29 ಜನರಿದ್ದ ಭಾರತೀಯ ವಾಯುಸೇನೆ ವಿಮಾನ ನಾಪತ್ತೆ
ಚೆನ್ನೈ, ಜುಲೈ, 22: ಚೆನ್ನೈನ ತಾಂಬರಮ್ ನಿಂದ ಅಂಡಮಾನ್ ಕಡೆ ಹೊರಟಿದ್ದ ಭಾರತದ ವಾಯುಸೇನೆಯ ವಿಮಾನ ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ.
ಶುಕ್ರವಾರ ಬೆಳಗ್ಗೆ ವಿಮಾನ ಸಂಪರ್ಕ ಕಳೆದುಕೊಂಡಿದೆ. ಬಂಗಾಳಕೊಲ್ಲಿ ಮೇಲೆ ಹಾರುವಾಗ ನಾಪತ್ತೆಯಾಗಿದೆ. ಚೆನ್ನೈನಿಂದ ಹೊರಟ ಎಎನ್ 32 ವಾಯುಸೇನೆ ವಿಮಾನದಲ್ಲಿ 29 ಜನರಿದ್ದರು. ಎಲ್ಲರೂ ಪೋರ್ಟ್ ಬ್ಲೇರ್ ಕಡೆ ಪ್ರಯಾಣ ಬೆಳೆಸುತ್ತಿದ್ದರು.[ಶಂಕಿತ ಬೋಟ್ ಮಯನ್ಮಾರ್ನಿಂದ ಎಲ್ಲಿಗೆ ಹೊರಟಿತ್ತು?]

ಚೆನ್ನೈನ ತಾಂಬರಮ್ ನಿಂದ ಶುಕ್ರವಾರ ಬೆಳಗ್ಗೆ 8.30ಕ್ಕೆ ವಿಮಾನ ಹೊರಟಿತ್ತು. ಹೊರಟ 16 ನಿಮಿಷದ ನಂತರ ವಿಮಾನ ರಾಡಾರ್ ಸಂಪರ್ಕವನ್ನು ಕಳೆದುಕೊಂಡಿದೆ. ವಿಮಾನದಲ್ಲಿ ಸುಮಾರು 4 ಗಂಟೆ ಕಾಲ ಆಕಾಶದಲ್ಲಿ ಹಾರಾಡುವಷ್ಟು ಇಂಧನ ಇತ್ತು. ವಾಯುಸೇನೆ ಈಗಾಗಲೇ ವಿಮಾನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದೆ.[ಕರ್ನಾಟಕದ ಕರಾವಳಿ ಮೇಲೆ ಐಸಿಜಿಎಸ್ ಶೂರ್ ಕಣ್ಗಾವಲು]

ಬಂಗಾಳಕೊಲ್ಲಿಯಲ್ಲಿ ಪತನ?
ವಿಮಾನ ಕೊನೆ ಬಾರಿ ಸಂಪರ್ಕಕ್ಕೆ ಸಿಕ್ಕಾಗ ಬಂಗಾಳ ಕೊಲ್ಲಿಯ ಮೇಲೆ ಹಾರಾಟ ಮಾಡುತ್ತಿತ್ತು. ಇದನ್ನು ವಿಶ್ಲೇಷಿಸಿರುವ ಸೇನೆ ವಿಮಾನ ತಾಂತ್ರಿಕ ಸಮಸ್ಯೆಗೆ ಸಿಕ್ಕಿ ಬಂದಾಗ ಬಂಗಾಳ ಕೊಲ್ಲಿಯಲ್ಲೆ ಪತನವಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
We will put all assets available with us in search operation for IAF aircraft AN-32: Wing Commander Anupam Banerjee pic.twitter.com/Cl3GWrexAf
— ANI (@ANI_news) July 22, 2016
ಕಾಣೆಯಾದ ವಿಮಾನದ ಬಗ್ಗೆ ಮತ್ತಷ್ಟು ಮಾಹಿತಿ
* ಎರಡು ಇಂಜಿನ್ ಗಳನ್ನು ಹೊಂದಿದ್ದ ವಿಮಾನ
* ಇದನ್ನು ಸರಕು ಸಾಗಣೆ ವಿಮಾನವನ್ನಾಗಿ ಬಳಕೆ ಮಾಡಲಾಗುತ್ತಿತ್ತು
* 23 ಜನ ಪ್ರಯಾಣಿಕರು ಮತ್ತು 6 ಸಿಬ್ಬಂದಿ ವಿಮಾನದಲ್ಲಿದ್ದರು.
* 7.5 ಟನ್ ತೂಕ ಅಥವಾ 50 ಪ್ರಯಾಣಿಕರನ್ನು ಹೊತ್ತೊಯ್ಯುವ ಸಾಮರ್ಥ್ಯ ವಿಮಾನಕ್ಕಿತ್ತು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications