ಶ್ರೀಲಂಕಾದ ದೋಣಿಯಲ್ಲಿ ಪಾಕ್ನಿಂದ ಬಂದ 100 ಕೆಜಿ ಮಾದಕವಸ್ತು ಪತ್ತೆ
ನವದೆಹಲಿ, ನವೆಂಬರ್ 25: ಭಾರತೀಯ ಕರಾವಳಿ ಕಾವಲು ಪಡೆಯು 100 ಕೆ.ಜಿ ತೂಕದ ಹೆರಾಯಿನ್ ಸೇರಿದಂತೆ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಶ್ರೀಲಂಕಾದ ದೋಣಿಯೊಂದರಿಂದ ವಶಪಡಿಸಿಕೊಂಡಿದೆ. ದಕ್ಷಿಣ ತೂತುಕುಡಿಯ ಸಮುದ್ರ ಪ್ರದೇಶದಲ್ಲಿ ನವೆಂಬರ್ 17ರಂದು ಆರಂಭಿಸಿದ ಒಂಬತ್ತು ದಿನಗಳ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಮಾದಕವಸ್ತುಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಶ್ರೀಲಂಕಾದ ಪ್ರಜೆಗಳು ಎಂದು ಗುರುತಿಸಿಕೊಂಡ ಆರು ಮಂದಿ ನೌಕಾ ಸದಸ್ಯರನ್ನು ಬಂಧಿಸಿದ ವಿಚಾರಣೆಗೆ ಒಳಪಡಿಸಲಾಗಿದೆ. ಪಾಕಿಸ್ತಾನದ ಕರಾಚಿಯ ಸಮುದ್ರದಾಚೆಯಿಂದ ಶ್ರೀಲಂಕಾದ ಹಡಗು 'ಶೆನಾಯಾ ದುವಾ'ಕ್ಕೆ ಈ ಮಾದಕವಸ್ತುಗಳನ್ನು ವರ್ಗಾಯಿಸಲಾಗಿತ್ತು ಎಂದು ದೋಣಿಯ ಸದಸ್ಯರು ತಿಳಿಸಿದ್ದಾರೆ. ಈ ಮಾದಕವಸ್ತುಗಳನ್ನು ಪಶ್ಚಿಮ ದೇಶಗಳು ಮತ್ತು ಆಸ್ಟ್ರೇಲಿಯಾಕ್ಕೆ ರವಾನಿಸಲು ಉದ್ದೇಶಿಸಲಾಗಿತ್ತು.
ದೋಣಿಯಲ್ಲಿ 99 ಪ್ಯಾಕೆಟ್ ಹೆರಾಯಿನ್, 20 ಸಣ್ಣ ಪ್ಯಾಕೆಟ್ಗಳಷ್ಟು ಸಿಂಥೆಟಿಕ್ ಡ್ರಗ್ಸ್, ಐದು 9 ಎಂಎಂ ಪಿಸ್ತೂಲುಗಳು ಮತ್ತು ಥುರಯಾ ಉಪಗ್ರಹ ಫೋನ್ ಸೆಟ್ ದೊರಕಿವೆ ಎಂದು ಕಾವಲು ಪಡೆ ಅಧಿಕಾರಿಗಳು ತಿಳಿಸಿದ್ದಾರೆ. ದೋಣಿಯಲ್ಲಿ ಖಾಲಿ ಇಂಧನ ಟ್ಯಾಂಕ್ ಒಳಗೆ ಈ ಮಾದಕ ವಸ್ತುಗಳನ್ನು ಅಡಗಿಸಿಡಲಾಗಿತ್ತು.

ಬಂಧಿತ ನಾವಿಕರನ್ನು ತೂತುಕುಡಿಯ ಬಂದರಿಗೆ ಕರೆದೊಯ್ಯಲಾಗಿದೆ. ಅಲ್ಲಿ ವಿವಿಧ ಸಂಸ್ಥೆಗಳು ಅವರನ್ನು ವಿಚಾರಣೆಗೆ ಒಳಪಡಿಸಿವೆ. ಪಾಕಿಸ್ತಾನವು ಉಗ್ರವಾದವನ್ನು ಮಾತ್ರ ರಫ್ತು ಮಾಡುತ್ತಿಲ್ಲ. ಆದರೆ ಮಾದಕವಸ್ತುಗಳನ್ನು ಕೂಡ ರವಾನಿಸುತ್ತದೆ. ತನ್ನ ಭಯೋತ್ಪಾದನೆಗೆ ಹಣ ಸಂಗ್ರಹಿಸಲು ಅದನ್ನು ಬಳಸಿಕೊಳ್ಳುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications