ದಿವಂಗತ ಪ್ರಧಾನಿ ಇಂದಿರಾ ಗಾಂಧಿಯನ್ನು ಬಂಧಿಸಿದ್ದ ವಿ.ಆರ್.ಲಕ್ಷ್ಮೀನಾರಾಯಣನ್ ನಿಧನ
ಚೆನ್ನೈ, ಜೂನ್ 23: ಭ್ರಷ್ಟಾಚಾರ ಪ್ರಕರಣದಲ್ಲಿ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರನ್ನು ಬಂಧಿಸಿದ್ದ ತಮಿಳುನಾಡಿನ ಮಾಜಿ ಡಿಜಿಪಿ ವಿ.ಆರ್.ಲಕ್ಷ್ಮೀನಾರಾಯಣನ್ ದೀರ್ಘ ಕಾಲದ ಅನಾರೋಗ್ಯದಿಂದ 91ನೇ ವಯಸ್ಸಿನಲ್ಲಿ ಭಾನುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಮೃತರಿಗೆ ಒಬ್ಬ ಮಗ ಹಾಗೂ ಇಬ್ಬರು ಮಗಳಿದ್ದಾರೆ.
1951ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾದ ಲಕ್ಷ್ಮೀನಾರಾಯಣನ್ ಅವರು ವಿಆರ್ ಎಲ್ ಅಂತಲೇ ಹೆಸರುವಾಸಿ. ಮದುರೈನಲ್ಲಿ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹುದ್ದೆಯಿಂದ ವೃತ್ತಿ ಬದುಕು ಆರಂಭಿಸಿದ ಅವರು, ಸಿಬಿಐನಲ್ಲಿ ಜಂಟಿ ನಿರ್ದೇಶಕ ಹುದ್ದೆಯ ತನಕ ತಲುಪಿದವರು.
ಲಕ್ಷ್ಮೀನಾರಾಯಣನ್ ಅವರು ಜವಾಹರ್ ಲಾಲ್ ನೆಹರೂ, ಇಂದಿರಾಗಾಂಧಿ, ಚರಣ್ ಸಿಂಗ್, ಮೊರಾರ್ಜಿ ದೇಸಾಯಿ ಹೀಗೆ ವಿವಿಧ ಪ್ರಧಾನಿಗಳ ಅಡಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಭ್ರಷ್ಟಾಚಾರ ಹಗರಣದಲ್ಲಿ ಇಂದಿರಾಗಾಂಧಿ ಅವರನ್ನು 1977ರಲ್ಲಿ ಲಕ್ಷ್ಮೀನಾರಾಯಣನ್ ಬಂಧಿಸಿದ್ದರು.

1985ರಲ್ಲಿ ತಮಿಳುನಾಡಿನ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಲಕ್ಷ್ಮೀನಾರಾಯಣನ್ ನಿವೃತ್ತರಾಗಿದ್ದರು. ಅವರು ಭಾನುವಾರ ಮಧ್ಯರಾತ್ರಿ ತೀರಿಕೊಂಡಿದ್ದಾರೆ. ಜೂನ್ ಇಪ್ಪತ್ತೈದನೇ ತಾರೀಕಿನಂದು ಅಂತ್ಯಕ್ರಿಯೆ ನಡೆಯಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications