ಶಶಿಕಲಾ ಗ್ಯಾಂಗ್ ನಿಂದ ನಿರಂತರ ಬೆದರಿಕೆ : ದೀಪಾ ಜಯಕುಮಾರ್
ಚೆನ್ನೈ, ಮಾರ್ಚ್ 13 : "ನನಗೆ ಶಶಿಕಲಾ ನಟರಾಜನ್ ಗ್ಯಾಂಗ್ ನಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ, ನನ್ನಗೆ ಸತತವಾಗಿ ಕಿರುಕುಳ ನೀಡಲಾಗುತ್ತಿದೆ" ಎಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಆರೋಪಿಸಿದ್ದಾರೆ.
ದೀಪಾ ಜಯಕುಮಾರ್ ಅವರು, ಹಿಂದೆ ಪನ್ನೀರ್ ಸೆಲ್ವಂ ಅವರು ಮಾಡಿದಂತೆ, ಜಯಲಲಿತಾ ಅವರ ಸಮಾಧಿಯ ಮುಂದೆ ಅರ್ಧ ಗಂಟೆ ಧ್ಯಾನಸ್ಥರಾಗಿ ಕುಳಿತ ನಂತರ, ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಆರ್ ಕೆ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದನ್ನು ಪ್ರಕಟಿಸಿದ ಮೇಲೆ, ಸ್ಪರ್ಧೆಯಿಂದ ಹಿಂದೆ ಸರಿಯಬೇಕೆಂದು ಹಲವಾರು ಕಡೆಗಳಿಂದ ತೀವ್ರ ಒತ್ತಡಗಳು ಬರುತ್ತಿವೆ, ಗೂಂಡಾಗಳಿಂದ ಬೆದರಿಕೆ ಕರೆಗಳು ಬರುತ್ತಿವೆ. ಅವರು ಯಾರು ಎಂದು ನನಗೆ ನಿಖರವಾಗಿ ಗೊತ್ತಿಲ್ಲ. ಆದರೆ ಅವರನ್ನು ಮನೆಗೂ ಕಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಜಯಲಲಿತಾ ಅವರು ಅಪೋಲೋ ಆಸ್ಪತ್ರೆಯಲ್ಲಿದ್ದಾಗ ನನಗೆ ಅವರನ್ನು ಭೇಟಿ ಮಾಡಲು ಕೂಡ ಅವಕಾಶ ಕೊಡಲಿಲ್ಲ ಮತ್ತು ಅವರು ತೀರಿಕೊಂಡ ನಂತರವೂ ಅಂತಿಮಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡಲಿಲ್ಲ. ಏಪ್ರಿಲ್ 12ರಂದು ಆರ್ ಕೆ ನಗರ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಪ್ರಕಟಿಸಿದ ಮೇಲೆ ಬೆದರಿಕೆ ಇನ್ನೂ ಜಾಸ್ತಿಯಾಗಿವೆ ಎಂದು ಅವರು ದೂರಿದರು.

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರು ಕೂಡ ಜಯಲಲಿತಾ ಸಮಾಧಿಯ ಮುಂದೆ ಮುಕ್ಕಾಲು ಗಂಟೆ ಧ್ಯಾನಸ್ಥರಾಗಿ ಕುಳಿತು ಎದ್ದನಂತರ ಬೇರೆಯದೇ ವ್ಯಕ್ತಿಯಾಗಿದ್ದರು. ಶಶಿಕಲಾ ವಿರುದ್ಧ ತಿರುಗಿಬಿದ್ದು, ಅವರು ಮುಖ್ಯಮಂತ್ರಿಯಾಗದಂತೆ ತಡೆಯೊಡ್ಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications