Get Updates
Get notified of breaking news, exclusive insights, and must-see stories!

ಭಾರಿ ಮಳೆ ಎಚ್ಚರಿಕೆ: ತಮಿಳುನಾಡಿನ ನೀಲಗಿರಿಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಚೆನ್ನೈ, ಆಗಸ್ಟ್ 2: ದೇಶಾದ್ಯಂತ ವರುಣನ ಆರ್ಭಟ ಮುಂದುವರೆದಿದೆ, ಈಶಾನ್ಯ ರಾಜ್ಯಗಳ ಬಳಿಕ ಈಗ ದಕ್ಷಿಣದ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕೇರಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇತ್ತ ತಮಿಳುನಾಡಿನಲ್ಲೂ ಭಾರಿ ಮಳೆಯಾಗುತ್ತಿದೆ.

ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣ ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರಿ ಮಳೆಯಾಗುವ ಎಚ್ಚರಿಕೆ ಬೆನ್ನಲ್ಲೇ ನೀಲಗಿರಿ ಜಿಲ್ಲೆಯಲ್ಲಿ ಬುಧವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪಿಟಿಐ ವರದಿಯ ಪ್ರಕಾರ, ತೆರವು ಪ್ರಕ್ರಿಯೆಯನ್ನು ಪ್ರಾರಂಭಿಸಲು 40 ಸದಸ್ಯರ ಎನ್‌ಡಿಆರ್‌ಎಫ್ ತಂಡವು ನೀಲಗಿರಿಗೆ ಆಗಮಿಸಿದೆ. ತಮಿಳುನಾಡಿನ ಹಲವಾರು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ತಂಡವನ್ನು ಸಿದ್ಧಪಡಿಸಲಾಗಿದೆ.

Heavy Rainfall Continues In Several Parts Of Tamil Nadu: Schools And Colleges Remain Shut For Wednesday

ಪಿಟಿಐ ಅಧಿಕೃತ ಮೂಲಗಳನ್ನು ಉಲ್ಲೇಖಿಸಿ, "ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವನ್ನು ಮಂಗಳವಾರ ಮುಂಜಾನೆ ಅರಕೋಣಂನಿಂದ ಜಿಲ್ಲೆಗೆ ಆಗಮಿಸಿದೆ ಮತ್ತು ಕುನ್ನೂರು, ಗುಡಲೂರು ಮತ್ತು ಕೊತ್ತಗಿರಿಗೆ ಬ್ಯಾಚ್‌ಗಳಲ್ಲಿ ನಿಯೋಜಿಸಲಾಗುವುದು" ಎಂದು ಮಾಹಿತಿ ನೀಡಿದೆ.

ಎಚ್ಚರಿಕೆಯಿಂದ ಇರುವಂತೆ ಮನವಿ

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಮತ್ತು ಮರಗಳು ಬೀಳುವ ನಿರೀಕ್ಷೆಯಿದೆ, ಜಿಲ್ಲಾಧಿಕಾರಿ ಎಸ್‌ಪಿ ಅಮೃತ್ ಎಲ್ಲಾ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿ ಮಳೆ ಮುಂದುವರಿದಿದ್ದು, ಹಲವಾರು ಭಾಗಗಳಲ್ಲಿ, ಜನರು ಹೆಚ್ಚಿನ ಕಾಳಜಿ ವಹಿಸುವಂತೆ ಮತ್ತು ಅನಗತ್ಯವಾಗಿ ಹೊರಗೆ ಹೋಗದಂತೆ ಕೇಳಿಕೊಳ್ಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ತಮಿಳುನಾಡಿನಲ್ಲಿ ಮಳೆಯ ಸ್ಥಿತಿ ಇದೇ ರೀತಿ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

Heavy Rainfall Continues In Several Parts Of Tamil Nadu: Schools And Colleges Remain Shut For Wednesday

ನೀಲಗಿರಿಯಲ್ಲಿ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಈ ಹೊಸ ಆದೇಶಗಳನ್ನು ಗಮನಿಸುವಂತೆ ಸೂಚಿಸಲಾಗಿದೆ. ಹೆಚ್ಚಿನ ನವೀಕರಣಗಳಿಗಾಗಿ ತಮ್ಮ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿರಲು ಸಹ ಅವರಿಗೆ ಸಲಹೆ ನೀಡಲಾಗುತ್ತದೆ.

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ

ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಗೋವಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಆಗಸ್ಟ್ 5ರವರೆಗೆ ಭಾರಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ.

Heavy Rainfall Continues In Several Parts Of Tamil Nadu: Schools And Colleges Remain Shut For Wednesday

ಮಳೆಯ ರೌದ್ರ ನರ್ತನಕ್ಕೆ ಈಗಾಗಲೇ ಕೇರಳ ನಲುಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ.

ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿರುವ ಬಗ್ಗೆಯೂ ವರದಿಯಾಗಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+