ಐಟಿ ಕಾಟಕ್ಕೆ ಜೈಲಲ್ಲಿ ಶಶಿಕಲಾಗಿಲ್ಲ ನಿದ್ದೆ, ಸೇರುತ್ತಿಲ್ಲ ಮುದ್ದೆ!
ಚೆನ್ನೈ, ನವೆಂಬರ್ 11: ಚೆನ್ನೈಯಲ್ಲಿ ಶಶಿಕಲಾ ಅವರಿಗೆ ಸೇರಿದ ಸ್ಥಳಗಳ ಮೇಲೆ ನ.9 ರಂದು ನಡೆದ ಆದಾಯ ತೆರಿಗೆ ದಾಳಿ ಇಂದೂ(ನ.11) ಮುಂದುವರಿದಿದೆ.
1200 ಕೋಟಿ ಮೌಲ್ಯದ ಆಸ್ತಿ ದಾಖಲೆಗಳು, 2.5 ಕೋಟಿ ರೂ. ಮೌಲ್ಯದ 8.5 ಕೆ.ಜಿ ಚಿನ್ನ 6 ಕೋಟಿ ರೂ. ಮೌಲ್ಯದ ನಗದು ಹಣ ಜೊತೆಗೆ ಬೆಲೆಬಾಳುವ ವಜ್ರಾಭರಣಗಳು ಐಟಿ ದಾಳಿಯ ಸಮಯದಲ್ಲಿ ಪತ್ತೆಯಾಗಿವೆ ಎಂದು ಕೆಲವು ಮೂಲಗಳು ತಿಳಿಸಿವೆ. ಆದರೆ ಈ ಕುರಿತು ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ.
ಆದಾಯ ಮೀರಿ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಅವರಿಗೆ ಮೂರು ದಿನದಿಂದ ನಿದ್ದೆಯೂ ಇಲ್ಲ, ಊಟವೂ ಸೇರುತ್ತಿಲ್ಲ! ಏಕೆಂದರೆ ಈ ದಾಳಿ ನಡೆದಿದ್ದೇ ಶಶಿಕಲಾ ನಟರಾಜನ್ ಅವರನ್ನು ಗುರಿಯಾಗಿಸಿ!

ಶಶಿಕಲಾ ಅವರಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನೂ, ಅಕ್ರಮ ಹಣವನ್ನೂ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂಬುದು ತಿಳಿದುಬಂದಿದೆ. ಆದರೆ ಐಟಿ ಅಧಿಕಾರಿಗಳಿಗೆ ಇದುವರೆಗೂ ಸಿಕ್ಕ ಹಣದ ಮೊತ್ತವೆಷ್ಟು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಯಾವ್ಯಾವುದೋ ಸ್ಥಳಗಳಲ್ಲಿ ಅಡಗಿಸಿಟ್ಟಿದ್ದ ಚಿನ್ನ ಮತ್ತಿತರ ಬೆಲೆಬಾಳುವ ವಸ್ತುಗಳು ಐಟಿ ಅಧಿಕಾರಿಗಳಿಗೆ ಸಿಕ್ಕಿವೆ.
ಇಂದೂ ಸಹ ಹಲವೆಡೆಗಳಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. 'ತೆರಿಗೆ ವಂಚಿಸಿದ ಅನುಮಾನದ ಮೇಲಷ್ಟೇ ನಾವು ದಾಳಿ ನಡೆಸಿದ್ದೇವೆ. ಅವರ ಬಳಿ ಇರುವ ಒಟ್ಟು ಹಣಗಳ ಲೆಕ್ಕವನ್ನು ಬಹಿರಂಗ ಪಡಿಸುವುದಕ್ಕೆ ಸಾಧ್ಯವಿಲ್ಲ' ಎಂದು ಐಟಿ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ಶಶಿಕಲಾ ನಟರಾಜನ್ ಮತ್ತವರ ಸಂಬಂಧಿ ಟಿಟಿವಿ ದಿನಕರನ್ ಅವರ ವಾಣಿಜ್ಯ ವ್ಯವಹಾರ ಸಂಸ್ಥೆಗಳು, ಅವರ ಸಂಬಂಧಿಕರ ಮನೆ, ಕಚೇರಿ, ಜಯಾ ಟಿವಿ ಕಚೇರಿ ಸೇರಿದಂತೆ 187 ಕಡೆಗಳಲ್ಲಿ ನ.9 ರಂದು ದಾಳಿ ನಡೆದಿತ್ತು. 2000 ಕ್ಕೂ ಅಧಿಕ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದರು. 'ಆಪರೇಶನ್ ಕ್ಲೀನ್ ಮನಿ' ಎಂಬ ಯೋಜನೆಯ ಅಡಿಯಲ್ಲಿ ಐಟಿ ಇಲಾಖೆ ಈ ದಾಳಿ ನಡೆಸಿತ್ತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications