ಚೆನ್ನೈ: ಬಂಡೆದ್ದ ಎಐಎಡಿಎಂಕೆ 19 ಶಾಸಕರ ವಜಾಕ್ಕೆ ವ್ಹಿಪ್ ಜಾರಿ
ಎಐಎಡಿಎಂಕೆಯ ದಿನಕರನ್ ಬೆಂಬಲಿಗ ಶಾಸಕರ ಶಾಸಕತ್ವ ಅನರ್ಹಗೊಳಿಸಲು ತಮಿಳುನಾಡು ರಾಜ್ಯ ಸರ್ಕಾರದಿಂದ ವ್ಹಿಪ್ ಜಾರಿ. ತಮಿಳುನಾಡು ವಿಧಾನಸಭೆಯ ಸ್ಪೀಕರ್ ಗೆ ವ್ಹಿಪ್ ಮೂಲಕ ಆಗ್ರಹಿಸಿರುವ ರಾಜ್ಯ ಸರ್ಕಾರ.
ಚೆನ್ನೈ, ಆಗಸ್ಟ್ 24: ಮುಖ್ಯಮಂತ್ರಿ ಪಳನಿಸ್ವಾಮಿ ವಿರುದ್ಧ ದಂಗೆಯೆದ್ದು, ಅವರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಬೆದರಿಕೆ ಹಾಕಿರುವ ಆಡಳಿತಾರೂಢ ಪಕ್ಷದವರೇ ಆದ 19 ಶಾಸಕರನ್ನು ಅವರ ಶಾಸಕತ್ವದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿ, ತಮಿಳುನಾಡು ರಾಜ್ಯ ಸರ್ಕಾರ ವಿಧಾನಸಭಾಧ್ಯಕ್ಷರಿಗೆ ವ್ಹಿಪ್ ಜಾರಿಗೊಳಿಸಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಯಾದ ಎಸ್. ರಾಜೇಂದ್ರನ್ ಅವರು ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಫೆಬ್ರವರಿ 14ರಂದು ನಡೆದಿದ್ದ ಪಳನಿಸ್ವಾಮಿ ಸರ್ಕಾರದ ವಿಶ್ವಾಸ ಮತ ಯಾಚನೆಯ ಸಂದರ್ಭದಲ್ಲಿ, ಎಲ್ಲಾ ಎಐಎಡಿಎಂಕೆ ಶಾಸಕರು ಪಳನಿ ಸರ್ಕಾರಕ್ಕೆ ತಮ್ಮ ಬೆಂಬಲವಿರುವುದಾಗಿ ಘೋಷಿಸಿದ್ದಾರೆ. ಅವರ ಸರ್ಕಾರದ ಪರವಾಗಿ ಮತವನ್ನೂ ಚಲಾಯಿಸಿದ್ದಾರೆ. ಈಗ ಅವರು, ವರಸೆ ಬದಲಿಸಿರುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಅವರು ತಿಳಿಸಿದರು.

ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ, ಪಳನಿಸ್ವಾಮಿ ವಿರುದ್ಧ ಬಂಡಾಯವೆದ್ದಿರುವ ಎಲ್ಲಾ 19 ಶಾಸಕರ ಶಾಸಕತ್ವದಿಂದ ಅನರ್ಹಗೊಳಿಸಬೇಕೆಂದು ವ್ಹಿಪ್ ಜಾರಿಗೊಳಿಸಿರುವುದಾಗಿ ಅವರು ತಿಳಿಸಿದರು.
ಕೆಲವು ತಿಂಗಳಿಂದ ಎರಡು ಗುಂಪುಗಳಾಗಿ ಎಐಎಡಿಎಂಕೆ ಪಕ್ಷವು ಒಡೆದುಹೋಗಿತ್ತು. ಪಳನಿಸ್ವಾಮಿ ಬಣ ಹಾಗೂ ಪನ್ನೀರ್ ಸೆಲ್ವಂ ಬಣಗಳು ಪರಸ್ಪರ ಕೆಸರೆರೆಚಾಟದಲ್ಲಿ ನಿರತರಾಗಿದ್ದವು. ಆದರೆ, ಇತ್ತೀಚೆಗೆ, ಈ ಎರಡೂ ಬಣಗಳು ಪರಸ್ಪರ ಒಗ್ಗೂಡಿದವು.
ಇದು, ಪಕ್ಷದ ಅಧಿನಾಯಕಿ ಶಶಿಕಲಾ ಅವರ ಸಂಬಂಧಿ ದಿನಕರನ್ ಅವರಿಗೆ ಹಿಡಿಸಿರಲಿಲ್ಲ. ಪಕ್ಷದ ಉಪ ಮಹಾ ಕಾರ್ಯದರ್ಶಿಯಾಗಿರುವ ಅವರು, ತಮ್ಮನ್ನು ಪಳನಿ-ಪನ್ನೀರ್ ಇಬ್ಬರೂ ಮೂಲೆಗುಂಪಾಗಿಸುತ್ತಾರೆಂಬ ಭೀತಿಯಲ್ಲಿ (ಅದು ನಿಜವೂ ಹೌದು) ತಮ್ಮನ್ನು ಬೆಂಬಲಿಸುವ ಶಾಸಕರನ್ನು ಸರ್ಕಾರದ ವಿರುದ್ಧ (ಪಳನಿಸ್ವಾಮಿ ವಿರುದ್ಧ) ತಿರುಗಿಬೀಳುವಂತೆ ಮಾಡಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications