ಸ್ವಾತಂತ್ರ್ಯ ದಿನಾಚರಣೆಯಿಂದ ದೂರ ಉಳಿದ ರಾಜ್ಯಪಾಲರು
ಚೆನ್ನೈ, ಆಗಸ್ಟ್.03: ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಈ ಹಿನ್ನೆಲೆ ರಾಜಭವನದಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಆತಿಥ್ಯ ವಹಿಸದಿರಲು ರಾಜ್ಯಪಾಲರು ತೀರ್ಮಾನಿಸಿದ್ದಾರೆ.
ಆಗಸ್ಟ್.15ರಂದು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿರುವ ರಾಜ್ಯಪಾಲರ ಅಧಿಕೃತ ನಿವಾಸ ರಾಜಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸರಳವಾಗಿ ಆಚರಿಸಲಾಗುತ್ತದೆ. ಕೊವಿಡ್-19 ಸೋಂಕು ದೃಢಪಟ್ಟಿದ್ದರಿಂದ ಈ ಬಾರಿ ಧ್ವಜಾರೋಹಣ ಕಾರ್ಯಕ್ರಮದಿಂದ ರಾಜ್ಯಪಾಲರು ದೂರ ಉಳಿಯಲು ತೀರ್ಮಾನಿಸಿದ್ದಾರೆ.
ಚೆನ್ನೈನ ಅಲ್ವಾರ್ ಪೇಟ್ ನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರನ್ನು ಈಗಾಗಲೇ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೊವಿಡ್-19 ಸೋಂಕು ಇನ್ನೂ ಆರಂಭಿಕ ಹಂತದಲ್ಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯಪಾಲರಿಗೆ ಹೋಮ್ ಐಸೋಲೇಷನ್ ನಲ್ಲಿ ಇರಿಸಿ ಚಿಕಿತ್ಸೆ ನೀಡುವ ಬಗ್ಗೆ ವೈದ್ಯರು ಸಲಹೆ ನೀಡಿದ್ದಾರೆ. ಕಾವೇರಿ ಆಸ್ಪತ್ರೆಯ ವೈದ್ಯರ ತಂಡವೇ ಬನ್ವಾರಿ ಲಾಲ್ ಪುರೋಹಿತ್ ಅವರ ಆರೋಗ್ಯದ ತಪಾಸಣೆ ನಡೆಸಲಿದೆ ಎಂದು ತಿಳಿದು ಬಂದಿದೆ.
ರಾಜಭವನ ಸಿಬ್ಬಂದಿಗೂ ಕೊವಿಡ್-19 ಕಾಟ:
ಜುಲೈ 23ರಂದು ತಮಿಳುನಾಡು ರಾಜ್ಯಪಾಲರ ಕಚೇರಿ 23 ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗುಲಿತ್ತು. ಕಳೆದ ವಾರ ತಮಿಳುನಾಡು ರಾಜಭವನದ 84 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಜುಲೈ 29ರಿಂದ ಅವರು ರಾಜಭವನದಲ್ಲಿ ಕ್ವಾರಂಟೈನ್ ನಲ್ಲಿದ್ದರು. ಆದರೆ ಜುಲೈ 29ರಂದು ಮತ್ತೆ ಮೂವರು ಸಿಬ್ಬಂದಿಗೆ ಸೋಂಕು ತಗುಲಿದ್ದು ಖಚಿತವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ರಾಜಭವನದ ಉಳಿದ 38 ಸಿಬ್ಭಂದಿಗಳಿಗೂ ಕೊರೊನಾ ವೈರಸ್ ಸೋಂಕಿನ ಪರೀಕ್ಷೆ ಮಾಡಿಸಲಾಗಿತ್ತು. ಇವರಲ್ಲಿ 35 ಜನರ ವರದಿ ನೆಗೆಟಿವ್ ಬಂದಿತ್ತು. ಸೋಂಕು ತಗುಲಿದ್ದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications