ನಮ್ಮ ಆಹಾರ ನಾವೇ ಬೆಳೆದುಕೊಳ್ಳೋಣ: ಚೆನ್ನೈ ವಿದ್ಯಾರ್ಥಿಗಳಿಗೆ ಆದರ್ಶ ಪಾಠ!
ಚೆನ್ನೈ, ಜುಲೈ 04: ಕೃಷಿ ಉತ್ಪನ್ನಗಳ ಕೊರತೆ ಎಂಬುದು ಒಂದು ಬಹುದೊಡ್ಡ ಸಮಸ್ಯೆಯಾಗಿ, ಎಷ್ಟೋ ದಿನಬಳಕೆಯ ಆಹಾರೋತ್ಪನ್ನಗಳಿಗಾಗಿ ವಿದೇಶಗಳ ಮೇಲೆ ಅವಲಂಬಿತವಾಗಬೇಕಾದ ಪರಿಸ್ಥಿತಿ ಇಂದಿದೆ. ಇಂಥ ಸಂದರ್ಭದಲ್ಲಿ ನಮ್ಮ ಆಹಾರವನ್ನು ನಾವೇ ಬೆಳೆದುಕೊಳ್ಳುವುದು ಹೇಗೆ ಎಂದು ಮಕ್ಕಳಿಗೆ ಪ್ರಾಯೋಗಿಕವಾಗಿ ಪಾಠ ಮಾಡುವ ಅತ್ಯುನ್ನತ ಕೆಲಸಕ್ಕೆ ಸ್ವಸಹಾಯ ಸಂಘವೊಂದು ಕೈಹಾಕಿದೆ.
ತಮಿಳುನಾಡಿನ ಚೆನ್ನೈನ ಈ ಸ್ವಸಹಾಯ ಸಂಘ 100 ಕ್ಕೂ ಹೆಚ್ಚು ಕಾರ್ಪೋರೇಷನ್ ಶಾಲೆಯ ವಿದ್ಯಾರ್ಥಿಗಳಿಗೆ ತರಕಾರಿಗಳನ್ನು ಬೆಳೆಯುವುದು ಹೇಗೆ ಎಂಬ ಪಾಠ ಮಾಡುತ್ತಿದೆ.
ನ್ಯಾಶ್ನಲ್ ಅರ್ಬನ್ ಲೈವ್ಲಿಹುಡ್ ಮಿಶಿನ್ ನ ಭಾಗವಾಗಿರುವ ಈ ಸ್ವಸಹಾಯ ಸಂಘ, ವಿದ್ಯಾರ್ಥಿ ಮತ್ತು ಶಿಕ್ಷಕರು ಇಬ್ಬರಿಗೂ ಬೆಳೆ ಬೆಳೆಯುವ ತರಬೇತಿ ನೀಡುತ್ತಿದೆ. ಶಾಲೆಯ ಪುಟ್ಟ ಹೂದೋಟದಲ್ಲಿ, ಪಾಟ್ ಗಳಲ್ಲಿ ಅಥವಾ ಮನೆಯಲ್ಲಿ ಇರುವ ಅಲ್ಪಜಾಗದಲ್ಲೇ ಹೇಗೆ ತರಕಾರಿಗಳನ್ನು ಬೆಳೆದು ಸಾವಲಂಬಿಯಾಗುವುದು ಎಂಬ ಕುರಿತು ಈ ಸಂಘ ಪಾಠ ಹೇಳುತ್ತದೆ.

ಸುಮಾರು 40 ಕ್ಕೂ ಹೆಚ್ಚು ಮಕ್ಕಳಿಗೆ ಈ ಸ್ವಸಹಾಯ ಸಂಘ ತರಬೇತಿ ನೀಡುತ್ತದೆ. ಇವರಿಗೆ ಬೀಜ ಮತ್ತು ಗಿಡಗಳನ್ನು ನೀಡಿ, ಟೆರೇಸ್ ಅಥವಾ ಶಾಲೆಯ ಹೂದೋಟದಲ್ಲಿ ಅಥವಾ ಪಾಟ್ ಗಳಲ್ಲಿ ಇವುಗಳನ್ನು ಬೆಳೆಸುವಂತೆ ತರಬೇತಿ ನೀಡಲಾಗುತ್ತದೆ. ಮಕ್ಕಳಲ್ಲಿ ಬೆಳೆ ಬೆಳೆಯುವ ಮಹತ್ವವನ್ನು ಅರ್ಥಮಾಡಿಸುವುದು ಇದರ ಉದ್ದೇಶ.
ಈಗಿನ ಕಾಲದಲ್ಲಿ ಕೃಷಿ ಕೆಲಸ ಎಂದರೆ ಮೂಗು ಮುರಿಯುವವರೇ ಹೆಚ್ಚು, ಡಾಕ್ಟರ್, ಇಂಜಿನಿಯರ್ ಆಗುವ ಕನಸಿನೆದುರು ರೈತನಾಗುವ ಕನಸನ್ನು ಅಸಡ್ಡೆಯಿಂದ ನೋಡಲಾಗುತ್ತಿದೆ. ಆದರೆ ಬೇರೆ ವೃತ್ತಿಯಿಂದ ಹಣ ಗಳಿಸಬ ಹುದು. ಆದರೆ ಹೊಟ್ಟೆಗೆ ಆಹಾರ ನೀಡುವುದು ರೈತ ವೃತ್ತಿ ಮಾತ್ರ ಎಂಬುದನ್ನು ಮಕ್ಕಳಿಗೆ ಅರ್ಥಮಾಡಿಸುವ ಯತ್ನ ಇದು.
ಶಾಲೆಯಲ್ಲಿ ಬೆಳೆದ ತರಕಾರಿಗಳಲನ್ನು ಶಾಲೆಯಲ್ಲಿ ಅಡುಗೆ ಮಾಡುವುದಕ್ಕೇ ಬಳಸಲಾಗುತ್ತದೆ, ಹೆಚ್ಚಾಗಿ ಉಳಿದವನ್ನು ಮಾರಾಟ ಮಾಡಿ, ಬಂದ ಹಣವನ್ನು ಶಾಲೆಯ ಅಭಿವೃದ್ಧಿಗೆ ಬಳಸಲಾಗುತ್ತದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications