ತಮಿಳುನಾಡಿನ ಸಿಎಂ ಆಗಲು ಸ್ಟಾಲಿನ್ ಸೂಕ್ತ: ಸಮೀಕ್ಷೆ
ನವದೆಹಲಿ, ಜನವರಿ 18: ತಮಿಳುನಾಡಿನಲ್ಲಿ ಈ ಸಮಯಕ್ಕೆ ವಿಧಾನಸಭೆ ಚುನಾವಣೆ ನಡೆದರೆ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು? ಎಂಬ ಪ್ರಶ್ನೆಯೊಂದಿಗೆ ಇಂಡಿಯಾ ಟುಡೇ ಹಾಗೂ ಕಾರ್ವಿ ಸಂಸ್ಥೆಯಿಂದ ಸುಮಾರು 77 ಅಸೆಂಬ್ಲಿ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲಾಯಿತು. ಇದರ ಜತೆಗೆ ಹಾಲಿ ರಾಜಕಾರಣಿಗಳ ಪೈಕಿ ಮುಂದಿನ ಮುಖ್ಯಮಂತ್ರಿಯಾಗಲು ಯಾರು ಸೂಕ್ತ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಇದರ ಫಲಿತಾಂಶದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.
ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಮೈತ್ರಿಕೂಟಕ್ಕೆ ಪೊಂಗಲ್ ಉಡುಗೊರೆ ಸಿಕ್ಕಿದೆ. ತಮಿಳುನಾಡಿನ ಜನತೆ ಆಡಳಿತದಲ್ಲಿ ಬದಲಾವಣೆ ಬಯಸಿದ್ದಾರೆ ಎಂದು ದಿಕ್ಸೂಚಿ ಹೇಳುತ್ತಿದೆ. ಹಳೆ ಸಿಎಂಗಳ ಪೈಕಿ ಡಿಎಂಕೆ ವರಿಷ್ಠ ಎಂ ಕರುಣಾನಿಧಿ ಅವರು ಉತ್ತಮ ಎಂದು ಜನರು ಹೇಳಿದ ಬೆನ್ನಲ್ಲೇ ಈ ಸಂದರ್ಭದಲ್ಲಿ ಸಿಎಂ ಆಗಲು ಡಿಎಂಕೆ ಕಾರ್ಯಾಧ್ಯಕ್ಷ ಎಂಕೆ ಸ್ಟಾಲಿನ್ ಅವರು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಂ . ಕರುಣಾನಿಧಿ-ಸ್ಟಾಲಿನ್ ನೇತೃತ್ವದ ಡಿಎಂಕೆ, ಕಾಂಗ್ರೆಸ್ ಹಾಗೂ ಐಯುಎಂಎಲ್ ಮೈತ್ರಿಕೂಟಕ್ಕೆ ಶೇ 34ರಷ್ಟು ಶೇಕಡಾವರು ಮತ ಪಾಲಿನೊಂದಿಗೆ 130 ಸೀಟುಗಳನ್ನು ಗೆಲ್ಲಲಿದೆ.
ಡಿಎಂಕೆ ವರಿಷ್ಠ ಎಂ ಕರುಣಾನಿಧಿ ಅವರು ಇಲ್ಲಿ ತನಕ ತಮಿಳುನಾಡು ಕಂಡಿರುವ ಉತ್ತಮ ಮುಖ್ಯಮಂತ್ರಿ ಎಂದು ಶೇ 29ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ. ಎಂಜಿಆರ್ ಹಾಗೂ ಜೆ ಜಯಲಲಿತಾ ಅವರಿಗೆ ಕ್ರಮವಾಗಿ ಶೇ 25 ಹಾಗೂ ಶೇ 21ರಷ್ಟು ಮತಗಳು ಸಿಕ್ಕಿವೆ.
ಎಂಕೆ ಸ್ಟಾಲಿನ್ ಸೂಕ್ತ: ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ ಸ್ಟಾಲಿನ್ ಅವರು ಸಿಎಂ ಆಗಲು ಸೂಕ್ತ ಎಂದು ಶೇ50ರಷ್ಟು ಮಂದಿ ಹೇಳಿದ್ದಾರೆ. ರಜನಿಕಾಂತ್ ಅವರು ಶೇ17ರಷ್ಟು ಮಂದಿ ಮತ ಹಾಕಿದ್ದಾರೆ. ಹಾಲಿ ಉಪ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂಗೆ ಶೇ11ರಷ್ಟು ಹಾಗೂ ಇಡಪ್ಪಾಡಿ ಕೆ ಪಳನಿಸ್ವಾಮಿಗೆ ಶೇ5ರಷ್ಟು ಮತಗಳು ಸಿಕ್ಕಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications