ಐಸಿಸ್ ಸಂಬಂಧ: ತಮಿಳುನಾಡು, ಪುದುಚೇರಿಯಲ್ಲಿ ಎನ್ಐಎ ಶೋಧ
ಚೆನ್ನೈ, ಜೂ. 10; ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಬಂಧ ಹೊಂದಿದ್ದಾರೆ ಎನ್ನಲಾದ ಕೆಲವರ ಬಗ್ಗೆ ಮಾಹಿತಿ ಕಲೆ ಹಾಕಲು ಗುರುವಾರ ಎನ್ಐಎ ತಮಿಳುನಾಡು ಹಾಗೂ ಪುದುಚೇರಿಯ ಹಲವು ಪ್ರದೇಶಗಳಲ್ಲಿ ಶೋಧ ನಡೆಸಿದೆ.
ತಮಿಳುನಾಡಿನ ಚೆನ್ನೈ, ಮೈಲಾಡುತುರೈ, ಪುದುಚೇರಿಯ ಕಾರೈಕಲ್ಗೆ ಸೇರಿದ 9 ಪ್ರದೇಶಗಳಲ್ಲಿ ಶೋಧ ನಡೆಸಿ ಹಲವು ಮಹತ್ವದ ದಾಖಲೆಗಳು, ಡಿಜಿಟಲ್ ಸಾಧನಗಳು ಹಾಗೂ ಹಲವು ಕೈಬರಹದ ಟಿಪ್ಪಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೈಲಾಡುತುರೈನ ಎಂ.ಡಿ. ಸಾಧಿಕ್ ಬಚ್ಚಾ ಅಲಿಯಾಸ್ ಐಸಿಎಎಂಎ ಸಾಧಿಕ್ ಸೇರಿದಂತೆ ಇನ್ನೂ ನಾಲ್ವರು ಆರೋಪಿಗಳು ಫೆಬ್ರವರಿಯಲ್ಲಿ ಕೆಲವು ಜನರು ಹಾಗೂ ಪೊಲೀಸರ ಕೊಲೆಗೆ ಸಂಚು ರೂಪಿಸಿದ್ದರು. ವಾಹನ ತಪಾಸಣೆಯ ಸಂದರ್ಭದಲ್ಲಿ ಅವರನ್ನು ಕೊಲೆ ಮಾಡಲು ಕೂಡ ಹೊಂಚು ಹಾಕಿದ್ದರು.

ಆರೋಪಿಗಳು ಖಿಲಾಫತ್ ಪಾರ್ಟಿ ಆಫ್ ಇಂಡಿಯಾ, ಖಿಲಾಫತ್ ಫ್ರಂಟ್ ಆಫ್ ಇಂಡಿಯಾ. ಇಂಟಲೆಕ್ಚುವಲ್ ಸ್ಟೂಡೆಂಟ್ಸ್ ಆಫ್ ಇಂಡಿಯಾ ಎಂಬ ಸಂಘಟನೆಗಳನ್ನು ರೂಪಿಸಿಕೊಂಡು ನಿಷೇಧಿತ ಸಂಘಟನೆಗಳಾದ ಐಸಿಸ್ ಹಾಗೂ ಅಲ್ಖೈದಾದೊಂದಿಗೆ ಸಂಬಂಧ ಹೊಂದುವ ಮೂಲಕ ದ್ವೇಷವನ್ನು ಹರಡಲು ಪ್ರಚೋದನೆ ಮಾಡುತ್ತಿದ್ದರು ಎಂಬ ಆರೋಪವಿದೆ.

ಮೈಲಾಡುತುರೈನಲ್ಲಿ ಮೊದಲಿಗೆ ಪ್ರಕರಣ ದಾಖಲಿಸಲಾಯಿತು ನಂತರ ಏಪ್ರಿಲ್ನಲ್ಲಿ ಮತ್ತೆ ಎನ್ಐಎ ಮತ್ತೆ ಕೇಸು ದಾಖಲಿಸಿತ್ತು. ಈಗಿನ ಶೋಧ ಕಾರ್ಯದಲ್ಲಿಎನ್ಐಎ 16 ಡಿಜಿಟಲ್ ಸಾಧನಗಳು, 6 ಇತರ ಶಾಸ್ತ್ರಸ್ತ್ರಗಳು, ರಾಡ್ಗಳು, ಚಾಕುಗಳು, ಹಲವು ದಾಖಲೆಗಳು ಮತ್ತು ಕೈಬರಹದ ಟಿಪ್ಪಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ತಿಂಗಳು ಅಲ್ಖೈದಾ ಮತ್ತು ಐಸಿಸ್ ಬೆಂಬಲಿಗನಾದ ಅನ್ಸರುಲ್ಲಾ ಗುಂಪಿನ ಸಂಸ್ಥಾಪಕನ ಮೇಲೆ ಕೇಸು ದಾಖಲಿಸಿತ್ತು. ಸದ್ಯ ಈಗ ದಿವಾನ್ ಮುಜಿಪೀರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 120B (ಕ್ರಿಮಿನಲ್ ಪಿತೂರಿ) ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ (UAPA) ನಿಬಂಧನೆಗಳ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಇದೇ ಪ್ರಕರಣದಲ್ಲಿ ಪ್ರಕರಣದಲ್ಲಿ ಮುಜಿಪೀರ್ 12ನೇ ಆರೋಪಿಯಾಗಿದ್ದಾನೆ.
Recommended Video
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications