ತಮಿಳುನಾಡು; ಭಾರೀ ಮಳೆ 3 ಸಾವು, 4 ಜಿಲ್ಲೆಯಲ್ಲಿ ರೆಡ್ ಅಲರ್ಟ್
ಚೆನ್ನೈ, ಡಿಸೆಂಬರ್ 30; ತಮಿಳುನಾಡಿನಲ್ಲಿ ಭಾರೀ ಮಳೆಯಾಗಿದೆ. ರಾಜ್ಯದಲ್ಲಿ ಒಟ್ಟು 3 ಜನರು ಮೃತಪಟ್ಟಿದ್ದಾರೆ. ಚೆನ್ನೈನ ವಿವಿಧ ಪ್ರದೇಶಗಳು ಜಲಾವೃತವಾಗಿವೆ. ಶುಕ್ರವಾರವೂ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು, ಚೆನ್ನೈ, ಕಾಂಚಿಪುರಂ, ತಿರುವಳ್ಳೂರು ಮತ್ತು ಚೆಂಗಲ್ಪೇಟೆನಲ್ಲಿ ಭಾರೀ ಮಳೆ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ತಮಿಳುನಾಡಿನ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಸಚಿವ ಕೆ. ರಾಮಚಂದ್ರನ್ ಮಾತನಾಡಿದ್ದು, "ರಾಜ್ಯದಲ್ಲಿ ಮಳೆಯ ಅನಾಹುತದಿಂದ ಮೂವರು ಮೃತಪಟ್ಟಿದ್ದಾರೆ. ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ 20 ಸೆಂ. ಮೀ. ಮಳೆಯಾಗುವ ಮುನ್ಸೂಚನೆ ಇದೆ" ಎಂದು ಹೇಳಿದ್ದಾರೆ.
#WATCH | Tamil Nadu: Heavy rainfall causes traffic jam at Chennai's Mount Road
— ANI (@ANI) December 30, 2021
Chennai metro says it has announced to extend service timing by an hour till 12 midnight to enable passengers to reach their homes safely pic.twitter.com/1AJCWQ8lSy
ಚೆನ್ನೈ ನಗರದಲ್ಲಿ ಸುಮಾರು 17 ಸೆಂ. ಮೀ. ಮಳೆಯಾಗಿದೆ. ಇದರಿಂದಾಗಿ ನಗರದ ಹಲವಾರು ರಸ್ತೆಗಳು ಜಾಲವೃತವಾಗಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಟ ನಡೆಸುತ್ತಿದ್ದಾರೆ.
ಮಳೆಯಿಂದಾಗಿ ಚೆನ್ನೈನ ಮೌಂಟ್ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಜನರಿಗೆ ಅನುಕೂಲವಾಗಲು ರಾತ್ರಿ 12 ಗಂಟೆಯ ತನಕ ಮೆಟ್ರೋ ರೈಲು ಓಡಿಸಲಾಗುತ್ತದೆ ಎಂದು ಚೆನ್ನೈ ಮೆಟ್ರೋ ನಿಗಮ ಘೋಷಣೆ ಮಾಡಿದೆ.
ಗುರುವಾರ ರಾತ್ರಿ ಭಾರೀ ಮಳೆಯಾಗಬಹುದು. ಶುಕ್ರವಾರ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 6 ಗಂಟೆಗಳ ಕಾಲ ಚೆನ್ನೈ ಮತ್ತು ಸುತ್ತಮುತ್ತಲು ಮುಳೆ ಮುಂದುವರೆಯುವ ಸಾಧ್ಯತೆ ಇದೆ.
ರಾತ್ರಿ 8.30ರ ಮಾಹಿತಿಯಂತೆ ಚೆನ್ನೈ (ಎಂಆರ್ಸಿ ನಗರ) 198 ಮಿ. ಮೀ., ನಾಗಬಾಕಂನಲ್ಲಿ 160 ಮಿ. ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಗುರುವಾರ ಮಧ್ಯಾಹ್ನದಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ 17.65 ಸೆಂ. ಮೀ. ಮಳೆ ಎಂಆರ್ಸಿ ನಗರದಲ್ಲಿ ದಾಖಲಾಗಿದೆ. ನಾಗಬಾಕಂನಲ್ಲಿ 14.65 ಸೆಂ. ಮೀ. ಮತ್ತು ಮೀನಬಾಕಂನಲ್ಲಿ 10 ಸೆಂ. ಮೀ. ಮಳೆಯಾಗಿದೆ.
ತಮಿಳುನಾಡಿನ ಉತ್ತರ ಕರಾವಳಿ, ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ ತಿಂಗಳಿನಲ್ಲಿಯೂ ತಮಿಳುನಾಡಿನಲ್ಲಿ ಭಾರೀ ಮಳೆಯಾಗಿತ್ತು.
ಭಾರತದ ಪೂರ್ವ ಹಾಗೂ ಈಶಾನ್ಯ ಭಾಗದಲ್ಲಿ ಐದು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಛತ್ತೀಸ್ಗಢ್, ವಿದರ್ಭ, ಜಾರ್ಖಂಡ್, ಓಡಿಶಾದಲ್ಲಿಯೂ ಮುಂದಿನ 24 ಗಂಟೆ ಮಳೆಯಾಗುವ ನಿರೀಕ್ಷೆ ಇದೆ.
ಭಾರತೀಯ ಹವಾಮಾನ ಇಲಾಖೆ ಅರುಣಾಚಲ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯದ ಹಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಚದುರಿದಂತೆ ಮಳೆಯಾಗಲಿದೆ. ಹಿಮ ಸುರಿಯಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ. ಜನವರಿ 7ರ ಬಳಿಕ ವಾತಾವರಣದಲ್ಲಿ ಮತ್ತೆ ಬದಲಾವಣೆಯಾಗಲಿದೆ ಎಂದು ತಿಳಿಸಲಾಗಿದೆ.
ಈ ವರ್ಷ ಮುಂಗಾರು ಅವಧಿಯಲ್ಲಿ ಆರಂಭವಾದ ಮಳೆ ನವೆಂಬರ್ ತನಕ ಸುರಿದಿದೆ. ವಿವಿಧ ರಾಜ್ಯಗಳಲ್ಲಿ ಅಕಾಲಿಕ ಮಳೆ ಸುರಿದಿದ್ದು, ಅಪಾರ ಹಾನಿ ಮಾಡಿದೆ. ಡಿಸೆಂಬರ್ ತಿಂಗಳಿನಲ್ಲಿಯೇ ಮಳೆ ಬಿಡುವು ಕೊಟ್ಟಿತ್ತು. ತಿಂಗಳ ಅಂತ್ಯಕ್ಕೆ ಮತ್ತೆ ಆರಂಭವಾಗಿದೆ.
-
IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ











Click it and Unblock the Notifications