ಇನ್ಫೋಸಿಸ್ ಟೆಕ್ಕಿ ಸ್ವಾತಿ ಕೊಂದವನ ಆತ್ಮಹತ್ಯೆ ಹೈಡ್ರಾಮ
ಚೆನ್ನೈ, ಜುಲೈ 02 : ಇನ್ಫೋಸಿಸ್ ಉದ್ಯೋಗಿ ಸ್ವಾತಿ ಹತ್ಯೆ ಪ್ರಕರಣದ ಆರೋಪಿಯನ್ನು ತಿರುನಲ್ವೇಲಿಯಲ್ಲಿ ಬಂಧಿಸಲಾಗಿದೆ. ಚೆನ್ನೈನ ನುಂಗಂಬಾಕ್ಕಂ ರೈಲು ನಿಲ್ದಾಣದಲ್ಲಿ ಜೂನ್ 24 ರಂದು ಸ್ವಾತಿ ಹತ್ಯೆ ನಡೆದಿತ್ತು.
ಬಂಧಿತ ಆರೋಪಿಯನ್ನು ರಾಮ ಕುಮಾರ್ (22) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಪೊಲೀಸರು ರಾಮ ಕುಮಾರ್ ಬಂಧಿಸಲು ಸುತ್ತುವರೆದಾಗ ಕುತ್ತಿಗೆ ಕೊಯ್ದುಕೊಂಡು ಆತ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ. [ಹತ್ಯೆಯಾದ ಇನ್ಫಿ ಸ್ವಾತಿಗೆ ಮತ್ತೊಬ್ಬ ಕಪಾಳಮೋಕ್ಷ ಮಾಡಿದ್ದ!]

ಆತನನ್ನು ವಶಕ್ಕೆ ಪಡೆದ ಪೊಲೀಸರು ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ತಿರುನಲ್ವೇಲಿ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾಮ ಕುಮಾರ್ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. [ಇನ್ಫೋಸಿಸ್ ಮಹಿಳಾ ಉದ್ಯೋಗಿ ಬರ್ಬರ ಹತ್ಯೆ]
ಬಂಧಿತ ಆರೋಪಿ ತಿರುನಲ್ವೇಲಿಯಲ್ಲಿನ ಮೀನಾಕ್ಷಿಪುರಂನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದ. ಜೂನ್ 24ರಂದು ಸ್ವಾತಿ ಕೆಲಸಕ್ಕೆ ಹೋಗಲು ರೈಲಿಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ರಾಮ ಕುಮಾರ್ ಆಕೆಯನ್ನು ಹತ್ಯೆ ಮಾಡಿದ್ದ. ಈ ಪ್ರಕರಣದ ಭಾರೀ ಚರ್ಚೆಗೆ ಕಾರಣವಾಗಿತ್ತು.
ರಾಮ ಕುಮಾರ್ ಬಂಧನಕ್ಕಾಗಿ 100 ಪೊಲೀಸರ ವಿಶೇಷ ತಂಡ ರಚನೆ ಮಾಡಲಾಗಿತ್ತು, ರೈಲ್ವೆ ಪೊಲೀಸರು, ಸೈಬರ್ ಕ್ರೈಂ ಪೊಲೀಸರು ಆರೋಪಿಯ ಬಂಧನಕ್ಕೆ ಸಹಕಾರ ನೀಡಿದರು. ಹಲವು ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು, ಜೂನ್ 25ರಂದು ರಾಮ ಕುಮಾರ್ ರೇಖಾ ಚಿತ್ರ ಬಿಡುಗಡೆ ಮಾಡಲಾಗಿತ್ತು. [ಸ್ವಾತಿ ಗೆಳತಿ ಬಿಚ್ಚಿಟ್ಟ ಆಘಾತಕಾರಿ ಮಾಹಿತಿ]

ಪೊಲೀಸರಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆಗೆ ಯತ್ನಿಸಿ, ತಿರುನಲ್ವೇಲಿ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮ ಕುಮಾರ್ ಚೇತರಿಸಿಕೊಂಡ ಬಳಿಕ ಹತ್ಯೆಗೆ ನಿಖರವಾದ ಕಾರಣ ತಿಳಿದುಬರಲಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications