ಬಹಿರಂಗವಾಯ್ತು ರಜನೀಕಾಂತ್ ಭಾನುವಾರದ ಸಭೆ ವಿಚಾರ
ಚೆನ್ನೈನಲ್ಲಿ ಭಾನುವಾರ ಅಭಿಮಾನಿಗಳ ಸಭೆ ಕರೆದಿರುವ ರಜಿನೀಕಾಂತ್ ರಾಜಕೀಯ ಘೋಷಣೆ ಮಾಡುತ್ತಾರೆ ಎಂಬ ಸುದ್ದಿ ದಟ್ಟವಾಗಿತ್ತು. ಈ ಸುದ್ದಿಗೆ ಸ್ವತಃ ರಜಿನೀಕಾಂತ್ ಸ್ಪಷ್ಟನೆ ನೀಡಿದ್ದಾರೆ. ಏನದು ಎಂದು ತಿಳಿಯಲು ಮುಂದೆ ಓದಿ
ಚೆನ್ನೈ, ಮಾರ್ಚ್ 31: ನಾನು ರಾಜಕೀಯ ಸೇರೋದಿಲ್ಲ- ಈ ಮಾತನ್ನು ತುಂಬ ಸ್ಪಷ್ಟವಾಗಿ ಶುಕ್ರವಾರ ರಜನೀಕಾಂತ್ ಹೇಳಿದ್ದಾರೆ. ಭಾನುವಾರ ಚೆನ್ನೈನಲ್ಲಿ ಕರೆದಿರುವ ಸಭೆಯ ಉದ್ದೇಶ ರಾಜಕಾರಣವೇ ಎಂಬ ಪ್ರಶ್ನೆಗೆ ಸೂಪರ್ ಸ್ಟಾರ್ ರಜನೀಕಾಂತ್ ನೀಡಿದ ಉತ್ತರವಿದು.
ರಾಜಕೀಯಕ್ಕೆ ಸಂಬಂಧಿಸಿದ ಹಾಗೆ ಯಾವುದೇ ಘೋಷಣೆ ಇಲ್ಲ. ಅಭಿಮಾನಿಗಳನ್ನು ಭೇಟಿಯಾಗಿ ಬಹಳ ಕಾಲವಾಗಿತ್ತು. ಆದ್ದರಿಂದ ಈ ಸಭೆ ಕರೆದಿದ್ದೇನೆ ವಿನಾ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ರಜನಿ ಹೇಳಿದ್ದಾರೆ. ಗುರುವಾರವಷ್ಟೇ ಮಲೇಷ್ಯಾದ ಪ್ರಧಾನಿ ನಜೀಬ್ ರಜಾಕ್ ಅವರು ರಜನೀಕಾಂತ್ ರನ್ನು ಭೇಟಿ ಮಾಡಿದ್ದರು.[ರಜನಿ ಭೇಟಿಗೆ ಮನೆ ಬಾಗಿಲಿಗೆ ಬಂದ ಮಲೇಷ್ಯಾ ಪ್ರಧಾನಿ]

ಅಪಾರ ಸಂಖ್ಯೆ ಅಭಿಮಾನಿಗಳನ್ನು ಹೊಂದಿರುವ ರಜನಿ ಭಾನುವಾರ ತಮ್ಮ ರಾಜಕೀಯದ ನಡೆ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ತಮಿಳುನಾಡಿನಲ್ಲಿ ವಿಪರೀತ ಕುತೂಹಲವಿತ್ತು. 66 ವರ್ಷದ ರಜನೀಕಾಂತ್ ರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಳ್ಳಲು ಹಲವು ರಾಜಕೀಯ ಪಕ್ಷಗಳು ನಿರಂತರವಾಗಿ ಪ್ರಯತ್ನಿಸುತ್ತಲೇ ಇವೆ.
2009ರಲ್ಲಂತೂ ರಜನಿ ರಾಜಕೀಯಕ್ಕೆ ಬಂದೇಬಿಟ್ಟರು ಎಂದು ದೊಡ್ಡ ಸುದ್ದಿಯಾಗಿತ್ತು. ಆದರೆ ಅವರು ಯಾವುದೇ ಪಕ್ಷಕ್ಕೂ ಸೇರಲಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications