ಇಸ್ರೋದಿಂದ ರಿಸ್ಯಾಟ್-2ಬಿ ರೆಡಾರ್ ಉಪಗ್ರಹ ಉಡಾವಣೆ ಯಶಸ್ವಿ
ಶ್ರೀಹರಿಕೋಟ, ಮೇ 22: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ- ಇಸ್ರೋ ರಿ ಸ್ಯಾಟ್ 2 ಬಿ ಎನ್ನುವ ರಾಡಾರ್ ಇಮೇಜಿಂಗ್ ಭೂ ಪರಿವೀಕ್ಷಣೆ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಪಿಎಸ್ ಎಲ್ ವಿ - ಸಿ 46 ಉಡಾವಣಾ ವಾಹಕದ ಮೂಲಕ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಲಾಗಿದೆ. ಹವಾಮಾನ ವೈಪರೀತ್ಯದ ಸಂದರ್ಭ ಎದುರಾದಲ್ಲಿ ಮಾತ್ರ ಈ ವೇಳಾಪಟ್ಟಿ ಬದಲಾಗಲಿದೆ ಎಂದು ಇಸ್ರೋ ಮೂಲಗಳು ತಿಳಿಸಿದೆ.
ಭಾರತವು ಅತ್ಯಾಧುನಿಕ ಮೋಡ ನಿರೋಧಕ ಗೂಢಾಚಾರ್ಯ ರೆಡಾರ್ ಉಪಗ್ರಹದ ಯಶಸ್ವಿ ಪರೀಕ್ಷೆ ನಡೆಸಿ ಪ್ರತಿಕೂಲ ವಾತಾವರಣವನ್ನು ಹಾಗೂ ಮೋಡವಿರುವಾಗಲೂ ವಿರೋದಿ ಪಡೆಗಳ ಯುದ್ಧ ವಿಮಾನ ಕ್ಷಿಪಣಿ ಹಾಗೂ ಇತರೆ ವೈರುಧ್ಯಗಳನ್ನು ಈ ರೆಡಾರ್ ಉಪಗ್ರಹ ಪತ್ತೆ ಹಚ್ಚಲಿದೆ.
ಇದರಿಂದ ಸೇನಾ ಕಾರ್ಯಾಚರಣೆ ಇನ್ನಷ್ಟು ಸುಲಭವಾಗಲಿದೆ, ಹಾಗೂ ಎದುರಾಳಿಗಳ ಚಲನ ವಲನಗಳ ಮೇಲೆ ನಿಗಾ ಇಡಲು ಸುಲಭವಾಗಲಿದೆ.ಇಸ್ರೋ ಈ ಉಪಗ್ರಹವನ್ನು ಪರೀಕ್ಷೆ ನಡೆಸಿದ್ದು, ಪಿಎಸ್ಎಲ್ವಿ ಮೂಲಕ 615 ಕೆಜಿಯ ರಿಸ್ಯಾಟ್ 2ಬಿ ಈ ಉಪಗ್ರಹವನ್ನು ನಭಕ್ಕೆ ಹಾರಿ ಬಿಡಲಾಗಿದೆ.
ಏತನ್ಮಧ್ಯೆ ಇಸ್ರೋದಲ್ಲಿ ಪ್ರಯೋಗವು ಮೋಡ ಹಾಗೂ ಸರ್ಜಿಕಲ್ ಸ್ಟ್ರೈಕ್ ವಿರುದ್ಧ ಇತ್ತೀಚೆಗೆ ಪ್ರಧಾನಿ ಮೋದಿ ಹೇಳಿಕೆಯನ್ನು ಸಮರ್ಥಿಸಿಕೊಂಡಂತಾಗಿದೆ.ಇತ್ತೀಚೆಗೆ ಇಂಗ್ಲಿಷ್ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಮೋದಿ ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್ಗೆ ಪ್ರತಿಕೂಲ ವಾತಾವರಣ ಹಾಗೂ ಮೋಡ ನೆರವಾಗಿದ್ದನ್ನು ಉಲ್ಲೇಖಿಸಿದ್ದರು.

ಮೋಡವಿದ್ದರಿಂದ ಪಾಕಿಸ್ತಾನದ ರೆಡಾರ್ಗಳಿಗೆ ಭಾರತದ ಯುದ್ಧ ವಿಮಾನವನ್ನು ಪತ್ತೆ ಹಚ್ಚಲಾಗಲಿಲ್ಲ, ಇದೇ ಕಾರಣಕ್ಕೆ ಮೋಡವಿದ್ದರೂ ಸರ್ಜಿಕಲ್ ಸ್ಟ್ರೈಕ್ ನಡೆಸಲು ಸೂಚನೆ ನೀಡಿದ್ದೆ ಎಂದು ಮೋದಿ ಹೇಳಿಕೊಂಡಿದ್ದರು.
ಆದರೆ ಈ ಹೇಳಿಕೆ ಸಾಮಾಜಿಕ ಜಾಲತಾಣ, ರಾಜಕೀಯ ವಲಯಗಳಲ್ಲಿ ಟೀಕೆ ಹಾಗೂ ಟ್ರೋಲ್ಗೆ ಕಾರಣವಾಗಿತ್ತು. ಮೋದಿ ಹಾಗೂ ಮೋಡಕ್ಕೆ ಸಂಬಂಧಿಸಿ ಸಾಕಷ್ಟು ಕಾರ್ಟೂನ್ಗಳು ಕೂಡ ರಚನೆಯಾಗಿದ್ದವು. ಆದರೆ ವೈಜ್ಞಾನಿಕವಾಗಿ ಮೋದಿ ಹೇಳಿಕೆ ನಿಜ ಎನ್ನುವುದನ್ನು ಇಸ್ರೋ ಪರೋಕ್ಷವಾಗಿ ಸಮರ್ಥಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications