಿದ್ದಕ್ಕೆ ಎಫ್ಐಆರ್, ಕಂಗಾಲಾದ ವ್ಯಕ್ತಿಗೆ ಕೋರ್ಟ್ ನೆಮ್ಮದಿ
ಚೆನ್ನೈ, ಮೇ 9: ದೇಶದೆಲ್ಲೆಡೆ ಕೋವಿಡ್ 19 ಮಾರ್ಗಸೂಚಿಗಳು ಕೆಲವೊಮ್ಮೆ ಸಾರ್ವಜನಿಕರಿಗೆ ಭಾರಿ ತೊಂದರೆ ಉಂಟು ಮಾಡಿದ ಪ್ರಸಂಗಗಳು ನಡೆದಿವೆ. ಕೋವಿಡ್ ಮಾರ್ಗಸೂಚಿ ಅನ್ವಯ ಫೇಸ್ ಮಾಸ್ಕ್ ಧರಿಸದ ಕಾರಣಕ್ಕೆ ಎಫ್ಐಆರ್ ದಾಖಲಾಗಿಸಲಾಗಿತ್ತು. ಇದರಿಂದ ಆ ವ್ಯಕ್ತಿಗೆ ಪಾಸ್ಪೋರ್ಟ್ ಪಡೆಯಲಾಗಿರಲಿಲ್ಲ. ಕೊನೆಗೆ ಆ ವ್ಯಕ್ತಿಗೆ ಮದ್ರಾಸ್ ಹೈಕೋರ್ಟ್ ಧಾವಿಸಿದೆ. ತಕ್ಷಣವೇ ಪಾಸ್ಪೋರ್ಟ್ ಒದಗಿಸುವಂತೆ ಅದು ಮಧುರೈನ ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗಳಿಗೆ ನಿರ್ದೇಶಿಸಿದೆ.
ಈ ಪ್ರಕರಣದಲ್ಲಿ ದಾಖಲಿಸಲಾಗಿರುವ ಎಫ್ಐಆರ್ ಅನ್ನು ಕ್ರಿಮಿನಲ್ ಮೊಕದ್ದಮೆ ಎಂದು ಪರಿಗಣಿಸದಂತೆ ಪೊಲೀಸರಿಗೆ ಸೂಚಿಸಿದೆ. ಇತರೆ ಎಲ್ಲಾ ನಿಯಮಗಳು ಸೂಕ್ತವಾಗಿದ್ದರೆ, ಅರ್ಜಿದಾರರಿಗೆ ಪಾಸ್ಪೋರ್ಟ್ ನೀಡುವಂತೆ ಅದು ಸಂಬಂಧಪಟ್ಟ ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ.
ಅರ್ಜಿದಾರ ವಿ ನಾಗಲಿಂಗಂ ಅವರು 2021ರ ಮಾರ್ಚ್ 29 ರಂದು ಪಾಸ್ಪೋರ್ಟ್ಗಾಗಿ ಮನವಿ ಸಲ್ಲಿಸಿದ್ದರು. ಆದರೆ ಮಧುರೈ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತಮ್ಮ ವಿರುದ್ಧ ಎಫ್ಐಆರ್ ಬಾಕಿ ಇರುವುದಾಗಿ ಸೂಚಿಸಿ ಕ್ರಿಮಿನಲ್ ಪ್ರಕರಣದ ಬಾಕಿ ಇರುವ ಬಗ್ಗೆ ಏಕೆ ಬಹಿರಂಗಪಡಿಸಿಲ್ಲ ಎಂದು ಅರ್ಜಿದಾರರನ್ನು ಪ್ರಶ್ನಿಸಿತ್ತು. ಇದಕ್ಕೆ ಅರ್ಜಿದಾರರು ಸೂಕ್ತ ಉತ್ತರ ನೀಡಿದ್ದರೂ ಕಚೇರಿ ಸ್ಪಂದಿಸಿರಲಿಲ್ಲ. ಹೀಗಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

"ರೋಗ ವ್ಯಾಪಿಸಿರುವಾಗ ದ್ವಿಚಕ್ರ ವಾಹನದಲ್ಲಿ ಪಯಣಿಸುತ್ತಿದ್ದ ವೇಳೆ ಮುಖಗವಸು ಧರಿಸಿಲ್ಲ ಎಂಬ ಕಾರಣಕ್ಕೆ ಮಾತ್ರ ಅರ್ಜಿದಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂಬುದು ದಾಖಲೆಗಳಿಂದ ತಿಳಿದುಬಂದಿದೆ. ಆದರೆ ಎಫ್ಐಆರ್ ಖುದ್ದು ಅಂತಿಮ ವರದಿಯಾಗಿ ಬದಲಾಗದ ಹೊರತು ಅದನ್ನು ಕ್ರಿಮಿನಲ್ ಮೊಕದ್ದಮೆ ಎಂದು ಭಾವಿಸಲಾಗದು" ಎಂಬುದಾಗಿ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ. (ಮಾಹಿತಿ ಕೃಪೆ: ಬಾರ್ ಅಂಡ್ ಬೆಂಚ್)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications