ಭಯಾನಕ ವಿಡಿಯೋ: ಸುಡುವ ಟೈರ್ ಎಸೆದ ತಮಿಳುನಾಡು ರೆಸಾರ್ಟ್ ಕಾರ್ಮಿಕರು: ಆನೆ ಸಾವು
ಚೆನ್ನೈ, ಜನವರಿ 22: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮಸಿನಗುಡಿಯಲ್ಲಿರುವ ಖಾಸಗಿ ರೆಸಾರ್ಟ್ನ ಸಿಬ್ಬಂದಿಯೊಬ್ಬರು ಸುಡುವ ಟೈರ್ ಅನ್ನು ಆನೆ ಮೇಲೆ ಎಸೆದಿದ್ದರಿಂದ ದಾರಿ ತಪ್ಪಿ ಬಂದಿದ್ದ ಕಾಡು ಆನೆ ಸಾವನ್ನಪ್ಪಿದೆ. ಇದು ಮಾನವನ ಕ್ರೌರ್ಯದ ಪರಮಾವಧಿ ಎಂದು ಹೇಳಬಹುದು.
ಟೈರ್ ಎಸೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆನೆಯ ಕಿವಿಯಲ್ಲಿ ರಕ್ತಸ್ರಾವವಾಗಿದ್ದು, ಮಸಿನಗುಡಿಯಲ್ಲಿ ಕೆಲವು ಅರಣ್ಯ ಇಲಾಖೆ ಕಾವಲುಗಾರರಿಗೆ ಪತ್ತೆಯಾಗಿದೆ. ಆದರೆ ಅದನ್ನು ಮುದುಮಲೈ ಅರಣ್ಯ ವ್ಯಾಪ್ತಿಯಲ್ಲಿರುವ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯುವ ಮೊದಲೇ ಅದು ಸತ್ತುಹೋಗಿತ್ತು. ಶವಪರೀಕ್ಷೆ ನಡೆಸಿದಾಗ ಸುಟ್ಟಗಾಯಗಳಿಂದಾಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಲಾಗಿದ್ದು, ಈ ಕೃತ್ಯ ಮಾಡಿದ ಇಬ್ಬರು ವ್ಯಕ್ತಿಗಳನ್ನು ರೆಸಾರ್ಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ಮಾಲೀಕರಾದ ರೇಮಂಡ್ ಮತ್ತು ಸಿಬ್ಬಂದಿ ಪ್ರಶಾಂತ್ ಅವರನ್ನು ಬಂಧಿಸಲಾಗಿದೆ. ತನಿಖೆಯ ವೇಳೆ, ಆನೆಯ ಮೇಲೆ ಸುಡುವ ಟೈರ್ ಎಸೆಯುವ ವಿಡಿಯೋಗಳು ಅವರ ಫೋನ್ಗಳಲ್ಲಿ ಕಂಡುಬಂದಿವೆ.

ಘಟನೆಯ ತುಣುಕನ್ನು ಅರಣ್ಯ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ. ಆನೆಯ ಮೇಲೆ ಕಟ್ಟಡದಿಂದ ಸುಡುವ ಟೈರ್ ಅನ್ನು ಎಸೆಯಲಾಗಿದ್ದು, ಕಿವಿಗೆ ಗಾಯವಾಗಿದೆ ಎಂದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿದೆ. ನೋವು ತಾಳಲಾರದೆ ಆನೆ ಓಡಿಹೋಗಿದೆ.
ರೆಸಾರ್ಟ್ ಕಾರ್ಮಿಕರು ಆನೆಯ ಕಡೆಗೆ ಬೆಂಕಿಯನ್ನು ಎಸೆಯುವ ಮೂಲಕ ಅದನ್ನು ಹೆದರಿಸಲು ಪ್ರಯತ್ನಿಸಿರುವ ಹಾಗೆ ಕಂಡು ಬರುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅದು ಕೋಲು ಅಥವಾ ಇನ್ನಾವುದೇ ವಸ್ತುವಾಗಿದ್ದರೆ ಅದು ಆನೆಗೆ ಬಡಿದು ಬೀಳುತ್ತಿತ್ತು. ಆದರೆ ಅದು ಟೈರ್ ಆಗಿದ್ದರಿಂದ, ಅದು ಆನೆಯ ಕಿವಿಯಲ್ಲಿ ಹೊತ್ತು ಸಿಲುಕಿಕೊಂಡಿದೆ.
Barbaric act in Nilgiris, Tamilnadu. An elephant was attacked with a burning tyre, in a private resort, killing the animal. Hope the guilty are punished for this inhumane act of violence. #WA #EveryLifeMatters #SaveWildlife pic.twitter.com/iLJn2yxgdq
— Praveen Angusamy, IFS 🐾 (@PraveenIFShere) January 22, 2021
ನಂತರ, ಆನೆ ಓಡಿ ಹೋಗಿ ಡ್ಯಾಂ ಬಳಿ ಬಿದ್ದಿರುವುದು ಕಂಡುಬಂದಿದೆ. ಅರಣ್ಯ ಇಲಾಖೆಯ ಪಶುವೈದ್ಯರು ಅದನ್ನು ಚೇತರಿಸಿಕೊಳ್ಳುವಂತೆ ಪ್ರಯತ್ನಿಸಿದ್ದು, ಆದರೆ ವ್ಯರ್ಥವಾಯಿತು.
ಕೀವು ತುಂಬಿದ ಸೆಪ್ಟಿಕ್ ಫಿಸ್ಟುಲಾ ಮತ್ತು ತೀವ್ರವಾದ ರಕ್ತಹೀನತೆ, ಹೈಪೋವೊಲೆಮಿಯಾಕ್ಕೆ ಕಾರಣವಾಗುವ ರಕ್ತದ ತೀವ್ರ ಹರಿದಿದ್ದರಿಂದಾಗಿ 50 ವರ್ಷದ ಆನೆ ಸಾವಿಗೀಡಾಯಿತು, ಆದರೂ ಕಿವಿಯಲ್ಲಿ ಸುಟ್ಟ ಗಾಯಗಳು ಆನೆಯ ಸಾವಿಗೆ ಕಾರಣವಾಗಲಿಲ್ಲ ಎಂದು ಪಶುವೈದ್ಯರು ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications