ಸೂರ್ಯ ಹಾಗೂ 8 ನಟರಿಗೆ ಶುಭ ಸುದ್ದಿ ಕೊಟ್ಟ ಹೈಕೋರ್ಟ್
ಚೆನ್ನೈ, ಜುಲೈ 13:2009ರಲ್ಲಿ ಊಟಿ(ಉದಕಮಂಡಲ)ಯ ಪತ್ರಕರ್ತರೊಬ್ಬರು ನಟ ಸೂರ್ಯ ಹಾಗೂ 8 ಮಂದಿ ಸೆಲೆಬ್ರಿಟಿಗಳ ವಿರುದ್ಧ ಹಾಕಿರುವ ಮಾನನಷ್ಟ ಮೊಕದ್ದಮೆಯನ್ನು ಮದ್ರಾಸ್ ಹೈಕೋರ್ಟ್ ಗುರುವಾರದಂದು ರದ್ದುಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಊಟಿಯ ನೀಲಗಿರೀಸ್ ಕೋರ್ಟ್ ವಾರೆಂಟ್ ಜಾರಿಗೊಳಿಸಿತ್ತು. ತಮಿಳು ದೈನಿಕ ದಿನಮಲರ್ ನಲ್ಲಿ ನಟಿಯರ ವ್ಯಕ್ತಿತ್ವಕ್ಕೆ ಕಳಂಕ ತರುವ ರೀತಿಯಲ್ಲಿ ಪ್ರಕಟವಾಗಿದ್ದನ್ನು ಖಂಡಿಸಿ, ದಕ್ಷಿಣ ಭಾರತ ಸಿನಿತಾರೆಯರ ಸಂಘ(ನಡಿಗರ್ ಸಂಘಂ) 2009ರ ಅಗಸ್ಟ್7ರಂದು ಚೆನ್ನೈನಲ್ಲಿ ಸಭೆ ನಡೆಸಿದ್ದರು.

ಈ ಸಭೆಯಲ್ಲಿ ಪತ್ರಕರ್ತರ ವಿರುದ್ಧ ನಟ, ನಟಿಯರು ವಾಗ್ದಾಳಿ ನಡೆಸಿದ್ದರು. ಇದನ್ನು ಖಂಡಿಸಿ ಪತ್ರಕರ್ತರೊಬ್ಬರು ನಿಲಗೀರಿಸ್ ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು.
2011ರ ಡಿಸೆಂಬರ್ 19ರಂದು ಸೂರ್ಯ, ಸತ್ಯರಾಜ್, ಶರತ್ ಕುಮಾರ್, ಶ್ರೀಪ್ರಿಯಾ, ವಿಜಯಕುಮಾರ್, ಅರುಣ್ ವಿಜಯ್, ವಿವೇಕ್ ಮತ್ತು ಚೇರನ್ ಅವರಿಗೆ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿತ್ತು. ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಇವರೆಲ್ಲರು ಮದ್ರಾಸ್ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು.
ಆದರೆ, ಅರ್ಜಿ ವಜಾಗೊಂಡಿತ್ತು. ನಿಲಗಿರೀಸ್ ಕೋರ್ಟಿಗೆ ಖುದ್ದು ಹಾಜರಾಗದ ತಮಿಳು ಚಿತ್ರತಾರೆಯರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿತ್ತು. ಈಗ ಪ್ರಕರಣವನ್ನೇ ಹೈಕೋರ್ಟ್ ರದ್ದುಗೊಳಿಸಿದೆ.(ಪಿಟಿಐ)
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications