ಕರುಣಾನಿಧಿ ಪತ್ನಿಗೆ ಆಟಿಕೆ ಪಿಸ್ತೂಲು ತೋರಿ ಬೆದರಿಸಿದ ಬೆಂಗಳೂರಿಗನ ಬಂಧನ
ಬೆಂಗಳೂರಿನ ರಾಜೇಂದ್ರ ಪ್ರಸಾದ್ ಎಂಬಾತ ಚೆನ್ನೈನ ಆಳ್ವಾರ್ ಪೇಟ್ ನಲ್ಲಿರುವ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಮನೆಗೆ ನುಗ್ಗಿ ಪತ್ನಿ ರಾಜಾತಿ ಅಮ್ಮಾಳ್ ರನ್ನು ಆಟಿಕೆ ಪಿಸ್ತೂಲು ತೋರಿಸಿ ಹಣ-ಒಡವೆ ನೀಡುವಂತೆ ಬೆದರಿಸಿದ್ದಾನೆ.
ಚೆನ್ನೈ, ಫೆಬ್ರವರಿ 13: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಮನೆಗೆ ನುಗ್ಗಿದ್ದ ಕಳ್ಳನೊಬ್ಬನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮಕ್ಕಳಾಟಿಕೆಯ ಪಿಸ್ತೂಲು ಇಟ್ಟುಕೊಂಡಿದ್ದ ಆತ, ಕರುಣಾನಿಧಿ ಅವರ ಪತ್ನಿ ರಾಜತಿ ಅಮ್ಮಾಳ್ ಅವರನ್ನು ಬೆದರಿಸಿ, ಹಣ ನೀಡುವಂತೆ ಕೇಳಿದ್ದಾನೆ.
ಹಾಗೆ ಒಳನುಗ್ಗಿ ಬೆದರಿಸಿದವನನ್ನು ಬೆಂಗಳೂರು ಮೂಲದ ರಾಜೇಂದ್ರ ಪ್ರಸಾದ್ (30) ಎಂದು ಗುರುತಿಸಲಾಗಿದೆ. ಚೆನ್ನೈನ ಆಳ್ವಾರ್ ಪೇಟ್ ನಲ್ಲಿರುವ ಕರುಣಾನಿಧಿ ಅವರ ಮನೆಯಲ್ಲಿ ರಾಜತಿ ಅಮ್ಮಾಳ್ ಮತ್ತು ರಾಜ್ಯಸಭಾ ಸದಸ್ಯೆ ಕನಿಮೊಳಿ ಇದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಕನಿಮೊಳಿ ಅವರು ತಕ್ಷಣವೇ ಮನೆಗೆ ಹಿಂತಿರುಗಿದ್ದಾರೆ.[2ಜಿ : ಎ ರಾಜಾ, ಕನಿಮೋಳಿ, ಅಮ್ಮಾಳ್ ಗೆ ಬೇಲ್]

ಆಕೆ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಅದು ಮುಗಿದ ಕೂಡಲೇ ಮನೆಗೆ ಹಿಂತಿರುಗಿದ್ದಾರೆ. ರಾಜತಿ ಅಮ್ಮಾಳ್ ಅವರು ಕಳ್ಳನ ಬಗ್ಗೆ ತಕ್ಷಣವೇ ಸುಳಿವು ಕೊಟ್ಟಿದ್ದರಿಂದ ಆತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮನೆಯೊಳಗೆ ಹೊಕ್ಕಿದ ಕಳ್ಳ ಹಣ ನೀಡುವಂತೆ ರಾಜತಿ ಅಮ್ಮಾಳ್ ಅವರನ್ನು ಕೇಳಿದ್ದಾನೆ.
ಕೋಣೆಯಲ್ಲಿ ಹಣವಿದೆ. ಅಲ್ಲಿಂದ ತರಬೇಕು ಎಂದು ಹೇಳಿ ಹೊರಬಂದವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ನಂತರ ಅವನನ್ನು ಬಂಧಿಸಲಾಗಿದೆ. ಆತನ ಬಳಿ ಇದ್ದಿದ್ದು ಆಟಿಕೆ ಪಿಸ್ತೂಲು ಎಂದು ಗೊತ್ತಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications