29 ಜನರಿದ್ದ ಭಾರತೀಯ ವಾಯುಸೇನೆ ವಿಮಾನ ನಾಪತ್ತೆ
ಚೆನ್ನೈ, ಜುಲೈ, 22: ಚೆನ್ನೈನ ತಾಂಬರಮ್ ನಿಂದ ಅಂಡಮಾನ್ ಕಡೆ ಹೊರಟಿದ್ದ ಭಾರತದ ವಾಯುಸೇನೆಯ ವಿಮಾನ ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ.
ಶುಕ್ರವಾರ ಬೆಳಗ್ಗೆ ವಿಮಾನ ಸಂಪರ್ಕ ಕಳೆದುಕೊಂಡಿದೆ. ಬಂಗಾಳಕೊಲ್ಲಿ ಮೇಲೆ ಹಾರುವಾಗ ನಾಪತ್ತೆಯಾಗಿದೆ. ಚೆನ್ನೈನಿಂದ ಹೊರಟ ಎಎನ್ 32 ವಾಯುಸೇನೆ ವಿಮಾನದಲ್ಲಿ 29 ಜನರಿದ್ದರು. ಎಲ್ಲರೂ ಪೋರ್ಟ್ ಬ್ಲೇರ್ ಕಡೆ ಪ್ರಯಾಣ ಬೆಳೆಸುತ್ತಿದ್ದರು.[ಶಂಕಿತ ಬೋಟ್ ಮಯನ್ಮಾರ್ನಿಂದ ಎಲ್ಲಿಗೆ ಹೊರಟಿತ್ತು?]

ಚೆನ್ನೈನ ತಾಂಬರಮ್ ನಿಂದ ಶುಕ್ರವಾರ ಬೆಳಗ್ಗೆ 8.30ಕ್ಕೆ ವಿಮಾನ ಹೊರಟಿತ್ತು. ಹೊರಟ 16 ನಿಮಿಷದ ನಂತರ ವಿಮಾನ ರಾಡಾರ್ ಸಂಪರ್ಕವನ್ನು ಕಳೆದುಕೊಂಡಿದೆ. ವಿಮಾನದಲ್ಲಿ ಸುಮಾರು 4 ಗಂಟೆ ಕಾಲ ಆಕಾಶದಲ್ಲಿ ಹಾರಾಡುವಷ್ಟು ಇಂಧನ ಇತ್ತು. ವಾಯುಸೇನೆ ಈಗಾಗಲೇ ವಿಮಾನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೆ.[ಕರ್ನಾಟಕದ ಕರಾವಳಿ ಮೇಲೆ ಐಸಿಜಿಎಸ್ ಶೂರ್ ಕಣ್ಗಾವಲು]

ಬಂಗಾಳಕೊಲ್ಲಿಯಲ್ಲಿ ಪತನ?
ವಿಮಾನ ಕೊನೆ ಬಾರಿ ಸಂಪರ್ಕಕ್ಕೆ ಸಿಕ್ಕಾಗ ಬಂಗಾಳ ಕೊಲ್ಲಿಯ ಮೇಲೆ ಹಾರಾಟ ಮಾಡುತ್ತಿತ್ತು. ಇದನ್ನು ವಿಶ್ಲೇಷಿಸಿರುವ ಸೇನೆ ವಿಮಾನ ತಾಂತ್ರಿಕ ಸಮಸ್ಯೆಗೆ ಸಿಕ್ಕಿ ಬಂದಾಗ ಬಂಗಾಳ ಕೊಲ್ಲಿಯಲ್ಲೆ ಪತನವಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
We will put all assets available with us in search operation for IAF aircraft AN-32: Wing Commander Anupam Banerjee pic.twitter.com/Cl3GWrexAf
— ANI (@ANI_news) July 22, 2016
ಕಾಣೆಯಾದ ವಿಮಾನದ ಬಗ್ಗೆ ಮತ್ತಷ್ಟು ಮಾಹಿತಿ
* ಎರಡು ಇಂಜಿನ್ ಗಳನ್ನು ಹೊಂದಿದ್ದ ವಿಮಾನ
* ಇದನ್ನು ಸರಕು ಸಾಗಣೆ ವಿಮಾನವನ್ನಾಗಿ ಬಳಕೆ ಮಾಡಲಾಗುತ್ತಿತ್ತು
* 23 ಜನ ಪ್ರಯಾಣಿಕರು ಮತ್ತು 6 ಸಿಬ್ಬಂದಿ ವಿಮಾನದಲ್ಲಿದ್ದರು.
* 7.5 ಟನ್ ತೂಕ ಅಥವಾ 50 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ವಿಮಾನಕ್ಕಿತ್ತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications