ಡಿಎಂಕೆ ನಾಯಕಿ ಕನಿಮೊಳಿ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ಚೆನ್ನೈ, ಏಪ್ರಿಲ್ 16: ತಮಿಳುನಾಡಿನ ತೂತ್ತುಕುಡಿಯಲ್ಲಿರುವ ಡಿಎಂಕೆ ನಾಯಕಿ ಕನಿಮೊಳಿ ಅವರ ಮನೆ ಮೇಲೆ ಮಂಗಳವಾರ ಸಂಜೆ ಆದಾಯ ಇಲಾಖೆ ದಾಳಿ ನಡೆದಿದೆ. ಐಟಿ ಮೂಲಗಳ ಪ್ರಕಾರ, ತೂತ್ತುಕುಡಿಯ ಕುರಿಂಜಿ ನಗರದಲ್ಲಿ ಇರುವ ಕನಿಮೊಳಿ ಅವರ ಮನೆ ಮೇಲೆ ಆದಾಯ ತೆರಿಗೆ ದಾಳಿ ನಡೆದಿದೆ.
ಅಂದಹಾಗೆ, ಕನಿಮೊಳಿ ಅವರು ತೂತ್ತುಕುಡಿ ಲೋಕಸಭಾ ಕ್ಷೇತ್ರದಿಂದ ತಮಿಳುನಾಡಿನ ಬಿಜೆಪಿ ಅಧ್ಯಕ್ಷೆ ತಮಿಳಿಸೈ ಸೌಂದರ್ ರಾಜನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನಲ್ಲಿ ವೆಲ್ಲೂರು ಹೊರತುಪಡಿಸಿ ಉಳಿದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ ಹದಿನೆಂಟರಂದು ಮತದಾನ ನಡೆಯಲಿದೆ. ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರ ಸೋದರಿಯೇ ಕನಿಮೊಳಿ.
ಚುನಾವಣೆ ಆಯೋಗವು ತಮಿಳುನಾಡಿನ ಜನರ ಜತೆಗೆ ಕೆಟ್ಟ ತಮಾಷೆ ಮಾಡುತ್ತಿದೆ ಎಂದು ಡಿಎಂಕೆ ವಕ್ತಾರ ಎ.ಸರವಣನ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಚೆನ್ನೈನಲ್ಲಿ ಕಳೆದ ಭಾನುವಾರ ರಾತ್ರಿ ಆದಾಯ ತೆರಿಗೆ ಇಲಾಖೆ ಹಾಗೂ ಚುನಾವಣೆ ಆಯೋಗದ ತಂಡವು ತಮಿಳುನಾಡು ಕಂದಾಯ ಸಚಿವ ಆರ್.ಬಿ.ಉದಯ್ ಕುಮಾರ್ ಹಾಸ್ಟೆಲ್ ಕೋಣೆ ಮೇಲೆ ದಾಳಿ ನಡೆಸಿತ್ತು. ಆದರೆ ಅಲ್ಲೇನೂ ದೊರೆತಿರಲಿಲ್ಲ.

ಕಳೆದ ವಾರ ಚೆನ್ನೈ, ನಾಮಕ್ಕಲ್ ಮತ್ತು ತಿರುನಲ್ವೇಲಿಯಲ್ಲಿನ ನಿರ್ಮಾಣ ಸಂಸ್ಥೆಗಳ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ದಾಳಿ ನಡೆದಿತ್ತು. ಇನ್ನು ಮಧ್ಯಪ್ರದೇಶದ್ ಮುಖ್ಯಮಂತ್ರಿ ಕಮಲ್ ನಾಥ್ ಆಪ್ತರ ಮೇಲೆ ಕೂಡ ಈಚೆಗೆ ಐಟಿ ದಾಳಿ ನಡೆದು, ಭಾರೀ ವಿವಾದಕ್ಕೆ ಕಾರಣವಾಗಿತ್ತು.
ಕಳೆದ ಕೆಲವು ವಾರಗಳಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಆದಾಯ ತೆರಿಗೆ ಇಲಾಖೆಗಳು ದಾಳಿ ನಡೆಸಿವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications