ಇಸ್ರೋದಿಂದ ರಿಸ್ಯಾಟ್-2ಬಿ ರೆಡಾರ್ ಉಪಗ್ರಹ ಉಡಾವಣೆ ಯಶಸ್ವಿ
ಶ್ರೀಹರಿಕೋಟ, ಮೇ 22: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ- ಇಸ್ರೋ ರಿ ಸ್ಯಾಟ್ 2 ಬಿ ಎನ್ನುವ ರಾಡಾರ್ ಇಮೇಜಿಂಗ್ ಭೂ ಪರಿವೀಕ್ಷಣೆ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಪಿಎಸ್ ಎಲ್ ವಿ - ಸಿ 46 ಉಡಾವಣಾ ವಾಹಕದ ಮೂಲಕ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಲಾಗಿದೆ. ಹವಾಮಾನ ವೈಪರೀತ್ಯದ ಸಂದರ್ಭ ಎದುರಾದಲ್ಲಿ ಮಾತ್ರ ಈ ವೇಳಾಪಟ್ಟಿ ಬದಲಾಗಲಿದೆ ಎಂದು ಇಸ್ರೋ ಮೂಲಗಳು ತಿಳಿಸಿದೆ.
ಭಾರತವು ಅತ್ಯಾಧುನಿಕ ಮೋಡ ನಿರೋಧಕ ಗೂಢಾಚಾರ್ಯ ರೆಡಾರ್ ಉಪಗ್ರಹದ ಯಶಸ್ವಿ ಪರೀಕ್ಷೆ ನಡೆಸಿ ಪ್ರತಿಕೂಲ ವಾತಾವರಣವನ್ನು ಹಾಗೂ ಮೋಡವಿರುವಾಗಲೂ ವಿರೋದಿ ಪಡೆಗಳ ಯುದ್ಧ ವಿಮಾನ ಕ್ಷಿಪಣಿ ಹಾಗೂ ಇತರೆ ವೈರುಧ್ಯಗಳನ್ನು ಈ ರೆಡಾರ್ ಉಪಗ್ರಹ ಪತ್ತೆ ಹಚ್ಚಲಿದೆ.
ಇದರಿಂದ ಸೇನಾ ಕಾರ್ಯಾಚರಣೆ ಇನ್ನಷ್ಟು ಸುಲಭವಾಗಲಿದೆ, ಹಾಗೂ ಎದುರಾಳಿಗಳ ಚಲನ ವಲನಗಳ ಮೇಲೆ ನಿಗಾ ಇಡಲು ಸುಲಭವಾಗಲಿದೆ.ಇಸ್ರೋ ಈ ಉಪಗ್ರಹವನ್ನು ಪರೀಕ್ಷೆ ನಡೆಸಿದ್ದು, ಪಿಎಸ್ಎಲ್ವಿ ಮೂಲಕ 615 ಕೆಜಿಯ ರಿಸ್ಯಾಟ್ 2ಬಿ ಈ ಉಪಗ್ರಹವನ್ನು ನಭಕ್ಕೆ ಹಾರಿ ಬಿಡಲಾಗಿದೆ.
ಏತನ್ಮಧ್ಯೆ ಇಸ್ರೋದಲ್ಲಿ ಪ್ರಯೋಗವು ಮೋಡ ಹಾಗೂ ಸರ್ಜಿಕಲ್ ಸ್ಟ್ರೈಕ್ ವಿರುದ್ಧ ಇತ್ತೀಚೆಗೆ ಪ್ರಧಾನಿ ಮೋದಿ ಹೇಳಿಕೆಯನ್ನು ಸಮರ್ಥಿಸಿಕೊಂಡಂತಾಗಿದೆ.ಇತ್ತೀಚೆಗೆ ಇಂಗ್ಲಿಷ್ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಮೋದಿ ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್ಗೆ ಪ್ರತಿಕೂಲ ವಾತಾವರಣ ಹಾಗೂ ಮೋಡ ನೆರವಾಗಿದ್ದನ್ನು ಉಲ್ಲೇಖಿಸಿದ್ದರು.

ಮೋಡವಿದ್ದರಿಂದ ಪಾಕಿಸ್ತಾನದ ರೆಡಾರ್ಗಳಿಗೆ ಭಾರತದ ಯುದ್ಧ ವಿಮಾನವನ್ನು ಪತ್ತೆ ಹಚ್ಚಲಾಗಲಿಲ್ಲ, ಇದೇ ಕಾರಣಕ್ಕೆ ಮೋಡವಿದ್ದರೂ ಸರ್ಜಿಕಲ್ ಸ್ಟ್ರೈಕ್ ನಡೆಸಲು ಸೂಚನೆ ನೀಡಿದ್ದೆ ಎಂದು ಮೋದಿ ಹೇಳಿಕೊಂಡಿದ್ದರು.
ಆದರೆ ಈ ಹೇಳಿಕೆ ಸಾಮಾಜಿಕ ಜಾಲತಾಣ, ರಾಜಕೀಯ ವಲಯಗಳಲ್ಲಿ ಟೀಕೆ ಹಾಗೂ ಟ್ರೋಲ್ಗೆ ಕಾರಣವಾಗಿತ್ತು. ಮೋದಿ ಹಾಗೂ ಮೋಡಕ್ಕೆ ಸಂಬಂಧಿಸಿ ಸಾಕಷ್ಟು ಕಾರ್ಟೂನ್ಗಳು ಕೂಡ ರಚನೆಯಾಗಿದ್ದವು. ಆದರೆ ವೈಜ್ಞಾನಿಕವಾಗಿ ಮೋದಿ ಹೇಳಿಕೆ ನಿಜ ಎನ್ನುವುದನ್ನು ಇಸ್ರೋ ಪರೋಕ್ಷವಾಗಿ ಸಮರ್ಥಿಸಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications