ಕೊಯಮುತ್ತೂರಿನಲ್ಲಿ ಐವರು ಶಂಕಿತ ನಕ್ಸಲರ ಬಂಧನ
ಚೆನ್ನೈ, ಮೇ 5 : ನಕ್ಸಲ್ ಚಟುವಟಿಕೆಯಲ್ಲಿ ತೊಡಗಿದ್ದ ಐವರನ್ನು ತಮಿಳುನಾಡು ಪೊಲೀಸರು ಕೊಯಮುತ್ತೂರಿನಲ್ಲಿ ಸೋಮವಾರ ರಾತ್ರಿ ಬಂಧಿಸಿದ್ದಾರೆ. ದಕ್ಷಿಣ ಭಾರತದಲ್ಲಿ ನಕ್ಸಲ್ ಚಟುವಟಿಕೆ ಚುರುಕುಗೊಳಿಸಲು ಇವರು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಬಂಧಿತ ಐವರ ಪೈಕಿ ಒಬ್ಬರು ಕೇರಳದ ಪ್ರಮುಖ ನಕ್ಸಲ್ ನಾಯಕರು ಮತ್ತು ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರು. ಆಂಧ್ರಪ್ರದೇಶದ ಪೊಲೀಸರು ತಮಿಳುನಾಡಿಗೆ ಆಗಮಿಸಿದ್ದು, ಬಂಧಿತರ ವಿಚಾರಣೆ ನಡೆಸುತ್ತಿದ್ದಾರೆ. ಐವರಿಗೆ ಆಂಧ್ರಪ್ರದೇಶದಲ್ಲಿ ಇರುವ ಸಂಪರ್ಕಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಣೆ ಮಾಡುತ್ತಿದ್ದಾರೆ.

ಗುಪ್ತಚರ ಮಾಹಿತಿ ಇತ್ತು : ದಕ್ಷಿಣದ ರಾಜ್ಯಗಳಲ್ಲಿ ತಮ್ಮ ಸಂಘಟನೆಯನ್ನು ಬಲಪಡಿಸಲು ನಕ್ಸಲರು ಪ್ರಯತ್ನ ನಡೆಸಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಲವು ತಿಂಗಳ ಹಿಂದೆ ಲಭ್ಯವಾಗಿತ್ತು. ಹಲವರು ನಕ್ಸಲರು ತಮಿಳುನಾಡಿನಲ್ಲಿ ಸೇರಲಿದ್ದು, ಮುಂದಿನ ಯೋಜನೆ ರೂಪಿಸಲಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. [ಚಿಕ್ಕಮಗಳೂರಿನಲ್ಲಿ ಇಬ್ಬರು ನಕ್ಸಲರ ಶರಣಾಗತಿ]
ಛತ್ತೀಸ್ಗಢ ಮತ್ತು ಜಾರ್ಖಂಡ್ ಮುಂತಾದ ರಾಜ್ಯಗಳಲ್ಲಿ ಪ್ರಭಾವ ಹೊಂದಿರುವ ನಕ್ಸಲರು ದಕ್ಷಿಣದ ರಾಜ್ಯಗಳತ್ತ ಮುಖ ಮಾಡಿದ್ದಾರೆ. ಆಂಧ್ರಪ್ರದೇಶ ಮತ್ತು ಕೇರಳದ ಪ್ರಮುಖ ನಾಯಕರು ಇವರೊಂದಿಗೆ ಕೈ ಜೋಡಿಸಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. [ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಆಂಧ್ರದ ನಕ್ಸಲ್ ದಂಪತಿ]
ಕಳೆದ ಕೆಲವು ದಿನಗಳಿಂದ ಕೇರಳ ಮತ್ತು ತಮಿಳುನಾಡಿನ ಗ್ರಾಮಾಂತರ ಪದೇಶಗಳಲ್ಲಿ ನಡೆಯುತ್ತಿರುವ ನಕ್ಸಲ್ ಚಟುವಟಿಕೆಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಣೆ ಮಾಡಿದ್ದರು. ಕೊಯಮುತ್ತೂರಿನಲ್ಲಿ ಸೋಮವಾರ ಐವರನ್ನು ಬಂಧಿಸಿರುವುದು ಪೊಲೀಸರ ತನಿಖೆಗೆ ಸಹಕಾರಿಯಾಗಲಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications