ಎಐಎಡಿಎಂಕೆ ಮಾಜಿ ಮುಖಂಡೆ ಶಶಿಕಲಾ ವಿರುದ್ಧ ಎಫ್ಐಆರ್ ದಾಖಲು
ಚೆನ್ನೈ, ಜೂನ್ 30: ಎಐಎಡಿಎಂಕೆ ಮಾಜಿ ಮುಖಂಡೆ ವಿಕೆ ಶಶಿಕಲಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ರೋಶಾನಾಯ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ತಮಿಳುನಾಡಿನ ಮಾಜಿ ಸಚಿವ ಷಣ್ಮುಗಂ ಅವರನ್ನು ಬೆದರಿಸಿದ ಆರೋಪದ ಮೇಲೆ ಶಶಿಕಲಾ ಮತ್ತು 501 ಬೆಂಬಲಿಗರು ಸೇರಿದಂತೆ ಪ್ರಕರಣಗಳು ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.
ಎಐಎಡಿಎಂಕೆ ಮಾಜಿ ಸಚಿವ ಸಿವಿ ಷಣ್ಮುಗಂಗೆ ಸಾಮಾಜಿಕ ಮಾಧ್ಯಮ ಮತ್ತು ಮೊಬೈಲ್ ಫೋನ್ ಮೂಲಕ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಆಪ್ತೆ ಶಶಿಕಲಾ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) 109ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಶಶಿಕಲಾ ಅವರ ಮತ್ತೊಂದು ಆಡಿಯೊ ಕ್ಲಿಪ್ ಹೊರಬಂದಿದ್ದು ಶಶಿಕಲಾ ಅನರ್ಹ ಮೂವರು ಶಾಸಕರೊಂದಿಗೆ ಮಾತನಾಡಿದ್ದಾರೆ. ಅದರಲ್ಲಿ ಪನ್ನೀರ್ಸೆಲ್ವಂ ಸೇರಿದಂತೆ 11 ಶಾಸಕರ ಅನರ್ಹತೆಯನ್ನು ತಡೆದದ್ದು ತಾನು ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ತದನಂತರ ಪನ್ನೀರ್ ಸೆಲ್ವಂ ಮತ್ತು ಮಾಜಿ ಸಿಎಂ ಎಡಪಡ್ಡಿ ಕೆ ಪಳನಿಸ್ವಾಮಿ ಒಟ್ಟಾಗಿ ನಂತರ ಅವರು 18 ಶಾಸಕರನ್ನು ಪಕ್ಷದಿಂದ ಅನರ್ಹಗೊಳಿಸಿದರು ಎಂದು ಮಾತನಾಡಿದ್ದಾರೆ.
ಶಶಿಕಲಾ ಪಿಎ ಕಾರ್ತಿಕೇಯನ್ ಕಳುಹಿಸಿದ ಆಡಿಯೊ ಕ್ಲಿಪ್ನಲ್ಲಿ ಮಾಜಿ ಶಾಸಕ ಕದಿರ್ಕಮು ಅವರೊಂದಿಗಿನ ಸಂವಾದದಲ್ಲಿ ತನ್ನ ಮತ್ತು ಪಕ್ಷದ ವಿರುದ್ಧ ದಂಗೆ ಎದ್ದ ಕಾರಣಕ್ಕಾಗಿ ಮಾಜಿ ಸಿಎಂ ಒ ಪನ್ನೀರ್ಸೆಲ್ವಂ ಮತ್ತು ಇತರ ಹತ್ತು ಶಾಸಕರನ್ನು ಅನರ್ಹಗೊಳಿಸದಂತೆ ಪಕ್ಷಕ್ಕೆ ಸೂಚನೆ ನೀಡಿದ್ದೇನೆ ಎಂದು ಶಶಿಕಲಾ ಹೇಳಿಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications