ಭಯಾನಕ ವಿಡಿಯೋ: ಸುಡುವ ಟೈರ್ ಎಸೆದ ತಮಿಳುನಾಡು ರೆಸಾರ್ಟ್ ಕಾರ್ಮಿಕರು: ಆನೆ ಸಾವು
ಚೆನ್ನೈ, ಜನವರಿ 22: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮಸಿನಗುಡಿಯಲ್ಲಿರುವ ಖಾಸಗಿ ರೆಸಾರ್ಟ್ನ ಸಿಬ್ಬಂದಿಯೊಬ್ಬರು ಸುಡುವ ಟೈರ್ ಅನ್ನು ಆನೆ ಮೇಲೆ ಎಸೆದಿದ್ದರಿಂದ ದಾರಿ ತಪ್ಪಿ ಬಂದಿದ್ದ ಕಾಡು ಆನೆ ಸಾವನ್ನಪ್ಪಿದೆ. ಇದು ಮಾನವನ ಕ್ರೌರ್ಯದ ಪರಮಾವಧಿ ಎಂದು ಹೇಳಬಹುದು.
ಟೈರ್ ಎಸೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆನೆಯ ಕಿವಿಯಲ್ಲಿ ರಕ್ತಸ್ರಾವವಾಗಿದ್ದು, ಮಸಿನಗುಡಿಯಲ್ಲಿ ಕೆಲವು ಅರಣ್ಯ ಇಲಾಖೆ ಕಾವಲುಗಾರರಿಗೆ ಪತ್ತೆಯಾಗಿದೆ. ಆದರೆ ಅದನ್ನು ಮುದುಮಲೈ ಅರಣ್ಯ ವ್ಯಾಪ್ತಿಯಲ್ಲಿರುವ ಹೆಚ್ಚಿನ ಚಿಕಿತ್ಸೆಗಾಗಿ ಕೊಂಡೊಯ್ಯುವ ಮೊದಲೇ ಅದು ಸತ್ತುಹೋಗಿತ್ತು. ಶವಪರೀಕ್ಷೆ ನಡೆಸಿದಾಗ ಸುಟ್ಟಗಾಯಗಳಿಂದಾಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಲಾಗಿದ್ದು, ಈ ಕೃತ್ಯ ಮಾಡಿದ ಇಬ್ಬರು ವ್ಯಕ್ತಿಗಳನ್ನು ರೆಸಾರ್ಟ್ನಲ್ಲಿ ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ಮಾಲೀಕರಾದ ರೇಮಂಡ್ ಮತ್ತು ಸಿಬ್ಬಂದಿ ಪ್ರಶಾಂತ್ ಅವರನ್ನು ಬಂಧಿಸಲಾಗಿದೆ. ತನಿಖೆಯ ವೇಳೆ, ಆನೆಯ ಮೇಲೆ ಸುಡುವ ಟೈರ್ ಎಸೆಯುವ ವಿಡಿಯೋಗಳು ಅವರ ಫೋನ್ಗಳಲ್ಲಿ ಕಂಡುಬಂದಿವೆ.

ಘಟನೆಯ ತುಣುಕನ್ನು ಅರಣ್ಯ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ. ಆನೆಯ ಮೇಲೆ ಕಟ್ಟಡದಿಂದ ಸುಡುವ ಟೈರ್ ಅನ್ನು ಎಸೆಯಲಾಗಿದ್ದು, ಕಿವಿಗೆ ಗಾಯವಾಗಿದೆ ಎಂದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿದೆ. ನೋವು ತಾಳಲಾರದೆ ಆನೆ ಓಡಿಹೋಗಿದೆ.
ರೆಸಾರ್ಟ್ ಕಾರ್ಮಿಕರು ಆನೆಯ ಕಡೆಗೆ ಬೆಂಕಿಯನ್ನು ಎಸೆಯುವ ಮೂಲಕ ಅದನ್ನು ಹೆದರಿಸಲು ಪ್ರಯತ್ನಿಸಿರುವ ಹಾಗೆ ಕಂಡು ಬರುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಅದು ಕೋಲು ಅಥವಾ ಇನ್ನಾವುದೇ ವಸ್ತುವಾಗಿದ್ದರೆ ಅದು ಆನೆಗೆ ಬಡಿದು ಬೀಳುತ್ತಿತ್ತು. ಆದರೆ ಅದು ಟೈರ್ ಆಗಿದ್ದರಿಂದ, ಅದು ಆನೆಯ ಕಿವಿಯಲ್ಲಿ ಹೊತ್ತು ಸಿಲುಕಿಕೊಂಡಿದೆ.
Barbaric act in Nilgiris, Tamilnadu. An elephant was attacked with a burning tyre, in a private resort, killing the animal. Hope the guilty are punished for this inhumane act of violence. #WA #EveryLifeMatters #SaveWildlife pic.twitter.com/iLJn2yxgdq
— Praveen Angusamy, IFS 🐾 (@PraveenIFShere) January 22, 2021
ನಂತರ, ಆನೆ ಓಡಿ ಹೋಗಿ ಡ್ಯಾಂ ಬಳಿ ಬಿದ್ದಿರುವುದು ಕಂಡುಬಂದಿದೆ. ಅರಣ್ಯ ಇಲಾಖೆಯ ಪಶುವೈದ್ಯರು ಅದನ್ನು ಚೇತರಿಸಿಕೊಳ್ಳುವಂತೆ ಪ್ರಯತ್ನಿಸಿದ್ದು, ಆದರೆ ವ್ಯರ್ಥವಾಯಿತು.
ಕೀವು ತುಂಬಿದ ಸೆಪ್ಟಿಕ್ ಫಿಸ್ಟುಲಾ ಮತ್ತು ತೀವ್ರವಾದ ರಕ್ತಹೀನತೆ, ಹೈಪೋವೊಲೆಮಿಯಾಕ್ಕೆ ಕಾರಣವಾಗುವ ರಕ್ತದ ತೀವ್ರ ಹರಿದಿದ್ದರಿಂದಾಗಿ 50 ವರ್ಷದ ಆನೆ ಸಾವಿಗೀಡಾಯಿತು, ಆದರೂ ಕಿವಿಯಲ್ಲಿ ಸುಟ್ಟ ಗಾಯಗಳು ಆನೆಯ ಸಾವಿಗೆ ಕಾರಣವಾಗಲಿಲ್ಲ ಎಂದು ಪಶುವೈದ್ಯರು ಹೇಳಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications