ಈ ದೇಶದ 'ನಾಗರಿಕರ ಅಭ್ಯರ್ಥಿ' ನಾನು: ಗೋಪಾಲಕೃಷ್ಣ ಗಾಂಧಿ

ಚೆನ್ನೈ, ಜುಲೈ 12: ನನ್ನನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆರಿಸಿದ 18 ವಿರೋಧ ಪಕ್ಷಗಳಿಗೂ ನಾನು ಋಣಿ. ಈ ದೇಶದ ಭವಿಷ್ಯದ ಕುರಿತು ಆತಂಕದಿಂದಿರುವ 'ನಾಗರಿಕರ ಅಭ್ಯರ್ಥಿ' ನಾನು ಎಂದು ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಹೇಳಿದರು.

ಚೆನ್ನೈನಲ್ಲಿಂದು (ಜುಲೈ 12) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ನನ್ನ ಬಗ್ಗೆ ಮಾತನಾಡುವುದಕ್ಕೆ ಇಷ್ಟಪಡುವುದಿಲ್ಲ. ದೇಶ ಸಂಕಷ್ಟದಲ್ಲಿರುವ ಈ ಸಮಯದಲ್ಲಿ ನನ್ನ ಬಗ್ಗೆ ಮಾತನಾಡುವುದು ಸಮಂಜಸವಲ್ಲ. ಈ ಹುದ್ದೆಗೆ ನನ್ನನ್ನು ಸೂಕ್ತ ಅಭ್ಯರ್ಥಿ ಎಂದು ಹದಿನೆಂಟು ಪಕ್ಷಗಳು ಒಕ್ಕೊರಲಿನಿಂದ ಒಪ್ಪಿಕೊಂಡಿದ್ದಕ್ಕೆ ನನ್ನ ಅನಂತ ಧನ್ಯವಾದಗಳು ಎಂದರು.

I am citizen candidate: VP candidate Gopal Krishna Gandhi

ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮಹಾತ್ಮಾ ಗಾಂಧೀಜಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲರು. ಐಎಎಸ್ ಅಧಿಕಾರಿಯಾಗಿ, ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಅವರು ಆಗಸ್ಟ್ 5 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆ ಎದುರಿಸಲಿದ್ದು, ಅವರ ಎದುರಾಳಿ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ.

ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶವೂ ಆಗಸ್ಟ್ 5 ರಂದೇ ಹೊರಬೀಳಲಿದ್ದು, ಹಾಲಿ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಅಧಿಕಾರಾವಧಿ ಆಗಸ್ಟ್ 10 ರಂದು ಮುಕ್ತಾಯವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+