ತಮಿಳುನಾಡಿನಲ್ಲಿ ಅಮ್ಮ ಸಮೀಕ್ಷೆ ಸುಳ್ಳು ಮಾಡಿದ್ದು ಹೇಗೆ?
ಚೆನ್ನೈ, ಮೇ 20 : ತಮಿಳುನಾಡಿನಲ್ಲಿ ಒಬ್ಬರಾದ ಮೇಲೆ ಒಬ್ಬರು ಗೆಲ್ಲಬೇಕು ಎಂಬ ಸೂತ್ರವನ್ನು ಜಯಲಲಿತಾ ಅವರು ಮುರಿದು ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದಾರೆ. ಅಮ್ಮನಿಗೆ ಸೋಲಾಗುತ್ತದೆ ಎಂಬ ಸಮೀಕ್ಷೆಗಳನ್ನು ಜಯಲಲಿತಾ ಸುಳ್ಳು ಮಾಡಿ, ಮುಖ್ಯಮಂತ್ರಿ ಗದ್ದುಗೆ ಏರಲು ಸಿದ್ಧತೆ ನಡೆಸುತ್ತಿದ್ದಾರೆ.
ಜಯಲಲಿತಾ ನೇತೃತ್ವದ ಎಐಎಡಿಎಂಕೆ ಚುನಾವಣೆಯಲ್ಲಿ ಜಯಗಳಿಸಿ ಇತಿಹಾಸ ಸೃಷ್ಟಿಸಲು ಹಲವು ಅಂಶಗಳು ಸಹಾಯಕವಾಗಿವೆ. ತಮ್ಮ ಸರ್ಕಾರದ ಸಾಧನೆಯನ್ನು ಜನರ ಮುಂದಿಟ್ಟು, ಮತಗಳಿಸುವಲ್ಲಿ 'ಅಮ್ಮ' ಯಶಸ್ವಿಯಾಗಿದ್ದಾರೆ. [ಜಯಮ್ಮನ 1 ರು. ಇಡ್ಲಿ ಸಾಂಬಾರಿಗೆ ಮರುಳಾದ ಮತದಾರರು]

ಪ್ರಚಾರದ ವೇಳೆ ಜಯಲಲಿತಾ ಅವರು ಸುಮಾರು 22 ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯಾವುದೇ ಪ್ರಚಾರ ಸಭೆಯಲ್ಲಿಯೂ ಅವರು 40 ನಿಮಿಷಕ್ಕಿಂತ ಹೆಚ್ಚಾಗಿ ಭಾಷಣ ಮಾಡಿಲ್ಲ. ತಮ್ಮ ಭಾಷಣದಲ್ಲಿ ಡಿಎಂಕೆಯನ್ನು ಅವರು ಗೇಲಿ ಮಾಡಿದ್ದರು ಮತ್ತು ಸರ್ಕಾರದ ಸಾಧನೆಯ ಬಗ್ಗೆ ಹೇಳಿದ್ದರು. ['ಅಮ್ಮ' ಜಯಲಲಿತಾ ಅಭಿಮಾನಿಗಳ ವಿಜಯೋತ್ಸಾಹದ ಚಿತ್ರಗಳು]
ಮಹಿಳೆಯರ ಮತ ಸೆಳೆದರು : ವಿಶ್ಲೇಷಕರು ಹೇಳುವ ಪ್ರಕಾರ ಅಮ್ಮನ ಗೆಲುವಿನಲ್ಲಿ ಮಹಿಳಾ ಮತದಾರರದ್ದು ಪ್ರಮುಖ ಪಾತ್ರವಿದೆ. ಮಹಿಳೆಯರಿಗಾಗಿ ಜಾರಿಗೆ ತಂದ ಯೋಜನೆಗಳು ಅವರನ್ನು ಗೆಲುವಿನ ದಡ ಸೇರಿಸಿವೆ. ಮತಎಣಿಕೆ ನಂತರ ಎಐಎಡಿಎಂಕೆ ಪಕ್ಷದ ನಾಯಕರೇ ಮಹಿಳೆಯರ ಮತ ಹೆಚ್ಚು ಬಂದಿದೆ ಎಂದು ಹೇಳುತ್ತಿದ್ದಾರೆ. [ಇಂಥ ಅತಿರೇಕ ತ.ನಾಡಿನಲ್ಲಿ ಮಾತ್ರ ನೋಡಲು ಸಾಧ್ಯ!]
ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಲು ಜಾರಿಗೆ ತಂದ ಯೋಜನೆಗಳು ಮತಗಳಾಗಿ ಬದಲಾಗಿವೆ. ವಿವಾಹಕ್ಕೆ ಸಹಾಯ, ಲ್ಯಾಪ್ ಟಾಪ್ ವಿತರಣೆಯ 1,100 ಕೋಟಿ ಮೊತ್ತದ ಯೋಜನೆ ಮಹಿಳೆಯರನ್ನು ಸೆಳೆದಿದೆ. 1.85 ಕೋಟಿ ಮಹಿಳೆಯರಿಗೆ ಫ್ಯಾನ್ ಮತ್ತು ಮಿಕ್ಸರ್ ನೀಡಿರುವುದು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. [ಚುನಾವಣೋತ್ತರ ಸಮೀಕ್ಷೆ: ತಮಿಳುನಾಡಿನಲ್ಲಿ ಫೋಟೋ ಫಿನಿಶ್]
ಜಯಲಲಿತಾ ಅವರು ತಮ್ಮ ಸಂಪುಟದಲ್ಲಿ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಿದ್ದರು. ಜಾತಿ ಆಧಾರದ ಮೇಲೆ ಈ ಲೆಕ್ಕಾಚಾರ ಚುನಾವಣೆಯಲ್ಲಿ ಸಹಾಯಕವಾಗಿದೆ. ವಿಜಯಕಾಂತ್ ಅವರು ಡಿಎಂಕೆ ಮತಗಳನ್ನು ವಿಭಜನೆ ಮಾಡುವಲ್ಲಿ ಸಹಾಯಕರಾದರು. ಇದು ಜಯಲಲಿತಾ ಅವರ ಗೆಲುವಿನಲ್ಲಿ ಪ್ರಮುಖವಾದ ಪಾತ್ರವಹಿಸಿದೆ ಎನ್ನುತ್ತಾರೆ ವಿಶ್ಲೇಷಕರು.
ಗುರುವಾರ ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 232 ಸದಸ್ಯ ಬಲದ ವಿಧಾನಸಭೆಯಲ್ಲಿ ಎಐಎಡಿಎಂಕೆ 134 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆದಿದೆ. ಡಿಎಂಕೆ 89 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ 8 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರೆ, 1 ಸ್ಥಾನ ಇತರರ ಪಾಲಾಗಿದೆ. [ಪಿಟಿಐ ಚಿತ್ರ]
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications