'ನಾನು ಹೆದರುವುದು ಮಾಧ್ಯಮಗಳಿಗೆ ಮಾತ್ರ: ರಜನಿಕಾಂತ್
Recommended Video

ಚೆನ್ನೈ, ಡಿಸೆಂಬರ್ 31: ಪ್ರಜಾಪ್ರಭುತ್ವ ವ್ಯವಸ್ಥೆ ಬದಲಾಯಿಸಲು ರಾಜಕೀಯ ಪ್ರವೇಶ ಅನಿವಾರ್ಯವಾಗಿತ್ತು. ರಾಜಕೀಯ ಪ್ರವೇಶದ ಈ ಸಂದರ್ಭದಲ್ಲಿ ನಾನು ಚೋ ರಾಮಸ್ವಾಮಿ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದರು.
ಮಾಧ್ಯಮಗಳ ಬಗ್ಗೆ ನನಗೆ ಅಪಾರ ಗೌರವ, ಭಯ ಭಕ್ತಿ ಎಲ್ಲವೂ ಇದೆ ಎಂದರು. ಅಂಕಣಕಾರ, ರಾಜಕೀಯ ವಿಶ್ಲೇಷಣಕಾರ, ಪತ್ರಕರ್ತ, ನಟ, ಸಂಭಾಷಣಕಾರ, ಸಿನೆಮಾ ನಿರ್ದೇಶಕ, ಜಯಲಲಿತಾ ಹಿತೈಷಿ ಚೋ ರಾಮಸ್ವಾಮಿ ಅವರನ್ನು ಇಂದು ತುಂಬಾ ಸ್ಮರಿಸುತ್ತಿದ್ದೇನೆ. ಅವರು ನೀಡಿದ ಸಲಹೆ ಎಂದಿಗೂ ನಾನು ಪಾಲಿಸುತ್ತೇನೆ ಎಂದರು.

'ನನಗೆ ರಾಜಕೀಯ ಹೊಸದಲ್ಲ, ರಾಜಕೀಯ ಪ್ರವೇಶದಿಂದ ಭಯವಾಗಿಲ್ಲ. ಆದರೆ, ನಾನು ಈ ಕ್ಷೇತ್ರದಲ್ಲಿ ಇಂದು ಸಣ್ಣ ಕೂಸು, ಈ ನಿಟ್ಟಿನಲ್ಲಿ ನಾನು ಮಾಧ್ಯಮಗಳ ಬಗ್ಗೆ ಎಚ್ಚರಿಕೆಯಿಂದಿರುತ್ತೇನೆ. ನನ್ನ ಸರಿ ತಪ್ಪುಗಳನ್ನು ತಿದ್ದುವ ಕಾರ್ಯ ಇವರಿಂದ ನನಗೆ ಆಗಲಿದೆ. ಚೋ ಸಾರ್ ನನಗೆ ಈ ಬಗ್ಗೆಯೇ ಸಲಹೆ ನೀಡಿದ್ದು, ಅವರ ಸಲಹೆ ಪಾಲಿಸಬೇಕಿದೆ. ಅವರಿದಿದ್ದರೆ ನಮ್ಮ ರಾಜ್ಯದ ವ್ಯವಸ್ಥೆ ಹದಗೆಡುತ್ತಿರಲಿಲ್ಲ ಎಂದು ಭಾವುಕರಾದರು.

ಮೊನಚಾದ, ಪಾರದರ್ಶಕ ಬರಹಗಳಿಂದ ರಾಜಕೀಯ ನಾಯಕರನ್ನು ಕಟುವಾಗಿ ಟೀಕಿಸುತ್ತಿದ್ದ ಚೋ ರಾಮಸ್ವಾಮಿ ಯಾವ ನಾಯಕರನ್ನೂ ಬಿಟ್ಟಿರಲಿಲ್ಲ. 'ತುಘಲಕ್' ಪತ್ರಿಕೆಯ ಸಂಪಾದಕರಾಗಿದ್ದ ಅವರ ಪೆನ್ನಿನ ಮೊನೆಯಿಂದ ತಿವಿಸಿಕೊಂಡವರಲ್ಲಿ ಇಂದಿರಾಗಾಂಧಿ, ವಾಜಪೇಯಿ, ಕರುಣಾನಿಧಿ, ಜಯಲಲಿತಾ, ಜೆಬಿ ಕೃಪಲಾನಿ, ಎಂಜಿ ರಾಮಚಂದ್ರನ್, ರಾಮಕೃಷ್ಣ ಹೆಗಡೆಯವರು ಸೇರಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications