'21 ಸಾವಿರ ಸಸಿ ನೆಡದಿದ್ದರೆ ಎತ್ತಿನಹೊಳೆ ರದ್ದು?'
ಚೆನ್ನೈ, ಜನವರಿ 20: ರಾಜ್ಯವು ಎತ್ತಿನಹೊಳೆ ಯೋಜನೆಗಾಗಿ ಕಡಿದಿರುವ 7000 ಮರಗಳಿಗೆ ಬದಲಾಗಿ 21,000 ಸಸಿಗಳನ್ನು ನೆಡಬೇಕು ಇಲ್ಲದಿದ್ದರೆ ಎತ್ತಿನಹೊಳೆ ಯೋಜನೆಯನ್ನೇ ರದ್ದು ಗೊಳಿಸಿವುದಾಗಿ ಹಸಿರು ನ್ಯಾಯಾಧಿಕರಣ(ಎನ್ ಜಿಟಿ) ಖಡಕ್ ಎಚ್ಚರಿಕೆ ನೀಡಿದೆ.
ನ್ಯಾಯಮೂರ್ತಿ ಸ್ವತಂತ್ರಕುಮಾರ್ ನೇತೃತ್ವದ ಪೀಠ ಎತ್ತಿನಹೊಳೆ ಯೋಜನೆಗಾಗಿ ಸಾವಿರಾರು ಮರ ಕಡಿದಿರುವ ಬಗ್ಗೆ ಬಂದಿರುವ ಮನವಿ ಕುರಿತು ವಿಚಾರಿಸಿ ರಾಜ್ಯ ಸರ್ಕಾರವನ್ನು ತೀವ್ರ ತರಾಟೆ ತೆಗೆದುಕೊಂಡಿರು. ಪರಿಸರ ರಕ್ಷಣೆಯ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟವಾದ ಉತ್ತರ ನೀಡುವಂತೆ ರಾಜ್ಯಪರ ವಕೀಲರಿಗೆ ತಾಕೀತು ಮಾಡಿದರು. ಈ ವೇಳೆ ರಾಜ್ಯ ಪರ ವಕೀಲರು ಎತ್ತಿನ ಹೊಳೆಗಾಗಿ 7000 ಮರಗಳನ್ನು ಕಡೆಯಲಾಗಿದ್ದು, ಬದಲಿಗೆ ಅದೇ ಸ್ಥಳದಲ್ಲಿ 3000 ಸಸಿಗಳನ್ನು ನೆಡಲಾಗಿದೆ ಎಂದು ಉತ್ತರಿಸಿದ್ದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.['ಎತ್ತಿನಹೊಳೆ ಬಗ್ಗೆ ಹಾಸನ ಜಿಲ್ಲಾ ಅರಣ್ಯಾಧಿಕಾರಿಗಳಿಂದ ಸುಳ್ಳು ಮಾಹಿತಿ']

ಇನ್ನು ರಾಜ್ಯವನ್ನು ತರಾಟೆಗೆ ತೆಗೆದು ಕೊಂಡು ನ್ಯಾಯಮೂರ್ತಿಗಳು ಕಸ್ತೂರಿ ರಂಗನ್ ಮತ್ತು ಮಾಧವ್ ಗಾಡ್ಗಿಲ್ ಅವರ ಪರಿಸರ ಸಂರಕ್ಷಣಾ ವರದಿಯನ್ನು ಏಕೆ ಪಾಲಿಸುತ್ತಿಲ್ಲ. ಮರಗಳನ್ನು ಕತ್ತರಿಸುವುದರಿಂದ ಮಣ್ಣಿನ ಸವಕಳಿ ಆಗುತ್ತದೆ ಇದರ ಬಗ್ಗೆ ಏಕೆ ಅಧ್ಯಯನ ನಡೆಸಿಲ್ಲ ಎಂದು ವಕೀಲರನ್ನು ಖಾರವಾಗಿ ಪ್ರಶ್ನಿಸಿದರು. ಅಲ್ಲದೆ ಈಗ ಕಡಿದಿರುವ ಮರಗಳ ಬದಲಾಗಿ 21,000 ಸಸಿಗಳನ್ನು ನೆಡಬೇಕು ಎಂದು ಸೂಚಿಸಿದರು.['ಎತ್ತಿನಹೊಳೆ ಯೋಜನೆ ವಿರೋಧಕ್ಕೆ ಅರ್ಥವಿಲ್ಲ']
ಎತ್ತಿನಹೊಳೆ ಯೋಜನೆಗಾಗಿಯೇ ಏಳು ಸಾವಿರ ಮರಗಳನ್ನು ರಾಜ್ಯಸರ್ಕಾರ ಕತ್ತರಿಸಲಿ ಮೂರು ಸಾವಿರ ಮರಗಳನ್ನು ನಟ್ಟಿದೆ ಅವುಗಳಲ್ಲಿ ಉಳಿದವು ಎಷ್ಟು ಎಂಬ ಮಾಹಿತಿಯು ಇಲ್ಲ. ಇದರ ಮಧ್ಯದಲ್ಲಿಯೇ ರಾಜ್ಯ ಬೆಂಗಳೂರಿನಲ್ಲಿ ಅಭಿವೃದ್ದಿ ಹೆಸರಿನಲ್ಲಿ ಉಕ್ಕಿನ ಸೇತುವೆಗೆ ನಿರ್ಮಿಸಲು ಮುಂದಾಗಿರುವುದು ನಾಗರಿಕರ ವಿವೇಚನೆಗೆ ಮತ್ತೆ ಮತ್ತೆ ಪ್ರಶ್ನೆ ಎತ್ತುವಂತೆ ಮಾಡುತ್ತಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications