ಇಂಡಿಯಾ ಟುಡೇ ಸಮೀಕ್ಷೆ: ಡಿಎಂಕೆ ಮೈತ್ರಿಕೂಟಕ್ಕೆ ಪೊಂಗಲ್ ಗಿಫ್ಟ್
ನವದೆಹಲಿ, ಜನವರಿ 16: ತಮಿಳುನಾಡಿನಲ್ಲಿ ಈ ಸಮಯಕ್ಕೆ ವಿಧಾನಸಭೆ ಚುನಾವಣೆ ನಡೆದರೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು? ಎಂಬ ಪ್ರಶ್ನೆಯೊಂದಿಗೆ ಸುಮಾರು 77 ಅಸೆಂಬ್ಲಿ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿದ ಇಂಡಿಯಾ ಟುಡೇ ಹಾಗೂ ಕಾರ್ವಿ ಸಂಸ್ಥೆಯಿಂದ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಮೈತ್ರಿಕೂಟಕ್ಕೆ ಪೊಂಗಲ್ ಉಡುಗೊರೆ ಸಿಕ್ಕಿದೆ. ತಮಿಳುನಾಡಿನ ಜನತೆ ಆಡಳಿತದಲ್ಲಿ ಬದಲಾವಣೆ ಬಯಸಿದ್ದಾರೆ ಎಂದು ದಿಕ್ಸೂಚಿ ಹೇಳುತ್ತಿದೆ.
ಎಐಎಡಿಎಂಕೆ ಆಡಳಿತದಲ್ಲಿ ಬದಲಾವಣೆ ಕಾಣಬಹುದೇ? ತಮಿಳುನಾಡಿನ ನೆಚ್ಚಿನ ಮುಖ್ಯಮಂತ್ರಿ ಯಾರು? ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರ ರಾಜಕೀಯ ಪ್ರವೇಶದಿಂದ ಬದಲಾವಣೆ ಸಾಧ್ಯವೇ? ಎಂಬೆಲ್ಲ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಇಂಡಿಯಾ ಟುಡೇ ಕಾರ್ವಿ ಸಂಸ್ಥೆ ನಡೆಸಿದ ಸಮೀಕ್ಷೆಯ ಫಲಿತಾಂಶ ಮಂಗಳವಾರ ರಾತ್ರಿ ಪ್ರಕಟವಾಗಿದೆ.

ತಮಿಳುನಾಡಿನಲ್ಲಿ ಸದ್ಯ ಎಐಎಡಿಎಂಕೆ ಪಕ್ಷ ಅಧಿಕಾರದಲ್ಲಿದ್ದು 2021ರಲ್ಲಿ ಅವಧಿ ಮುಗಿಯಲಿದೆ. 2016ರಲ್ಲಿ ಎಐಎಡಿಎಂಕೆ ಶೇ40ರಷ್ಟು ಮತಗಳ ಪಾಲು ಗಳಿಸಿ 135 ಸ್ಥಾನಗಳನ್ನು ಪಡೆದುಕೊಂಡಿತ್ತು. ಆದರೆ, ಇಂಡಿಯಾ ಟುಡೇ- ಕಾರ್ವಿ ಸಂಸ್ಥೆ ಈಗ ನಡೆಸಿರುವ ಸಮೀಕ್ಷೆಯಂತೆ ಈಗ ಚುನಾವಣೆ ನಡೆದರೆ, ಎಐಎಡಿಎಂಕೆ ಅಧಿಕಾರ ಕಳೆದುಕೊಳ್ಳಲಿದ್ದು, ಕೇವಲ 68 ಸ್ಥಾನಗಳನ್ನು ಗಳಿಸಲಿದೆ. ಶೇ 26ರಷ್ಟು ಮತ ಪಾಲು ಹೊಂದಲಿದೆ.
ಎಂ. ಕರುಣಾನಿಧಿ-ಸ್ಟಾಲಿನ್ ನೇತೃತ್ವದ ಡಿಎಂಕೆ, ಕಾಂಗ್ರೆಸ್ ಹಾಗೂ ಐಯುಎಂಎಲ್ ಮೈತ್ರಿಕೂಟಕ್ಕೆ ಶೇ 34ರಷ್ಟು ಶೇಕಡಾವರು ಮತ ಪಾಲಿನೊಂದಿಗೆ 130 ಸೀಟುಗಳನ್ನು ಗೆಲ್ಲಲಿದೆ.
ನೆಚ್ಚಿನ ಸಿಎಂ: ಡಿಎಂಕೆ ವರಿಷ್ಠ ಎಂ ಕರುಣಾನಿಧಿ ಅವರು ಇಲ್ಲಿ ತನಕ ತಮಿಳುನಾಡು ಕಂಡಿರುವ ಉತ್ತಮ ಮುಖ್ಯಮಂತ್ರಿ ಎಂದು ಶೇ 29ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ. ಎಂಜಿಆರ್ ಹಾಗೂ ಜೆ ಜಯಲಲಿತಾ ಅವರಿಗೆ ಕ್ರಮವಾಗಿ ಶೇ 25 ಹಾಗೂ ಶೇ 21ರಷ್ಟು ಮತಗಳು ಸಿಕ್ಕಿವೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications